ಕೇಡಿ ಸಿದ್ದು, ಕಳ್ಳ ಸಚಿವ ಸಂಪುಟ: ಕಳ್ಳ ಎಂದಿದ್ದರೂ‌ ಕಳ್ಳನೇ ಎಂದು ಈಶ್ವರಪ್ಪ ಹೇಳಿದ್ದು ಯಾರಿಗೆ?

ಶಿವಮೊಗ್ಗ, ನವೆಂಬರ್‌ 24: ಡಿ ಕೆ ಶಿವಕುಮಾರ್‌ ಸಿಬಿಐ ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಎಂದಿದ್ದರೂ‌ ಕಳ್ಳನೇ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 135 ಸೀಟ್ ಬಂದಿದೆ ಅಂತ ಮಾಡ ಬಾರದ್ದನ್ನೆಲ್ಲಾ ಮಾಡ್ತಿದ್ದಾರೆ. 23 ಕೋಟಿ ಇದ್ದ ಡಿ ಕೆ ಶಿವಕುಮಾರ್‌ ಗೆ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಸಿಬಿಐಗೆ ಕೊಟ್ಟಿದ್ದರು. ನ್ಯಾಯಾಲಯಕ್ಕೆ ಹೋದ್ರು ನ್ಯಾಯಾಲಯ ತಿರಸ್ಕಾರ ಮಾಡ್ತು. ಇದು ಈಡೀ ದೇಶಕ್ಕೆ ಗೊತ್ತು. ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿದೆ.‌ ಇಂತಹ ಸಂದರ್ಭದಲ್ಲಿ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ ಎಂದು ಕಿಡಿಕಾರಿದರು.

ks-eshwarappa-lashed-out-at-dk-shivakumar

ಕೇಡಿ ಸಿದ್ದು ಅವರ ದರೋಡೆಕೋರರ ತಂಡ ದುರುಪಯೋಗ ಮಾಡಿಕೊಂಡಿದೆ. ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟು‌ ನಂತರ ಸಚಿವ ಸಂಪುಟಕ್ಕೆ ಸೇರಿದರು ನನ್ನ ಮೇಲೆ ಆಪಾದನೆ ಬಂತು‌ ನಾನು ರಾಜೀನಾಮೆ ಕೊಟ್ಟೆ.‌ ಸುಪ್ರೀಂ ಕೋರ್ಟ್ ತಜ್ಞರು ಹೇಳ್ತಿದ್ದಾರೆ, ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ‌ ಇದೆ. ಆದರೆ ಹಿಂಪಡೆಯಲು ಅನುಮತಿ ಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ.? ಎಂದು ಪ್ರಶ್ನಿಸಿದ್ದಾರೆ.

ಸಚಿವ ಸಂಪುಟ ದುರ್ಬಳಕೆ ‌ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿ ಕೆ ಶಿವಕುಮಾರ್. ನಮಗೂ ಮುಂದೆ ಇಂತಹ‌ ಸ್ಥಿತಿ ಬರಬಹುದು ಅಂತ ಅವರ ಕೇಂದ್ರದ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಒಪ್ಪಿಕೊಂಡಿರಬಹುದು. ಸಿದ್ದರಾಮಯ್ಯ ಅವರಿಗೆ ಖುರ್ಚಿ ಮುಖ್ಯವೇ ಹೊರತು ನ್ಯಾಯವಲ್ಲ. ಸಂವಿಧಾನದ ಬಗ್ಗೆ ಉದ್ದುದ್ದ ಭಾಷಣ ಮಾಡುವ ನಾಯಕರಿಗೆ ಇದು ಗೊತ್ತಿಲ್ವಾ..? ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು.‌

ದೇಶದಲ್ಲಿ ಕಾಂಗ್ರೆಸ್ ನ್ನ ಜನ ಕಿತ್ತು ಹಾಕಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಮೋಸ ಮಾಡಿ ಅಧಿಕಾರಕ್ಕೆ ‌ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ದಿ ಕಲಿಸುತ್ತಾರೆ. ಸಚಿವ ಸಂಪುಟಕ್ಕೆ ಬೆಲೆ ಇಲ್ಲ ಅಂತಾ ಇವರು ತೀರ್ಮಾನ ಮಾಡಿದ್ರು. ಸಂವಿಧಾನಕ್ಕೆ ಬೆಲೆ ಇದೆ ಅಲ್ಲಿ ಸರಿಯಾದ ತೀರ್ಪು ಬರುತ್ತದೆ. ಸಿಬಿಐ ತನಿಖೆ ಹಿಂಪಡೆಯುವುದನ್ನೇ ವಾಪಸ್ ಪಡೆಯಬೇಕು. ಗೂಂಡಾಗಳಿಗೆ ರಕ್ಷಣೆ ಕೊಡುವ ಸರಕಾರ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.

ks-eshwarappa-lashed-out-at-dk-shivakumar

9 ವರ್ಷದ ಹಿಂದೆ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆ ಮಾಡ್ತೀನಿ ಅಂದ್ರು ಮಾಡಲಿಲ್ಲ. ಆಗ ಮಾಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಆಗ ಜಾತಿ‌ಜನಗಣತಿ‌ ವರದಿ ಬಿಡುಗಡೆ ಮಾಡಿದ್ದರೆ ಜಾತಿ ಜಾತಿ ನಡುವೆ ಸಂಘರ್ಷ ಆಗ್ತಿರಲಿಲ್ಲ. ಜಾತಿ ಜನಗಣತಿಯ ಸಂಘರ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ. ಮೂಲ ಪ್ರತಿ ಕಳೆದಿದೆ ಅಂತಾ ಸಿಎಂ ಹೇಳ್ತಾರೆ. ಮೂಲ ಪ್ರತಿ ಕಳೆದಿಲ್ಲ ಅಂತಾ ಪರಮೇಶ್ವರ್ ಹೇಳ್ತಾರೆ.‌ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡ್ತಿದ್ದಾರೆ. ಡಿ ಕೆ ಶಿವಕುಮಾರ್ ಅರ್ಧ ಆಯಸ್ಸು ಕೋರ್ಟಿಗೆ ಅಲೆಯುತ್ತಿದ್ದಾರೆ. ‌

ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿ ಕೆ ಶಿವಕುಮಾರ್ ವಿರುದ್ದವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆಶಿ‌ ಜೈಲಿಗೆ ಹೋಗ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ‌ಇದೊಂದು ಕಪ್ಪು ಚುಕ್ಕೆ. ಡಿ ಕೆ‌ ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು‌ ಎಂದು ಈಶ್ವರಪ್ಪ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+