Get Updates
Get notified of breaking news, exclusive insights, and must-see stories!

ಉದ್ಯೋಗ ಖಾತರಿಯಲ್ಲಿ ರಾಜ್ಯ ಉತ್ತಮ ಸಾಧನೆ ಮಾಡಿದೆ; ಈಶ್ವರಪ್ಪ

ಬೆಂಗಳೂರು, ಏಪ್ರಿಲ್ 11; ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ 75ನೇ ಸ್ವಾತಂತ್ರ್ಯಾಚರಣೆ ಹಿನ್ನಲೆಯಲ್ಲಿ ಏಪ್ರಿಲ್ 11 ರಿಂದ 17ರ ತನಕ ನವದೆಹಲಿಯಲ್ಲಿ 'ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತಿ'ಗಳ ಪಾತ್ರ ಎಂಬ ಬಗ್ಗೆ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಆಯೋಜಿಸಿದೆ.

ಸೋಮವಾರ ದೆಹಲಿಯ ವಿಜ್ಞಾನ ಭವನದಲ್ಲಿ 'ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತಿ'ಗಳ ಪಾತ್ರ ರಾಷ್ಟ್ರೀಯ ಕಾರ್ಯಾಗಾರವನ್ನುಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿದರು.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಕೆ. ಎಸ್. ಈಶ್ವರಪ್ಪ ಮಾತನಾಡಿದರು.

KS Eshwarappa Speech At Gram Panchayats In Development Of Nation Event

ಅಂತರಾಷ್ಟ್ರೀಯ ಮಟ್ಟದಲ್ಲಿ 2030ರ ವೇಳೆಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ 17 ಗುರಿಗಳನ್ನು ಅಂತಿಮಗೊಳಿಸಿದೆ. ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯವು ಸದರಿ ಗುರಿಗಳನ್ನು ಸ್ಥಳೀಕರಿಸಿ 9 ಗುರಿಗಳಿಗೆ ಪ್ರಾಮುಖ್ಯತೆ ನೀಡಿ ಇದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಹಂತದಲ್ಲಿ ಸಾಧನೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ.

ಯಾವುದೇ ಹಳ್ಳಿ ಅಥವಾ ವ್ಯಕ್ತಿ ಅಭಿವೃದ್ಧಿ ಪಥದಿಂದ ಹಿಂದುಳಿಯಬಾರದೆಂಬುದು ಇದರ ಪ್ರಮುಖ ಉದ್ದೇಶವಾಗಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಾಕಷ್ಟು ಅಭಿವೃದ್ಧಿ ಚಟುವಟಿಕೆಗಳನ್ನು ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

73ನೇ ಸಂವಿಧಾನತಿದ್ದುಪಡಿಯ 29 ವಲಯಗಳನ್ನು ಪಂಚಾಯತ ರಾಜ್ ಸಂಸ್ಥೆಗಳಿಗೆ ಹಸ್ತಾಂತರಿಸುವುದು ಇವುಗಳಲ್ಲಿ ಅನೇಕ ಚಟುವಟಿಕೆಗಳು ನೇರವಾಗಿ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.

ಇವುಗಳಲ್ಲಿ ಪ್ರಮುಖವಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯವು ಆರೋಗ್ಯ ಗ್ರಾಮ, ಮಕ್ಕಳ ಸ್ನೇಹಿ ಪಂಚಾಯತ್ ಮತ್ತು ಮಹಿಳಾ ಸ್ನೇಹಿ ಪಂಚಾಯತಿಗಳಿಗೆ ಒತ್ತು ಕೊಟ್ಟಿದ್ದು ಗ್ರಾಮ ಪಂಚಾಯಿತಿಗಳನ್ನು ಇವುಗಳಿಗೆ ಪೂರಕವಾಗಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿವೆ.

ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿ, "ಕರ್ನಾಟಕ ರಾಜ್ಯವು ಮಹಾತ್ಮ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಉತ್ತಮ ಸಾಧನೆ ಮಾಡಿದೆ" ಎಂದರು.

"ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದು, ಮನೆ-ಮನೆಗೆ ಪೈಪ್‌ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸುತ್ತಿದ್ದು ಭಾರತಸರ್ಕಾರದ ಜಲ ಜೀವನ್ ಮಿಷನ್ ಇದಕ್ಕೆ ಉತ್ತೇಜನೆ ನೀಡಿದೆ" ಎಂದು ಹೇಳಿದರು.

"ರಾಜ್ಯವು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳಾಗಿದ್ದು, ಘನ ಮತ್ತು ದ್ರವ ತ್ಯಾಜ್ಯ ಘಟಕಗಳನ್ನು ಪಂಚಾಯತಿಗಳ ಹಂತದಲ್ಲಿ ಸ್ಥಾಪಿಸಲು ಹೆಚ್ಚಿನ ಕ್ರಮವಹಿಸುತ್ತಿದೆ. ನೈಸರ್ಗಿಕ ಸಂಪನ್ಮೂಲಗಳಿಗೆ ಪೂರಕವಾಗಿ ರಾಜ್ಯದ 48 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ಅಭಿವೃದ್ಧಿಪಡಿಸಿದ್ದು, 608 ಕಲ್ಯಾಣಿ ಮತ್ತು ಪುಷ್ಕರಣಿಗಳಿಗೆ ಪುನರ್ಜೀವ ನೀಡಿದೆ" ಎಂದು ಸಚಿವರು ಹೇಳಿದರು.

"ಕರ್ನಾಟಕದ ಗ್ರಾಮ ಪಂಚಾಯಿತಿಗಳು ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ತಡೆಗಟ್ಟಲು ಹಾಗೂ ಪಟ್ಟಣ ಪ್ರದೇಶಗಳಿಂದ ಗ್ರಾಮಗಳಿಗೆ ವಲಸೆ ಬಂದವರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಕಳೆದ 2 ವರ್ಷಗಳಿಂದ ಸಾಕಷ್ಟು ಸಾಧನೆ ಮಾಡಿವೆ. ಇದರಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರಚಿಸಿದ ಗ್ರಾಮ ಪಂಚಾಯಿತಿ ಟಾಸ್ಕ್‌ ಫೊರ್ಸ್ ಮಹತ್ವದ್ದಾಗಿದೆ" ಎಂದು ತಿಳಿಸಿದರು.

"ರಾಜ್ಯದ ಗ್ರಾಮ ಪಂಚಾಯಿತಿಗಳು ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಹೆಚ್ಚಿನ ಸಾಧನೆ ಮಾಡುತ್ತಿವೆ. ಪ್ರಮುಖವಾಗಿ ಗ್ರಾಮ ಪಂಚಾಯಿತಿ ಹಂತದ ಗ್ರಂಥಾಲಯಗಳನ್ನು ಡಿಜಿಟಲಿಕರಣ ಮಾಡುವ ಮುಖಾಂತರ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಪಡೆಯಲು ಸಹಕರಿಸುತ್ತಿವೆ" ಎಂದರು.

ಕರ್ನಾಟಕ ರಾಜ್ಯದಲ್ಲಿ ಸುಮಾರು 90 ಸಾವಿರ ಗ್ರಾಮ ಪಂಚಾಯಿತಿ ಸದಸ್ಯರುಗಳು ನೂತನವಾಗಿ ಆಯ್ಕೆಯಾಗಿದ್ದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು ಅತ್ಯುತ್ತಮ ತರಬೇತಿ ನೀಡಿದ್ದು ಅಭಿನಂದನಾರ್ಹವಾಗಿದೆ.

ಕರ್ನಾಟಕ ರಾಜ್ಯದ ಸುಸ್ಥಿರ ಅಭಿವೃದ್ಧಿ ಗುರಿಗಳ ಸ್ಥಳೀಕರಣ ಮತ್ತು ಅವುಗಳ ಸಾಧನೆ ಮಾಡುವಲ್ಲಿ ಭಾರತ ಸರ್ಕಾರವು ಪಂಚಾಯರಾತಜ್ ಮಂತ್ರಾಲಯದೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸುವುದೆಂದು ತಿಳಿಸಲು ಹರ್ಷಿಸುತ್ತೇನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+