ಶಾಲಾ ಮಕ್ಕಳಿಗೆ ಹೊಸ ವರ್ಷದ ಕೊಡುಗೆ ನೀಡಿದ ಸಿಎಂ

ಬೆಂಗಳೂರು, ಡಿ.3 : ಶಾಲಾ ಮಕ್ಕಳಿಗೆ ಹೊಸ ವರ್ಷದ ಕೊಡುಗೆ ನೀಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಕ್ಷೀರಭಾಗ್ಯ ಯೋಜನೆಯನ್ನು ಐದು ದಿನಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ತಮ್ಮ ಸ್ವ ಕ್ಷೇತ್ರದ ವರುಣಾದಲ್ಲಿ ಮಾತನಾಡಿದ ಸಿಎಂ, ಸದ್ಯ ಕ್ಷೀರಭಾಗ್ಯ ಯೋಜನೆಯಡಿ 8 ಲಕ್ಷ ಲೀಟರ್ ಹಾಲನ್ನು ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ. ಸೋಮವಾರ, ಮಂಗಳವಾರ ಮತ್ತು ಶುಕ್ರವಾರ ಹಾಲನ್ನು ನೀಡಲಾಗುತ್ತಿದೆ ಎಂದರು.

Milk

ವಾರದಲ್ಲಿ ಐದು ದಿನ ಕ್ಷೀರಭಾಗ್ಯ ಯೋಜನೆಯಡಿ 1ರಿಂದ ಹತ್ತನೇ ತರಗತಿ ಮತ್ತು ಅಂಗನವಾಡಿ ಮಕ್ಕಳಿಗೆ ಹಾಲು ನೀಡಲು ಸರ್ಕಾರ ನಿರ್ಧರಿಸಿದೆ. 2015ರಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದು ಸಿಎಂ ಹೇಳಿದರು.[ಕ್ಷೀರಭಾಗ್ಯ ಯೋಜನೆ ಬಗ್ಗೆ ತಿಳಿಯಿರಿ]

ಮಕ್ಕಳ ಬೆಳವಣಿಗೆಯಲ್ಲಿ ಪೋಷಕಾಂಶಗಳ ಪಾತ್ರ ಮಹತ್ವದ್ದಾಗಿದೆ. ವಾರದಲ್ಲಿ ಐದು ದಿನ ಮಕ್ಕಳಿಗೆ ಶಾಲೆಯಲ್ಲಿ ಹಾಲು ನೀಡುವುದರಿಂದ ಮಕ್ಕಳಿಗೆ ಹೆಚ್ಚಿನ ಪೋಷಕಾಂಶಗಳು ದೊರೆಯುತ್ತವೆ, ಸರ್ಕಾರ ಕ್ಷೀರಭಾಗ್ಯ ಯೋಜನೆಗೆ ವಾರ್ಷಿಕವಾಗಿ 4, 800 ಕೋಟಿ ವೆಚ್ಚ ಮಾಡುತ್ತಿದೆ ಎಂದು ತಿಳಿಸಿದರು. [ಸಿಎಂ ಓದಿದಿ ಶಾಲೆಯಲ್ಲಿ ಬಿಸಿಯೂಟ ಸಮಸ್ಯೆ]

ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು 4 ರೂ.ಗಳಿಗೆ ಹೆಚ್ಚಿಸಿದೆ. ಪ್ರತಿದಿನ ರಾಜ್ಯದಲ್ಲಿ ಮೊದಲು 35 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತಿತ್ತು. ಸದ್ಯ 63 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದರು.

ಕ್ಷೀರಭಾಗ್ಯ ಯೋಜನೆ ಬಗ್ಗೆ ಒಂದಿಷ್ಟು : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಮಹತ್ವಾಕಾಂಕ್ಷೆಯ ಯೋಜನೆ ಕ್ಷೀರಭಾಗ್ಯ. ಈ ಯೋಜನೆಯಡಿ 64 ಸಾವಿರ ಅಂಗನವಾಡಿ, 51 ಸಾವಿರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಸೇರಿ ಒಟ್ಟು 1 ಕೋಟಿಗೂ ಹೆಚ್ಚು ಮಕ್ಕಳಿಗೆ ವಾರದಲ್ಲಿ ಮೂರು ದಿನ ಹಾಲು ನೀಡಲಾಗುತ್ತದೆ.

ಹಾಲಿನ ಬದಲು ಪುಡಿ : ಹಾಲಿನಲ್ಲಿ ಕಲಬೆರೆಕೆ ಆಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗಬಾರದು ಎಂದು ಸರ್ಕಾರ, ಕಚ್ಚಾ ಹಾಲು ಪೂರೈಸುವ ಬದಲು ಪೋಷಕಾಂಶಗಳನ್ನು ಹೊಂದಿರುವ ಪರಿಶುದ್ಧ ನಂದಿನಿ ಹಾಲಿನ ಪುಡಿಯನ್ನು ಸರಬರಾಜು ಮಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+