ಆರ್ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆ ಇನ್ನು ಬಚ್ಚಾ: ಕೆಎಸ್ ಈಶ್ವರಪ್ಪ
ಕಲಬುರಗಿ, ಮೇ 30: ಆರ್ಎಸ್ಎಸ್ ಹಾಗೂ ಬಜರಂಗ ದಳವನ್ನು ನಿಷೇಧದ ಬಗ್ಗೆ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವನಿನ್ನು ಬಚ್ಚಾ ಎಂದು ಹೇಳಿದ್ದಾರೆ.
ಆರ್ಎಸ್ಎಸ್ ದೇಶಭಕ್ತರ ಸಂಘಟನೆಯಾಗಿದೆ. ಅದು ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ. ಆದರೂ ಆರ್ಎಸ್ಎಸ್ ನಿಷೇಧಿಸುವುದಾಗಿ ಹೇಳುತ್ತಿರುವ ಪ್ರಿಯಾಂಕ್ ಖರ್ಗೆ ಇನ್ನೂ ಬಚ್ಚಾ. ಅವನೇನು ಮಾಡಲು ಸಾಧ್ಯ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಆರ್ಎಸ್ಎಸ್ ನಿಷೇಧ ಮಾಡುವುದಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮುಗಿಸಿದ್ದಾರೆ. ಅವರ ಹೇಳಿಕೆಯ ಬಳಿಕವೂ ಸಚಿವ ಪ್ರಿಯಾಂಕ್ ಖರ್ಗೆ ಪದೇ ಪದೇ ನಿಷೇಧ ಮಾಡುತ್ತೇವೆ ಎಂದು ಹೇಳುತ್ತಿರುವುದು ಸರಿಯಲ್ಲ. ಆರ್ಎಸ್ಎಸ್ ದೇಶದ್ರೋಹಿಗಳಿಗೆ ಸಿಂಹ ಸ್ವಪ್ನವಾಗಿದೆ. ಹಾಗಾಗಿಯೇ ದೇಶದಾದ್ಯಂತ ಕೋಟ್ಯಂತರ ಕಾರ್ಯಕರ್ತರನ್ನು ಹೊಂದಿದೆ. ಇಲ್ಲಿ ಸಂಘವನ್ನು ನಿಷೇಧಿಸುತ್ತೇವೆ ಎಂದು ಹೇಳುವ ಮೂಲಕ ಪ್ರಿಯಾಂಕ್ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ ತಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಮಾದರಿಯಾಗಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸ್ಥಾನದಲ್ಲಿದ್ದು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರೇ ಇಂತಹ ಮಾತನಾಡಿಲ್ಲ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರೂ ಹೇಳಿದ ನಂತರವೂ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ. ಪ್ರಿಯಾಂಕ್ ಖರ್ಗೆ ಅವರ ತಂದೆಯವರ ಸಲಹೆ ಮಾರ್ಗದರ್ಶನ ಪಡೆದುಕೊಂಡು ಸಚಿವ ಸ್ಥಾನ ನಿರ್ವಹಿಸಲಿ, ರಾಜಕಾರಣದಲ್ಲಿ ಮುನ್ನಡೆಯಲಿ ಎಂದು ಈಶ್ವರಪ್ಪ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನವೇ ಐದೂ ಗ್ಯಾರಂಟಿಗಳ ಅನುಷ್ಠಾನಕ್ಕೆ ಸೂಚನೆ ನೀಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಹೇಳಿದ್ದರು. ಇದೀಗ ಎರಡು ಕ್ಯಾಬಿನೆಟ್ ಸಭೆಗಳಾದರೂ ಗ್ಯಾರಂಟಿಗಳಿಗೆ ಅನುಮೋದನೆಯೂ ಸಿಕ್ಕಿಲ್ಲ. ನಾವು ಸುಖಾಸುಮ್ಮನೆ ಎಲ್ಲವನ್ನೂ ಟೀಕಿಸುವುದಿಲ್ಲ. ಒಂದು ತಿಂಗಳು ಕಾಯ್ದು ನೋಡುತ್ತೇವೆ. ಆಗಲೂ ಜಾರಿಯಾಗದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಈಶ್ವರಪ್ಪ ತಿಳಿಸಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications