Karnataka Bandh: KSRTC, BMTC ಬಸ್ ಸಂಚಾರ: ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ!
ಬೆಂಗಳೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಶುಕ್ರವಾರದ ಕರ್ನಾಟಟಕ ಬಂದ್ಗೆ ಸಾವಿರಾರು ಸಂಘಟನೆಗಳು ಬೆಂಬಲ ನೀಡಿದ್ದು, ಕರ್ನಾಟಕ ಸಂಪೂರ್ಣ ಸ್ತಬ್ಧವಾಗುವ ಸಾಧ್ಯತೆ ಇದೆ.
ಇತ್ತ ಕರ್ನಾಟಕ ಬಂದ್ ಆಗಲಿದೆ, ಆದರೆ, ಸೆಪ್ಟೆಂಬರ್ 29ರಂದು ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂದು ತಿಳಿದುಬಂದಿದೆ. ಸಾರಿಗೆ ನೌಕರರು ಕಡ್ಡಾಯವಾಗಿ ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.

ಹೌದು. ಕರ್ನಾಟಕ ಬಂದ್ ಹಿನ್ನೆಲೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸೇವೆಯನ್ನು ಶುಕ್ರವಾರ ನೀಡಲಿವೆ. ಈ ಹಿನ್ನೆಲೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ. ದೀರ್ಘಾವಧಿ, ವಾರದ ರಜೆ ಹೊರತುಪಡಿಸಿ ನೌಕರರು ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನೌಕರರಿಗೆ ಸಾರಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ.
ಇನ್ನೂ ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರರಿಂದ ಸೇವೆ ನೀಡಬೇಕು. ಹೀಗಾಗಿ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಸಕ್ಕೆ ಗೈರು ಆಗಿ ಬಂದ್ ನಲ್ಲಿ ಭಾಗಿಯಾದ್ರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುವುದಾಗಿ ಎಚ್ಚರಿಕೆ ಸಹ ನೀಡಲಾಗಿದೆ.

ಇತ್ತ ಬೆಂಗಳೂರು ಬಂದ್ ಆದ ಸಂದರ್ಭದಲ್ಲಿ ಕೆಲ ಕಡೆ ಕಲ್ಲು ತೂರಾಟಗಳಾದ ವರದಿಯಾಗ ಹಿನ್ನೆಲೆಯಲ್ಲಿ ಬಿಎಂಟಿಸಿ ನಿಗಮವೂ ಎಚ್ಚರಗೊಂಡಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗದಂತೆ ಬಿಎಂಟಿಸಿ ನಿಗಮ ಮುಂಜಾಗ್ರತಾ ಕ್ರಮಕೈಗೊಂಡಿದೆ. ಬಿಎಂಟಿಸಿ ಎಲ್ಲ ಡಿಪೋಗಳಿಗೂ ಪೊಲೀಸ್ ಭದ್ರತೆ ನೀಡುವಂತೆ ನಿಗಮ ಮನವಿ ಮಾಡಿದೆ. ಅಲ್ಲದೇ ಬಸ್ ನಿಲ್ದಾಣಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಮೂಲಕ ಬಿಎಂಟಿಸಿ ಬಸ್ ರಸ್ತೆಗಿಳಿದಾಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಗಳ ಕಾರ್ಯಚರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದ್ದು, ಡಿಪೋ ಮ್ಯಾನೇಜರ್ ಗಳು ಕಡ್ಡಾಯವಾಗಿ ಡಿಪೋದಲ್ಲಿದ್ದು ಬಸ್ ಕಾರ್ಯಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಇನ್ನೂ ರಾಜ್ಯಾದ್ಯಂತ ಕೆಸ್ಆರ್ಟಿಸಿ ಬಸ್ ಸಂಚರಿಸಲಿವೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಎಂಟಿಸಿ ಬಸ್ ಸಂಚಾರ ಇರಲಿದೆ ಎಂದು ಮಾಹಿತಿ ನೀಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications