ರಾಜ್ಯದಲ್ಲಿ ಬಸ್ ಪ್ರಯಾಣಿಕರಿಗೆ ಮತ್ತೊಂದು ರೀತಿಯ ಶಾಕ್
ಬೆಂಗಳೂರು, ಮೇ8: ರಾಜ್ಯದಲ್ಲಿ ಇತ್ತೀಚೆಗೆ ಒಂದೇ ಸಮನೆ ಬಸ್ ಪ್ರಯಾಣ ದರ ಏರಿಸಿ, ಪ್ರಯಾಣಿಕರಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟಿರುವ ರಾಜ್ಯ ಸರಕಾರ ಈ ಬಾರಿ ಮತ್ತೊಂದು ರೀತಿಯ ಶಾಕ್ ಟ್ರೀಟ್ ಮೆಂಟ್ ಕೊಡಲು ಸಜ್ಜಾಗುತ್ತಿದೆ.
ಎತ್ತಿಗೆ ಜ್ವರ; ಪ್ರಯಾಣಿಕರಿಗೆ ಬರೆ:
ಸಂಸ್ಥೆ ನೂರಾರು ಕೋಟಿ ರೂ ಲೆಕ್ಕದಲ್ಲಿ ನಷ್ಟಕ್ಕೀಡಾಗಿದೆ. ಇದನ್ನು ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯವಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಮರ್ಥಿಸಿಕೊಂಡಿರುವಾಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಬಸ್ಸುಗಳ ಸಂಚಾರವನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ.
ಈ ಮಧ್ಯೆ, ಅನಧಿಕೃತವಾಗಿ ನಿನ್ನೆಯಿಂದಲೇ ಕೆಲವು ಕಡೆ ಬಸ್ಸುಗಳನ್ನು ಕಡಿಮೆ ಮಾಡಲಾಗಿದೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ.

ಖಾಲಿ ಬಸ್ ಓಡೋಲ್ಲ; ಸಂಚಾರ ಕಟ್ : 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ಹಾಗೂ ಬಿಎಂಟಿಸಿ ಸಂಸ್ಥೆಗಳು ಭಾರಿ ನಷ್ಟದಲ್ಲಿವೆ. ಆ ನಷ್ಟವನ್ನು ಸರಿದೂಗಿಸಲು ಪ್ರಯಾಣಿಕರಿಲ್ಲದೆ ಅನಗತ್ಯವಾಗಿ ಸಂಚರಿಸುವ ಎಲ್ಲಾ ಬಸ್ಸುಗಳನ್ನು ಹಿಂತೆಗೆದುಕೊಳ್ಳಲಾಗುವುದು. ಬಸ್ಸುಗಳ ಸಂಚಾರ ಸಮಯವನ್ನೂ ಬದಲಿಸಲಾಗುವುದು' ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾಸ್ಟ್ ಕಟ್ಟಿಂಗ್ ನೀತಿಗೆ ಮೊರೆ:
ಈಶಾನ್ಯ, ವಾಯವ್ಯ ನಿಗಮಗಳ ವ್ಯಾಪ್ತಿಯಲ್ಲಿ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸುಗಳೂ ಸೇರಿದಂತೆ ಬೆಂಗಳೂರಿನ ಬಿಎಂಟಿಸಿಯ ಅನೇಕ ಬಸ್ಸುಗಳಲ್ಲಿ ಕೇವಲ ಹತ್ತಾರು ಮಂದಿ ಪ್ರಯಾಣಿಕರಿದ್ದರೂ ಅವು ಸಂಚರಿಸುತ್ತವೆ. ಮಧ್ಯಾಹ್ನದ ವೇಳೆ ಇಂತಹ ಪರಿಸ್ಥಿತಿ ಹೆಚ್ಚಾಗಿರುತ್ತದೆ. ಕೆಲವೊಮ್ಮೆ ಒಬ್ಬಿಬ್ಬರೇ ಇದ್ದರೂ ಅಥವಾ ಖಾಲಿ ಬಸ್ಸು ಕೂಡ ಸಂಚರಿಸುವ ನಿದರ್ಶನಗಳಿವೆ. ಇದರಿಂದ ಸಂಸ್ಥೆಗಳಿಗೆ ಸಾಕಷ್ಟು ನಷ್ಟವಾಗುತ್ತಿದೆ. ಇಂತಹ ಬಸ್ ಪಾಳಿ ರದ್ದುಪಡಿಸಲಾಗುವುದು. ಆದರೆ ಜನರಿಗೆ ಅಗತ್ಯವಿರುವ ಹಾಗೂ ಜನ ಹೆಚ್ಚು ಓಡಾಡುವ ಸಮಯದಲ್ಲಿ ಬಸ್ ಸಂಚರಿಸಲು ಅವಕಾಶ ಕಲ್ಪಿಸಲಾಗುತ್ತದೆ. ಒಟ್ಟು 7791 ಟ್ರಿಪ್ ಗಳ ಪೈಕಿ ತಕ್ಷಣಕ್ಕೆ 150 ಟ್ರಿಪ್ ಬದಲಿಸಿ, ಬೇರೆ ಪಾಳಿಯಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಂಸ್ಥೆಯ ನಷ್ಟ ಬಿಜೆಪಿ ಸರ್ಕಾರದ ಕೊಡುಗೆ:
'ಹಿಂದಿನ ಸಾರಿಗೆ ಸಚಿವ ಆರ್ ಅಶೋಕ್ ಅವರ ಅವಧಿಯಲ್ಲೇ ಬಿಎಂಟಿಸಿ 47 ಕೋಟಿ ರೂ. ನಷ್ಟದಲ್ಲಿತ್ತು. ಕೆಎಸ್ಸಾರ್ಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳು ಸಹ ನಷ್ಟದಲ್ಲಿದ್ದವು. ಅಂದರೆ ಇಲಾಖೆ ಒಟ್ಟು 147 ಕೋಟಿ ರೂ ನಷ್ಟದ ಹೊರೆ ಹೊತ್ತಿತ್ತು. 5 ವರ್ಷದಲ್ಲಿ ಇದು ಬಿಜೆಪಿ ಸರ್ಕಾರದ ಕೊಡುಗೆಯಾಗಿತ್ತು' ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದರು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications