KRS Dam: ಐತಿಹಾಸಿಕ ದಾಖಲೆ ಬರೆದ ಕೆಆರ್ಎಸ್ ಡ್ಯಾಂ; ಇದುವರೆಗೂ ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳು, ಭರ್ತಿಯಾಗದ ವರ್ಷಗಳ ಪಟ್ಟಿ
KRS Dam: ಭಾರೀ ಮಳೆ ಮುಂದುವರೆದ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗುತ್ತಲಿದೆ. ಮತ್ತೊಂದೆಡೆ ಈಗಾಗಲೇ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್ಎಸ್ ಅಣೆಕಟ್ಟು ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ಜೂನ್ 30) ಬಾಗಿನ ಅರ್ಪಣೆ ಮಾಡಲಿದ್ದಾರೆ. ಹಾಗಾದ್ರೆ ಇದುವರೆಗೂ ಎಷ್ಟು ಬಾರಿ ಯಾರೆಲ್ಲಾ ಬಾಗಿನ ಅರ್ಪಿಸಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಬಾರಿ ರಾಜ್ಯಕ್ಕೆ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ ಕೊಟ್ಟು ಆರ್ಭಟಿಸಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆ, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಮತ್ತೊಂದೆಡೆ ಕೆಲವು ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತವನ್ನು ತಲುಪಿದ್ದರೆ, ಮತ್ತೊಂದೆಡೆ ಕೆಆರ್ಎಸ್ (ಕೃಷ್ಣರಾಜ ಸಾಗರ) ತುಂಬಿ ಬಾಗಿನ ಅರ್ಪಣೆಗೆ ಸಿದ್ಧವಾಗಿದೆ.

ಕಳೆದ ಬಾರಿಯೂ ಕೂಡ ಮುಂಗಾರು ಆರ್ಭಟಕ್ಕೆ ಈ ಜಲಾಶಯ ತುಂಬಿದಾಗ ಸಿಎಂ ಸಿದ್ದರಾಮಯ್ಯ ಅವರೇ ಬಾಗಿನ ಅರ್ಪಿಸಿದ್ದು, 2025ರಲ್ಲೂ ಕೂಡ ಅವರಿಗೇ ಈ ಅದೃಷ್ಟ ಇಲಿದುಬಂದಿದೆ. ಹಾಗಾದ್ರೆ ಇದುವರೆಗೂ ಯಾವ್ಯಾವ ವರ್ಷ ಯಾವ ದಿನಾಂಕದಂದು ಯಾರೆಲ್ಲಾ ಬಾಗಿನ ಅರ್ಪಣೆ ಮಾಡಿದ್ದಾರೆ ಹಾಗೂ ಯಾವಗೆಲ್ಲಾ ಡ್ಯಾಂ ಭರ್ತಿ ಆಗಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಇಲ್ಲಿ ನೀಡಲಾಗಿದೆ.
ಯಾವಾಗ ಯಾರಿಂದ ಬಾಗಿನ ಅರ್ಪಣೆ?
2005 ಆಗಸ್ಟ್ 8 - ಎನ್.ಧರ್ಮಸಿಂಗ್
2006 ಜುಲೈ 26 - ಎಚ್ಡಿ ಕುಮಾರಸ್ವಾಮಿ
2007 ಜುಲೈ 20 - ಎಚ್ಡಿ ಕುಮಾರಸ್ವಾಮಿ
2008 ಆಗಸ್ಟ್ 15 - ಬಿಎಸ್ ಯಡಿಯೂರಪ್ಪ
2009 ಜುಲೈ 24 - ಬಿಎಸ್ ಯಡಿಯೂರಪ್ಪ
2010 ಅಕ್ಟೋಬರ್ 18- ಬಿಎಸ್ ಯಡಿಯೂರಪ್ಪ
2011 ಆಗಸ್ಟ್ 17 - ಡಿ.ವಿ.ಸದಾನಂದಗೌಡ
2013 ಆಗಸ್ಟ್ 1 - ಸಿದ್ದರಾಮಯ್ಯ
2014 ಆಗಸ್ಟ್ 6 - ಸಿದ್ದರಾಮಯ್ಯ
2018 ಜುಲೈ 20 - ಎಚ್ಡಿ ಕುಮಾರಸ್ವಾಮಿ
2019 ಆಗಸ್ಟ್ 29 - ಬಿಎಸ್ ಯಡಿಯೂರಪ್ಪ
2020 ಆಗಸ್ಟ್ 21 - ಬಿಎಸ್ ಯಡಿಯೂರಪ್ಪ
2021 ನವೆಂಬರ್ 2 - ಬಸವರಾಜ ಬೊಮ್ಮಾಯಿ
2022 ಜುಲೈ 20 - ಬಸವರಾಜ ಬೊಮ್ಮಾಯಿ
2024 ಜುಲೈ 29 - ಸಿದ್ದರಾಮಯ್ಯ
2025 ಜೂನ್ 30ರಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ
ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳ ವಿವರ: ಮುಖ್ಯಮಂತ್ರಿಗಳಾದ ಅವಧಿಯಲ್ಲಿ ಅತೀ ಹೆಚ್ಚು ಬಾಗಿನ ಅರ್ಪಿಸಿದವರು ಬಿಎಸ್ ಯಡಿಯೂರಪ್ಪ ಆಗಿದ್ದಾರೆ. ಇವರು 5 ಬಾರಿ ಬಾಗಿನ ಅರ್ಪಿಸಿದ್ದಾರೆ. ಇನ್ನೂ ನಾಳೆ ಅಂದರೆ 2025 ಜೂನ್ 30ಕ್ಕೆ ಸಿಎಂ ಸಿದ್ದರಾಮಯ್ಯ ಸರದಿ ಬಂದಿದ್ದು, ನಾಲ್ಕನೇ ಬಾರಿ ಬಾಗಿನ ಅರ್ಪಣೆ ಮಾಡುವ ಮೂಲಕ ಎರಡನೇ ಸ್ಥಾನ ಅಲಂಕರಿಸಲಿದ್ದಾರೆ. ಧರ್ಮಸಿಂಗ್ 1, ಎಚ್ಡಿ ಕುಮಾರಸ್ವಾಮಿ 3, ಡಿವಿ ಸದಾನಂದಗೌಡ 1, ಬಸವರಾಜ ಬೊಮ್ಮಾಯಿ 2 ಬಾರಿ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ್ದಾರೆ.
ಕೆಆರ್ಎಸ್ ಜಲಾಯಶಯ ಭರ್ತಿಯಾಗದ ವರ್ಷಗಳು: ಕೃಷ್ಣರಾಜ ಸಾಗರ ಜಲಾಶಯ (ಕೆಆರ್ಎಸ್)ವು 1986, 1987, 1997, 1998, 2001, 2002, 2003, 2015, 2017, 2023ರಲ್ಲಿ ಭರ್ತಿಯಾಗಿಲ್ಲ. ಇನ್ನುಳಿದಂತೆ 2024 ಹಾಗೂ 2025 ಸತತ ಎರಡೂ ವರ್ಷವೂ ಭರ್ತಿಯಾಗಿ ರೈತರ ಮುಖದಲ್ಲಿ ಮಂದಾಹಾಸ ಮೂಡಿಸಿದೆ.
ಕೆಆರ್ಎಸ್ ಡ್ಯಾಂ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿ ಆಗಿದೆ. ಈ ಹಿನ್ನೆಲೆ ಸೋಮವಾರ (ಜೂನ್ 30) ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿ ಜೂನ್ನಲ್ಲಿ ಬಾಗಿನ ಅರ್ಪಿಸಿದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸೋಮವಾರ ಬೆಳಗ್ಗೆ 11:30ರ ಅಭಿಜಿನ್ ಮೂಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಯಲಿದ್ದು, ಈಗಾಗಲೇ ಪೂಜೆಗೆ ಭರ್ಜರಿ ಸಿದ್ಧತೆ ನಡೆದಿದೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications