ವಿಆರ್ಎಸ್ ಯೋಜನೆ ಪ್ರಕಟಿಸಿದ ಕೆಎಸ್ಆರ್ಟಿಸಿ
ಬೆಂಗಳೂರು, ಜೂನ್ 12 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಪ್ರಕಟಿಸಿದೆ. ಕೆಲಸ ಮಾಡಲು ಸಾಧ್ಯವಿಲ್ಲದಷ್ಟು ಅನಾರೋಗ್ಯ ಇರುವವರು ವಿಆರ್ಎಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Recommended Video
ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ವಿಆರ್ಎಸ್ ಯೋಜನೆ ಘೋಷಣೆ ಮಾಡಲಾಗಿದೆ. ಸ್ವಯಂ ನಿವೃತ್ತಿ ಪಡೆಯುವವರಿಗೆ ಆಕರ್ಷಕ ಪರಿಹಾರವೂ ಸಿಗಲಿದೆ.
ನೌಕರರು ಸ್ವಯಂ ನಿವೃತ್ತಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕು. ಅವುಗಳನ್ನು ಪರಿಶೀಲಿಸಿ ಅಂಗೀಕರಿಸಲು ವಿಭಾಗೀಯ ಮಟ್ಟದಲ್ಲಿಯೇ ಸಮಿತಿಗಳನ್ನು ರಚನೆ ಮಾಡಲಾಗಿದೆ. ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ.

ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಈ ಕುರಿತು ಮಾಹಿತಿ ನೀಡಿದ್ದಾರೆ. "2012ರ ಅಕ್ಟೋಬರ್ 12ರ ಸುತ್ತೋಲೆಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ದೂರುಗಳಿಗೆ ಆಸ್ಪದ ಕೊಡದಂತೆ ಪ್ರಕ್ರಿಯೆ ಪೂರ್ಣಗೊಳಿಸಬೇಕು" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿವಿಧ ಸಮಿತಿಗಳ ರಚನೆ : ವಿಆರ್ಎಸ್ ಯೋಜನೆ ಘೋಷಣೆ ಮಾಡಿರುವ ಕೆಎಸ್ಆರ್ಟಿಸಿ ಅರ್ಜಿಗಳ ವಿಲೇವಾರಿಗಾಗಿ ವಿವಿಧ ಸಮಿತಿಗಳನ್ನು ರಚನೆ ಮಾಡಿದೆ. ವಿಭಾಗೀಯ ಮಟ್ಟದಿಂದ ಕೇಂದ್ರ ಕಚೇರಿ ತನಕ ವಿವಿಧ ಸಮಿತಿಗಳು ಕಾರ್ಯ ನಿರ್ವಹಣೆ ಮಾಡಲಿವೆ.
ದರ್ಜೆ 3 ಮತ್ತು 4ರ ನೌಕರರು ಸಲ್ಲಿಸಿದ್ದ ಅರ್ಜಿಗಳನ್ನು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಅಂಗೀಕರಿಸಲಿದೆ. ಕೇಂದ್ರ ಕಚೇರಿ ನೌಕರರ ಅರ್ಜಿಗಳ ಪರಿಶೀಲನೆಗೆ ಕೇಂದ್ರ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications