ಚಿಕ್ಕಬಳ್ಳಾಪುರ : ಕೆರೆಗೆ ಉರುಳಿದ ಕೆಎಸ್ಆರ್ಟಿಸಿ ಬಸ್
ಚಿಕ್ಕಬಳ್ಳಾಪುರ, ಡಿ. 10 : ಕೆಎಸ್ಆರ್ಟಿಸಿ ಬಸ್ ಶಿಡ್ಲಘಟ್ಟ ತಾಲೂಕಿನ ಇರಿಗಪ್ಪನಹಳ್ಳಿ ಕೆರೆಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಬುಧವಾರ ಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಇರಿಗಪ್ಪನಹಳ್ಳಿ ಕೆರೆಗೆ ಚಾಲನಕ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಗಾಯಗೊಂಡವರನ್ನು ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
2013ರ ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆಯ ಬೇಲೂರಿನ ವಿಷ್ಣುಸಮುದ್ರ ಕೆರೆಗೆ ಕೆಎಸ್ಆರ್ಟಿಎಸ್ ಬಸ್ ಉರುಳಿ ಬಿದ್ದಿತ್ತು, ಇದರಲ್ಲಿ 8 ಮಂದಿ ಮೃತಪಟ್ಟಿದ್ದರು. [ವಿಷ್ಣು ಸಮುದ್ರ ಬಸ್ ದುರಂತ]
Post by Oneindia Kannada.












Click it and Unblock the Notifications