ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನ : ಸೇತುವೆಯಿಂದ ಬಿದ್ದ ಕೆಎಸ್ಆರ್‌ಟಿಸಿ ಬಸ್

|
Google Oneindia Kannada News

ಹಾಸನ, ಮಾರ್ಚ್ 21 : ಬೇಲೂರು ಬಳಿ ಕೆಎಸ್ಆರ್‌ಟಿಸಿ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ. 30 ವಿದ್ಯಾರ್ಥಿಗಳು ಸೇರಿದಂತೆ 44 ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಸೋಮವಾರ ಬೆಳಗ್ಗೆ 8 ಗಂಟೆಗೆ ಸಕಲೇಶಪುರಿಂದ ಹೊರಟಿಟ್ಟ ಬಸ್ ಬೇಲೂರಿಗೆ ಬರುತ್ತಿತ್ತು. ಈ ಸಮಯದಲ್ಲಿ ಬಿಕ್ಕೋಡು-ವಾಟೆಹಳ್ಳ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹಳ್ಳಕ್ಕೆ ಉರುಳಿದೆ.

ಅಪಘಾತದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ 44 ಪ್ರಯಾಣಿಕರು ಗಾಯಗೊಂಡಿದ್ದು, ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. [ರಾಜ್ಯದ ನಗರಗಳಲ್ಲಿ ಮೇ ಅಂತ್ಯದ ವೇಳೆಗೆ ನಗರ ಸಾರಿಗೆ]

bus

'ವಾಟೇಹಳ್ಳ ಸಮೀಪ ಬಸ್ ಬರುತ್ತಿದ್ದಾಗಲೇ ಕಟ-ಕಟ ಶಬ್ದ ಬಂತು ಆಕ್ಸೆಲ್ ಬ್ಲೇಡ್ ತುಂಡಾಗಿ ಬಸ್ ಹಳ್ಳಕ್ಕೆ ಉರುಳಿತು' ಎಂದು ಬಸ್ಸಿನ ನಿರ್ವಾಹಕ ಪ್ರದೀಪ್ ಹೇಳಿದ್ದಾರೆ. [13 KSRTC ಬಸ್ ನಿಲ್ದಾಣದಲ್ಲಿ ಉಚಿತ ವೈ-ಫೈ ಸೇವೆ]

ಅಪಘಾತದಲ್ಲಿ ಗಾಯಗೊಂಡವರಿಗೆ ಕೆಎಸ್ಆರ್‌ಟಿಸಿಯಿಂದ 1 ಸಾವಿರ ರೂ. ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆದರೆ, ಪ್ರಯಾಣಿಕರು ಹೆಚ್ಚಿನ ಪರಿಹಾರಕ್ಕೆ ನೀಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

ಈ ಅಪಘಾತದಲ್ಲಿ ಅರೇಹಳ್ಳಿಯ ನಿವಾಸಿ ತುಂಬು ಗರ್ಭಿಣಿ ಪ್ರಮೀಳಾ ಅವರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

English summary
More than 30 passengers injured when KSRTC bus fell off a bridge near Belur, Hassan district on Monday, March 21 morning. The driver lost control over the vehicle as it reached the bridge. The bus was on the way to Belur from Sakaleshpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X