ರಿಯಾಯಿತಿ ದರದ ರೇಷ್ಮೆ ಸೀರೆ: ನಂಬಿ ಹೋದವರು ಬೇಸ್ತು
ಬೆಂಗಳೂರು, ಆಗಸ್ಟ್ 15: ಸ್ವಾತಂತ್ರ್ಯೋತ್ಸವದ ನಿಮಿತ್ತ ಶೇ 50ರ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆ ಮಾರಾಟ ಮಾಡಲಾಗುವುದು ಎಂಬ ಕರ್ನಾಟಕ ರಾಜ್ಯ ರೇಷ್ಮೆ ಕೈಗಾರಿಕಾ ನಿಗಮದ (ಕೆಎಸ್ ಐಸಿ) ಜಾಹೀರಾತು ನಂಬಿ ಹೋದ ಗ್ರಾಹಕರು ಬೇಸ್ತುಬಿದ್ದಿದ್ದಾರೆ.
ಆಗಸ್ಟ್ 15ರಂದು 9,000 ರುಪಾಯಿ ಮೌಲ್ಯದ ರೇಷ್ಮೆ ಸೀರೆಗಳನ್ನು ಶೇ 50ರಷ್ಟು ರಿಯಾಯಿತಿ ದರಕ್ಕೆ, ಅಂದರೆ 4,500 ರುಪಾಯಿಗೆ ಮಾರುವುದಾಗಿ ನಿಗಮ ಪ್ರಕಟಿಸಿತ್ತು. ಮೈಸೂರು, ಬೆಂಗಳೂರಿನಲ್ಲಿರುವ ಕೆಎಸ್ ಐಸಿಯ 2 ಮಾರಾಟ ಕೇಂದ್ರಗಳು, ಚನ್ನಪಟ್ಟಣ ಮತ್ತು ದಾವಣಗೆರೆಯ ತಲಾ ಒಂದು ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ರೇಷ್ಮೆ ಸೀರೆಗಳು ದೊರೆಯಲಿವೆ ಎಂದು ತಿಳಿಸಿತ್ತು.
ಆದರೆ, ಅದನ್ನು ನಂಬಿ ಆಧಾರ್ ಕಾರ್ಡ್ ಸಹಿತ ಕೆಎಸ್ಐಸಿಗೆ ತೆರಳಿದ್ದ ಗ್ರಾಹಕರಿಗೆ ನಿರಾಶೆ ಕಾದಿತ್ತು. ಈ ದಿನ ರಿಯಾಯಿತಿ ಮಾರಾಟ ಇಲ್ಲ. ಅದನ್ನು ಮುಂದೂಡಲಾಗಿದೆ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದರು.

ಕಡಿಮೆ ಬೆಲೆಯಲ್ಲಿ ರೇಷ್ಮೆ ಸೀರೆ ಖರೀದಿ ಮಾಡಬಹುದು ಎಂಬ ಆಸೆಯೊಂದಿಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಕೆಎಸ್ಐಸಿ ಮಳಿಗೆಗೆ ಬಂದಿದ್ದ ಗ್ರಾಹಕರು ಇದರಿಂದ ಸಿಟ್ಟಿಗೆದ್ದರು.
ಮಾರಾಟ ಇಲ್ಲ ಎಂದ ಮೇಲೆ ಜಾಹೀರಾತು ಏಕೆ ಕೊಡಬೇಕಿತ್ತು. ಮಾರಾಟ ಮುಂದೂಡಿರುವ ಬಗ್ಗೆ ಏಕೆ ತಕ್ಷಣ ಪ್ರಕಟಣೆ ನೀಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ರಿಯಾಯಿತಿ ದರದ ಮಾರಾಟವನ್ನು ಮುಂದೂಡುವಂತೆ ಸರ್ಕಾರದಿಂದ ಸೂಚನೆ ಬಂದಿದೆ ಎಂದು ಅಲ್ಲಿನ ಸಿಬ್ಬಂದಿ ಗ್ರಾಹಕರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ರಿಯಾಯಿತಿ ದರದ ಮಾರಾಟದ ಯೋಜನೆಯನ್ನು ಮುಂದೂಡಲಾಗಿದೆ ಎಂಬ ಕಾರಣ ನೀಡಿದರು.
ಈ ಸ್ಪಷ್ಟೀಕರಣದಿಂದ ಗ್ರಾಹಕರು ಮತ್ತಷ್ಟು ಕೆರಳಿದರು. ಚುನಾವಣೆ ಘೋಷಣೆಯಾಗಿ ಎಷ್ಟೋ ದಿನಗಳಾಗಿವೆ. ಆದರೆ, ನಿಗಮವು ಮೊನ್ನೆಯಷ್ಟೇ ರಿಯಾಯಿತಿ ದರದ ಮಾರಾಟವನ್ನು ಪ್ರಕಟಿಸಿತ್ತು, ಹಾಗಾದರೆ, ನೀತಿ ಸಂಹಿತೆ ಜಾರಿಯಲ್ಲಿರುವುದು ಇಷ್ಟು ದಿನದವರೆಗೆ ಅರಿವಿರಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಗಸ್ಟ್ 21ರಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮತ್ತೆ ರಿಯಾಯಿತಿ ದರದ ರೇಷ್ಮೆ ಸೀರೆ ಮಾರಾಟ ನಡೆಸುವುದಾಗಿಯೂ ನಿಗಮ ತಿಳಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications