ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರಿನಲ್ಲಿ ಪಲ್ಟಿಯಾದ ಬಸ್: 20 ಜನರಿಗೆ ಗಂಭೀರ ಗಾಯ

|
Google Oneindia Kannada News

ಚಿಕ್ಕಮಗಳೂರು, ಜೂನ್ 15: ಚಿಕ್ಕಮಗಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಸ್ಲೀಪರ್ ಬಸ್ಸು ಪಲ್ಟಿಯಾದ ಪರಿಣಾಮ 20 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಬಸ್ಸು: 17 ಮಂದಿ ಸಾವುರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಬಸ್ಸು: 17 ಮಂದಿ ಸಾವು

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಬಸ್ಸು, ಇಂದು ಬೆಳಗ್ಗಿನ ಜಾವ 5:30 ರ ಹೊತ್ತಿಗೆ ಎನ್ ಆರ್ ಪುರ ತಾಲೂಕಿನ ಗುಡ್ಡೆಹಳ್ಳದ ಸಮೀಪ ಅಪಘಾತಕ್ಕೀಡಾಗಿದೆ. ಅತಿಯಾದ ಮಳೆಯಿಂದ ರಸ್ತೆ ಹಾಳಾಗಿದ್ದು, ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಎರಡು ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.

KSRTC bus met with an accident in chikkamagaluru

ಈ ಬಸ್ಸಿನಲ್ಲಿ ಬಿಜೆಪಿಯ ಮಾಧ್ಯಮ ಸಲಹೆಗಾರರರಾದ ಎಸ್ ಶಾಂತಾರಾಮ್ ಮತ್ತು ಹೊಸ ದಿಗಂತ ದಿನಪತ್ರಿಕೆಯ ಮಾಜಿ ಸಂಪಾದಕ ದು ಗು ಲಕ್ಷ್ಮಣ ಅವರೂ ಪ್ರಯಾಣಿಸುತ್ತಿದ್ದರು. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

KSRTC bus met with an accident in chikkamagaluru

ಗಾಯಾಳುಗಳನ್ನು ಎನ್ ಆರ್ ಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
A KSRTC bus travelling from Bengaluru to Shringeri met with an accident in Guddehalla near N R Pura. 20 passengers are injured, and admitted to a government hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X