ಡ್ಯಾಂಗಳ ಭದ್ರತೆಯಿಂದ KSISF ಪಡೆಗಳು ವಾಪಸ್!
ಬೆಂಗಳೂರು, ಫೆಬ್ರವರಿ 09: ಕರ್ನಾಟಕದ ಗೃಹ ಇಲಾಖೆ ಡ್ಯಾಂಗಳ ಭದ್ರತಾ ವಿಚಾರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಇನ್ನು ಮುಂದೆ ಅಣೆಕಟ್ಟುಗಳ ಭದ್ರತೆಯ ಜವಾಬ್ದಾರಿಯನ್ನು ಕೆಎಸ್ಐಎಸ್ಎಫ್ ನೋಡಿಕೊಳ್ಳುವುದಿಲ್ಲ. ಸ್ಥಳೀಯ ಪೊಲೀಸರೇ ನೋಡಿಕೊಳ್ಳುತ್ತಾರೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಇದೆ. ರಾಜ್ಯದ ಪ್ರಮುಖ ಜಲಾಶಯಗಳು, ಸೂಕ್ಷ್ಮ ಪ್ರದೇಶಗಳ ಭದ್ರತೆಗೆ ಈ ಪಡೆಯನ್ನು ನಿಯೋಜನೆ ಮಾಡಲಾಗಿತ್ತು.

ಆದರೆ ಈಗ ಗೃಹ ಇಲಾಖೆ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ಡ್ಯಾಂಗಳ ಭದ್ರತಾ ಕಾರ್ಯಗಳಿಂದ ವಾಪಸ್ ಪಡೆಯುತ್ತಿದೆ. ಇನ್ನು ಮುಂದೆ ಸ್ಥಳೀಯ ಜಿಲ್ಲಾ ಪೊಲೀಸರು ಅಥವ ಕಮಿಷನರೇಟ್ ವತಿಯಿಂದ ಡ್ಯಾಂ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಭದ್ರತೆ ನೀಡಲಾಗುತ್ತದೆ.
ವಿಮಾನ ನಿಲ್ದಾಣಗಳಿಗೆ ನಿಯೋಜನೆ; ಕರ್ನಾಟಕದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ವಿಮಾನ ನಿಲ್ದಾಣಗಳ ಭದ್ರತೆಗೆ ಹೆಚ್ಚಿನ ಗಮನ ಅಗತ್ಯ. ಆದ್ದರಿಂದ ಗೃಹ ಇಲಾಖೆ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ರಾಜ್ಯದ ವಿಮಾನ ನಿಲ್ದಾಣಗಳ ಭದ್ರತೆಗೆ ನಿಯೋಜಿಸುತ್ತಿದೆ.
ಶಿವಮೊಗ್ಗ ವಿಮಾನ ನಿಲ್ದಾಣ 2023ರ ಫೆಬ್ರವರಿಯಲ್ಲಿ ಲೋಕಾರ್ಪಣೆಯಾಗಿದೆ. ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಿದ್ಧವಾಗಿದೆ. ಈ ಎಲ್ಲಾ ವಿಮಾನ ನಿಲ್ದಾಣಗಳ ಭದ್ರತೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಗೆ ವಹಿಸಲಾಗುತ್ತದೆ. ಆದ್ದರಿಂದ ಡ್ಯಾಂ ಸೇರಿದಂತೆ ಸೂಕ್ಷ್ಮ ಪ್ರದೇಶದಿಂದ ಕೆಎಸ್ಐಎಸ್ಎಫ್ ಸಿಬ್ಬಂದಿ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ.
ಮೈಸೂರು ನಗರದಲ್ಲಿರುವ ಕೆಪಿಎ, ಜಿಲ್ಲೆಯಲ್ಲಿರುವ ತಾರಕ, ನುಗು, ಗೇರುಸೊಪ್ಪ ಡ್ಯಾಂ, ವಿದ್ಯುತ್ ಉತ್ಪಾದನಾ ಘಟಕ, ಶಿವನಸಮುದ್ರ ಜಲವಿದ್ಯುತ್ ಕೇಂದ್ರ, ನಾರಾಯಣ ಪುರ ಡ್ಯಾಂ ಹೀಗೆ ವಿವಿಧ ಕಡೆ ಭದ್ರತೆಗೆ ನಿಯೋಜನೆಗೊಂಡಿದ್ದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿ/ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುತ್ತಿದೆ. ಫೆಬ್ರವರಿ 15ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ವಿಮಾನ ನಿಲ್ದಾಣ, ವಿಧಾನಸೌಧ, ರಾಜಭವನ, ಹೈಕೋರ್ಟ್, ಅರಮನೆ, ನಮ್ಮ ಮೆಟ್ರೋ ನಿಲ್ದಾಣ, ಡ್ಯಾಂ, ಕಾರಾಗೃಹ ಸೇರಿದಂತೆ ಸೂಕ್ಷ್ಮ ಪ್ರದೇಶಗಳ ಭದ್ರತೆಗೆ ನಿಯೋಜನೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಈಗ ವಿಮಾನ ನಿಲ್ದಾಣದ ಭದ್ರತೆಗೆ ಮಾತ್ರ ನಿಯೋಜಿಸಲಾಗುತ್ತಿದೆ.
ಸಿಬ್ಬಂದಿಯ ಕೊರತೆಯನ್ನು ಸಹ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಎದುರಿಸುತ್ತಿದೆ. ಸುಮಾರು 1 ಸಾವಿರ ಕಾನ್ಸ್ಟೇಬಲ್ ನೇಮಕಾತಿ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಅದಕ್ಕೆ ಇನ್ನೂ ಚಾಲನೆ ಸಿಕ್ಕಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡವಿದ್ದು, ಎಲ್ಲಾ ಕಡೆ ಭದ್ರತೆ ನೀಡುವುದು ಕಷ್ಟವಾಗಿದೆ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಮಾದರಿಯಲ್ಲಿ 2012ರಲ್ಲಿ ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಆರಂಭಿಸಲಾಯಿತು. ಮೊದಲ ಹಂತದಲ್ಲಿ 139 ಸಬ್ ಇನ್ಸ್ಪೆಕ್ಟರ್, 1731 ಕಾನ್ಸ್ಟೇಬಲ್ ನೇಮಕಾತಿ ಆಗಿತ್ತು. ಸಿಬ್ಬಂದಿಗಳಿಗೆ ಹೈದರಾಬಾದ್ನ ಸಿಐಎಸ್ಎಫ್ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗಿತ್ತು.
ಕಾನ್ಸ್ಟೇಬಲ್ಗಳ 8 ತುಕಡಿಗಳಿಗೆ ಕರ್ನಾಟಕದ ಪೊಲೀಸ್ ತರಬೇತಿ ಶಾಲೆಗಳಿರುವ ಕಲಬುರಗಿ, ಮೈಸೂರು, ಚನ್ನಪಟ್ಟಣ, ಖಾನಾಪುರದಲ್ಲಿ ತರಬೇತಿ ನೀಡಲಾಗಿತ್ತು. ಭಯೋತ್ಪಾದಕರು, ನಕ್ಸಲರು ದಾಳಿ ಮಾಡಿದರೆ ತಡೆಯವ ಮಾದರಿಯಲ್ಲಿ ಸಿಬ್ಬಂದಿಗಳಿಗೆ ತರಬೇತಿ ಕೊಡಿಸಲಾಗಿತ್ತು.
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಎಕೆ 47, ಎಸ್ಎಲ್ಆರ್ ಶಸ್ತ್ರಾಸ್ತ್ರಗಳು, ಬಾಂಬ್ ನಿಷ್ಕ್ರೀಯ ತರಬೇತಿ ಸೇರಿದಂತೆ ಆಧುನಿಕ ಉಪಕರಣಗಳ ಬಳಕೆಯ ಬಗ್ಗೆ ತರಬೇತಿ ಪಡೆದಿದ್ದರು. ಆದ್ದರಿಂದ ಇವರನ್ನು ಸೂಕ್ಷ್ಮ ಪ್ರದೇಶಗಳ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications