KSRTC Employees: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್
ಬೆಂಗಳೂರು: ಕರ್ನಾಟ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮತ್ತೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ 31-01-2026ರ ಸಂಜೆ 5.30ರವರೆಗೆ ಆನ್ ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಆದರೇ ಅನೇಕರು ವರ್ಗಾವಣೆ ದಿನಾಂಕ ವಿಸ್ತರಣೆಗೆ ಕೋರಿದ್ದರ ಹಿನ್ನಲೆಯಲ್ಲಿ ಪ್ರಸ್ತುತ, ನೌಕರರ ಹಿತದೃಷ್ಠಿಯಿಂದ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:28-02-2026 ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ. ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆಯಲು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ನಿಗಮ ವರ್ಗಾವಣೆ ಬಗ್ಗೆ ಅವಶ್ಯಕ ಸೂಚನೆಗಳು
* ನೌಕರರು ವರ್ಗಾವಣೆ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ವರ್ಗಾವಣೆಗೆ ಹಕ್ಕು ಹೊಂದಿರುವುದಿಲ್ಲ.
* ಸಾರ್ವತ್ರಿಕ ವರ್ಗಾವಣೆ ( ಅಂತರ ನಿಗಮ ) ಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಖಾಯಂ ನೌಕರರಾಗಿರತಕ್ಕದ್ದು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನಿಗಮದಲ್ಲಿ ಕನಿಷ್ಠ 10 ವರ್ಷ (ಪರೀಕ್ಷಾರ್ಥ ದಿನಾಂಕದಿಂದ) ಕರ್ತವ್ಯ ನಿರ್ವಹಿಸಿರಬೇಕು. (ಪತಿ/ಪತ್ನಿ , ಶೇಕಡ 40ಕ್ಕಿಂತ ಹೆಚ್ಚಿನ ಅಂಗವಿಕಲತೆ/ ತೀವ್ರ ಅನಾರೋಗ್ಯ ಹಾಗೂ ಪರಸ್ಪರ ವರ್ಗಾವಣೆ ಹೊರತುಪಡಿಸಿ)
* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ (ನಡತೆ ಮತ್ತು ಶಿಸ್ತು) ನಿಯಮಾವಳಿಗಳು 1971 ರ ನಿಯಮಾವಳಿ 23 ರಡಿಯಲ್ಲಿ ಶಿಸ್ತು ಪ್ರಕರಣಗಳು ಬಾಕಿ ಇದ್ದಲ್ಲಿ, ಅಂತಹ ನೌಕರರು ವರ್ಗಾವಣೆಗೆ ಅರ್ಹರಾಗುವುದಿಲ್ಲ.
* ವರ್ಗಾವಣೆಯನ್ನು ಒಂದು ನಿಗಮದಿಂದ ಮತ್ತೊಂದು ನಿಗಮಕ್ಕೆ ಮಾತ್ರ ಕಲ್ಪಿಸಲಾಗಿದ್ದು, ನೌಕರರು ನಿಗಮವನ್ನು ಮಾತ್ರ ಕೋರಿ ವರ್ಗಾವಣೆ ಅರ್ಜಿ ಸಲ್ಲಿಸುವುದು. ನಿಗಮಕ್ಕೆ ವರ್ಗಾವಣೆಯಾದ ನಂತರ ಆಯಾ ನಿಗಮಗಳು ಅವಶ್ಯಕತೆಗೆ ಅನುಗುಣವಾಗಿ ವಿಭಾಗಗಳಿಗೆ ನಿಯೋಜಿಸುತ್ತವೆ.
* ನೌಕರರ ಅಂತರ ನಿಗಮ ವರ್ಗಾವಣೆಯು ಶಾಶ್ವತ ವ್ಯವಸ್ಥೆಯಾಗಿದ್ದು, ಒಂದು ಬಾರಿ ವರ್ಗಾವಣೆ ಆದೇಶ ಹೊರಡಿಸಿದ ನಂತರ ಯಾವುದೇ ಕಾರಣಕ್ಕೂ ವರ್ಗಾವಣೆಯನ್ನು ಹಿಂಪಡೆಯಲು /ಬದಲಾಯಿಸಲು ಅವಕಾಶವಿರುವುದಿಲ್ಲ.
