ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವರನ್ನು ಭೇಟಿಯಾಗಿ ಹಲವು ಮನವಿ ಸಲ್ಲಿಸಿದ ಈಶ್ವರಪ್ಪ

|
Google Oneindia Kannada News

ನವದೆಹಲಿ, ಜೂನ್ 24 : ಶಿವಮೊಗ್ಗ ಕ್ಷೇತ್ರದ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ವಿವಿಧ ಕೇಂದ್ರ ಸಚಿವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿದರು. ವಿವಿಧ ಯೋಜನೆಗಳ ಬಗ್ಗೆ ಅವರು ಮನವಿಗಳನ್ನು ಸಲ್ಲಿಸಿದರು.

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ನವದೆಹಲಿ ಪ್ರವಾಸದಲ್ಲಿದ್ದಾರೆ. ಹಲವು ಕೇಂದ್ರ ಸಚಿವರನ್ನು ಅವರು ಭೇಟಿ ಮಾಡಿ ಕ್ಷೇತ್ರದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯಕ್ ಅವರನ್ನು ಮೊದಲು ಕೆ.ಎಸ್.ಈಶ್ವರಪ್ಪ ಭೇಟಿ ಮಾಡಿದರು. ಬಳಿಕ ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ನೈಋತ್ಯ ರೈಲ್ವೆಯಲ್ಲಿ 179ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿನೈಋತ್ಯ ರೈಲ್ವೆಯಲ್ಲಿ 179ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

KS Eshwarappa meets union ministers

ಶ್ರೀಪಾದ ನಾಯಕ್ ಅವರನ್ನು ಭೇಟಿ ಮಾಡಿದ ಕೆ.ಎಸ್.ಈಶ್ವರಪ್ಪ ಅವರು ಮೊರಾರ್ಜಿ ದೇಸಾಯಿ ಇನ್ಸಿಟಿಟ್ಯೂಟ್ ಆಫ್‌ ಯೋಗಾದ ಶಾಖೆಯನ್ನು ಶಿವಮೊಗ್ಗದಲ್ಲಿ ತೆರೆಯಬೇಕು ಎಂದು ಮನವಿಯನ್ನು ಸಲ್ಲಿಸಿದರು.

ತುಮಕೂರು-ಗುಬ್ಬಿ ಜೋಡಿ ಹಳಿ ರೈಲು ಸಂಚಾರಕ್ಕೆ ಮುಕ್ತತುಮಕೂರು-ಗುಬ್ಬಿ ಜೋಡಿ ಹಳಿ ರೈಲು ಸಂಚಾರಕ್ಕೆ ಮುಕ್ತ

KS Eshwarappa meets union ministers

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ಕೆ.ಎಸ್.ಈಶ್ವರಪ್ಪ ಅವರು, ಶಿವಮೊಗ್ಗದ ರೈಲ್ವೆ ನಿಲ್ದಾಣ ಸಾಕಷ್ಟು ಅಭಿವೃದ್ದಿಯಾಗಿದೆ. ಶಿವಮೊಗ್ಗ ವಲಯಕ್ಕೆ ಹೆಚ್ಚಿನ ರೈಲುಗಳ ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದರು.

English summary
Former Deputy Chief Minister of Karnataka K.S.Eshwarappa met the union ministers in New Delhi submitted memorandum for various projects.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X