ಜನವರಿ 25ರಂದು ಸರ್ಕಾರಿ ಬಸ್ಗಳು ರಸ್ತೆಗಿಳಿಯವು
ಬೆಂಗಳೂರು, ಜನವರಿ 23: ಮಹದಾಯಿ ಕುರಿತು ಪ್ರಧಾನಿ ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಕಳಸಾ ಬಂಡೂರಿ ಹೊರಾಟಗಾರರ ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಜನವರಿ 25ರ ರಾಜ್ಯ ಬಂದ್ಗೆ ಕೆಎಸ್ಆರ್ಟಿಸಿ ನೌಕರರ ಸಂಘ ಬೆಂಬಲ ಸೂಚಿಸಿದೆ.
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ನೌಕರರ ಸಂಘಗಳು ಬಂದ್ಗೆ ಬೆಂಬಲ ಸೂಚಿಸಿರುವ ಪರಿಣಾಮ ಜನವರಿ 25ರಂದು ರಾಜ್ಯಾದ್ಯಂತ ಯಾವುದೇ ಕೆಎಸ್ಆರ್ಟಿಸಿ ಮತ್ತು ನಗರದಲ್ಲಿ ಬಿಎಂಟಿಸಿ ಬಸ್ಗಳು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ರಸ್ತೆಗಿಳಿಯುವುದಿಲ್ಲ.
ಹೊರ ನಗರಗಳಿಗೆ ತೆರಳುವ ಪ್ರಯಾಣಿಕರು, ಈಗಾಗಲೇ ಟಿಕೆಟ್ ಬುಕ್ ಮಾಡಿ ಕಾಯುತ್ತಿರುವ ಪ್ರಯಾಣಿಕರು ಅಂದು ಒದ್ದಾಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಓಲಾ ಮತ್ತು ಟ್ಯಾಕ್ಸಿ ಸಂಘಟನೆಗಳೂ ಕೂಡ ಬಂದ್ಗೆ ಬೆಂಬಲ ಸೂಚಿಸಿರುವ ಕಾರಣ ಅಂದು ಓಲಾ ಮತ್ತು ಇತರ ಟ್ಯಾಕ್ಸಿ ಕೂಡಾ ಇರುವುದಿಲ್ಲ. ಬಸ್ ಸಂಚಾರ ಇಲ್ಲದ ಕಾರಣ ವಿದ್ಯಾರ್ಥಿಗಳೂ ಸಾಕಷ್ಟು ತೊಂದರೆ ಅನುಭವಿಸುವ ಸಾಧ್ಯತೆ ಇದೆ.

ಜನವರಿ 25ರ ರಾಜ್ಯಬಂದ್ಗೆ ಪರ-ವಿರೋಧ ಚರ್ಚೆಗಳು ಹುಟ್ಟಿ, ಬಿಜೆಪಿಯು ಇದೊಂದು ಸರ್ಕಾರ ಪ್ರಾಯೋಜಿತ ಬಂದ್ ಎಂದು ಕರೆದು ಗೇಲಿ ಮಾಡಿದೆ. ಇದರ ಬೆನ್ನಲ್ಲೆ ಕೆಲವು ಸಂಘಟನೆಗಳು ರಾಜ್ಯ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಹೇಳಿವೆ, ಬಂದ್ ನಡೆಯುವುದೇ ಡೊಲಾಯಮಾನಯ ಸ್ಥಿತಿಯಲ್ಲಿದ್ದಾಗ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಬಂದ್ಗೆ ಬೆಂಬಲ ಸೂಚಿಸಿರುವುದು ಬಂದ್ ಆಯೋಜಿಸಿರುವ ಸಂಘಟನೆಗಳಿಗೆ ಆನೆ ಬಲ ಬಂದಿದೆ.
ಬಂದ್ಗೆ ಈಗಾಗಲೇ ಹಲವು ಕನ್ನಡ ಪರ ಸಂಘಟನೆಗಳು, ಖಾಸಗಿ ಶಾಲೆಗಳ ಒಕ್ಕೂಟ, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ, ಚಲನಚಿತ್ರ ಮಂಡಳಿ, ಓಲಾ, ಟ್ಯಾಕ್ಸಿ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.

ಜನವರಿ 25 ರಂದು ಬಸ್ಗಳು ರಸ್ತೆಗಿಳಿಯುವುದಿಲ್ಲವಾದ್ದರಿಂದ ಹೊರ ನಗರಗಳಿಗೆ, ರಾಜ್ಯಗಳಿಗೆ ತೆರಳ ಬೇಕಾದವರು ಮೊದಲೇ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವುದು ಉತ್ತಮ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ












Click it and Unblock the Notifications