* ವರ್ಗಾವಣೆಗೊಂಡ ನೌಕರರನ್ನು ವರ್ಗಾವಣೆಗೊಂಡ ನಿಗಮದಲ್ಲಿ ಶಾಶ್ವತವಾಗಿ ಸೇವೆಯಲ್ಲಿ ವಿಲೀನಗೊಳಿಸಲಾಗುವುದು. ತತ್ಸಂಬಂದ, ನೌಕರರು ಇಚ್ಚಾಪತ್ರ/ಒಪ್ಪಿಗೆಪತ್ರ ಸಲ್ಲಿಸತಕ್ಕದ್ದು. (ಅನುಬಂಧ 'ಅ' ಮತ್ತು 'ಆ')
* ಈ ಹಿಂದೆ ಅಂತರ ನಿಗಮ ವರ್ಗಾವಣೆ ಅವಕಾಶದಡಿಯಲ್ಲಿ ವರ್ಗಾವಣೆಗೊಂಡಿರುವ ನೌಕರರು ವರ್ಗಾವಣೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
* ವರ್ಗಾವಣೆ ಬಯಸುವ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರು ಆನ್ ಲೈನ್ ಅರ್ಜಿ ಭರ್ತಿ ಮಾಡಲು ಅರ್ಹತಾ ಮಾನದಂಡಗಳು ಹಾಗೂ ಇತರೆ ಅವಶ್ಯಕತೆಗಳನ್ನು ತಿಳಿಯಲು ಸುತ್ತೋಲೆ ಮತ್ತು ಆನ್ ಲೈನ್ ಅರ್ಜಿ ಭರ್ತಿ ಮಾಡುವ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ ಅರ್ಥ ಮಾಡಿಕೊಂಡು ಅರ್ಜಿ ಸಲ್ಲಿಸತಕ್ಕದ್ದು.
* ಆನ್ ಲೈನ್ ಮುಖಾಂತರ ಸಲ್ಲಿಸಲಾದ ಅರ್ಜಿಯು ಸುತ್ತೋಲೆಯಲ್ಲಿ ನೀಡಲಾದ ಎಲ್ಲಾ ಮಾನದಂಡಗಳನ್ನು ಪೂರೈಸಿದೆ ಎಂದು ಭಾವಿಸಬಾರದು. ಅರ್ಜಿಯು ನಂತರದ ಪರಿಶೀಲನೆಗೆ ಒಳಪಟ್ಟಿರುತ್ತದೆ. ಯಾವುದೇ ಸಂದರ್ಭದಲ್ಲಿ ಅನರ್ಹರೆಂದು ಕಂಡು ಬಂದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು.
* ಹಂತ ಹಂತವಾಗಿ ಅರ್ಜಿಯ ಎಲ್ಲಾ ವಿವರಗಳನ್ನು ಭರ್ತಿ ಮಾಡುವುದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಮತ್ತೆ ಬದಲಾವಣೆ ಮಾಡಲು ಅವಕಾಶವಿರುವಿದಿಲ್ಲ.
* ವರ್ಗಾವಣೆಯ ಸುತ್ತೋಲೆಯಲ್ಲಿ ತಿಳಿಸಿದಂತೆ ವಿನಾಯತಿ ಪ್ರಕರಣಗಳಿದ್ದಲ್ಲಿ ಸೂಕ್ತ ದಾಖಲಾತಿಗಳನ್ನು ಸುತೋಲೆಯಲ್ಲಿ ತಿಳಿಸಿದ ಕೊನೆಯ ದಿನಾಂಕದೊಳಗೆ ಆಯಾ ಆಡಳಿತಾಧಿಕಾರಿಗಳಿಗೆ ಸಲ್ಲಿಸುವುದು.
* ಅರ್ಜಿ ಭರ್ತಿ ಮಾಡಿದ ನಂತರದಲ್ಲಿ ಆಡಳಿತಾಧಿಕಾರಿಗಳಿಂದ ಅರ್ಜಿ ಪರಿಶೀಲನೆಯಾದ ಬಳಿಕ ನಿಮ್ಮ ಅರ್ಜಿಯು ಸ್ವೀಕೃತವಾಗಿದೆಯೇ /ತಿರಸ್ಕೃತವಾಗಿದೆಯೇ ಎಂಬುದರ ಕುರಿತು ಎಸ್ಎಂಎಸ್ ಕಳುಹಿಸಲಾಗುವುದು.
* ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಮುದ್ರಿಸಿ ನಿಮ್ಮ ವಿಭಾಗ/ಕಛೇರಿಯ ಆಡಳಿತಾಧಿಕಾರಿಯವರಿಗೆ ಅಗತ್ಯವಿರುವ ದಾಖಲಾತಿಗಳನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆಯುವುದು.
* ಪರಸ್ಪರ ಮತ್ತು ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು, ಪ್ರತ್ಯೇಕ ಅರ್ಜಿ ಸಲ್ಲಿಸುವುದು. ಪರಸ್ಪರ ವರ್ಗಾವಣೆಗೆ ಪರಸ್ಪರ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆ ಶೇ 15 ರಷ್ಟು ವ್ಯತ್ಯಾಸವನ್ನು ಪರಿಗಣಿಸಲಾಗುವುದು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications