ಕೆಎಸ್ಒಯುನಲ್ಲಿ ಕೆಎಎಸ್-ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ
ಮೈಸೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಎಎಸ್) ಮತ್ತು ಕೇಂದ್ರ ಲೋಕಸೇವಾ ಆಯೋಗ (ಐಎಎಸ್) ಎರಡು ಆಡಳಿತ ಸೇವಾ ಹುದ್ದೆಗಳ ಪರೀಕ್ಷೆಗಳಿಗೆ ತಯಾರಾಗುವ ಅಭ್ಯರ್ಥಿಗಳಿಗೆ ಇಲ್ಲೊಂದು ಖುಷಿ ಸುದ್ದಿ ಇದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್ಒಯು) ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಿಂದ ಈ ಎರಡು ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಸಂಪರ್ಕಿಸಬಹುದಾಗಿದೆ.
ನಿಮಗೆ ಕೆಎಎಸ್, ಐಎಎಸ್ ಅಧಿಕಾರಿಯಾಗಬೇಕು ಎನ್ನುವ ಬಯಕೆ ಇದಿಯಾ?. ಅಧಿಕಾರಿಯಾಗಿ ಸಾರ್ವಜನಿಕ ಸೇವೆ ಮಾಡಬೇಕು ಎನ್ನುವ ಮಹದಾಸೆ ಇದ್ದವರ ಕನಸಿಗೆ ಶಕ್ತಿ ತುಂಬುವ ಕೆಲಸ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾಡುತ್ತಿದೆ. ಈ ಸಂಬಂಧ ಒಂದೂವರೆ ತಿಂಗಳ ಕಾಲ ತರಬೇತಿ ನೀಡಿ ಪರೀಕ್ಷೆಗೆ ಅವರನ್ನು ಸಜ್ಜುಗೊಳಿಸಲಿದೆ.

14 ವರ್ಷದಿಂದ ಮುಕ್ತ ಗಂಗೋತ್ರಿಯ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಲೇ ಹತ್ತಾರು ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಆಯೋಜಿಸುತ್ತ ಬರಲಾಗಿದೆ. ಸ್ಪರ್ಧಾತ್ಮಕ ಪರೀ್ಕ್ಷಾ ಕೇಂದ್ರ, ಕರ್ನಾಟಕ ರಾಜ್ಯ ಲೋಕ ಸೇವಾ ಆಯೋಗ, ಕೇಂದ್ರ ಲೋಕಸೇವಾ ಆಯೋಗ, ವಿವಿಧ ನೇಮಕಾತಿ ಮಂಡಳಿಗಳು ಆಯೋಜಿಸುವ ಪರೀಕ್ಷೆಗಳಿಗೆ ವಿಷಯಾಧಾರಿತವಾಗಿ ತರಬೇತಿ ನೀಡಲಾಗುತ್ತದೆ.
ಆಸಕ್ತ ಪರೀಕ್ಷಾರ್ಥಿಗಳು ಕೂಡಲೇ ಸಂಪರ್ಕಿಸಿ
ಹಲವು ಕ್ಷೇತ್ರಗಳ ತಜ್ಞರು, ವಿಷಯ ಪರಿಣಿತರು, ಪರೀಕ್ಷೆಯಲ್ಲಿ ಯಶಸ್ವಿಯಾಗಿ ಸದ್ಯ ನಾಡಿನ ನಾನಾ ಭಾಗಗಳಲ್ಲಿ ಸೇವಾನಿರತ ಐಎಎಸ್, ಐಪಿಎಸ್, ಐಎಫ್ಎಸ್, ಕೆಎಎಸ್ ಅಧಿಕಾರಿಗಳು ಕೂಡ ಪರೀಕ್ಷೆ ಎದುರಿಸುವ ಮಾರ್ಗೋಪಾಯಗಳನ್ನು ಪರೀಕ್ಷಾರ್ಥಿಗಳಿಗೆ ಹೇಳಿ ಕೊಡಲಿದ್ದಾರೆ. ಸತತ 45 ದಿನಗಳ ಕಾಲ ನಡೆಯುವ ತರಬೇತಿ ಇದಾಗಿದೆ. ಯಾರೆಲ್ಲ ಕೆಎಎಸ್, ಐಎಎಸ್ ಹುದ್ದೆಗಳ ಆಕಾಂಕ್ಷಿಗಳಾಗಿದ್ದು, ಪರೀಕ್ಷೆಗೆ ಸಜ್ಜಾಗುತ್ತಿದ್ದಿರೋ ಅಂಥವರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ 0821- 2515944 ಗೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಕೆಎಸ್ಒಯು ಕುಲಸಚಿವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ 9448800816 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎರಡು ಪ್ರಮುಖ ಆಡಳಿತ ಸೇವೆಯಲ್ಲಿ ಹುದ್ದೆ ಅಲಂಕರಿಸಬೇಕು ಎಂದುಕೊಂಡ ಬಡವರು ಹಾಗೂ ಮಧ್ಯವರ್ಗದವರು ಖಾಸಗಿ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳಿಗೆ ಅಧಿಕ ಮೊತ್ತ ನೀಡಿ ಕಲಿಯುವ ಬದಲು ಈ ವಿಶ್ವವಿದ್ಯಾಲಯದಲ್ಲಿ ಪರಿಣಿತರಿಂದ ತರಬೇತಿಯನ್ನು ಪಡೆಯಬಹುದಾಗಿದೆ. ಪರೀಕ್ಷಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.
-
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications