KSRTC: ನೌಕರರ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತ ₹20 ಲಕ್ಷಕ್ಕೆ ಹೆಚ್ಚಳ
ಬೆಂಗಳೂರು, ಆಗಸ್ಟ್ 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಲ್ಲಿ ಉತ್ತಮ ಸಾರಿಗೆ ಸೇವೆ ನೀಡುತ್ತಿದೆ. ಇದಕ್ಕೆ ದಕ್ಷ ಚಾಲಕ, ನಿರ್ವಾಹಕರು ಹಾಗೂ ಸಿಬ್ಬಂದಿ ಕಾರಣವೆಂದು ಹಲವು ಭಾರಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ತಿಳಿಸಿದ್ದಾರೆ. ಇಂತಹ ನೌಕರರಿಗೆ ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅವರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತ ಹೆಚ್ಚಿಸಲಾಗಿದೆ ಎಂದು ಮಂಗಳವಾರ KSRTC ಅಧಿಕಾರಿಗಳು ಮಂಗಳವಾರ ಅಧಿಕೃತ ಮಾಹಿತಿ ನೀಡಿದ್ದಾರೆ.
ಸಾರಿಗೆ ನೌಕರರು ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.10 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ. ಇನ್ನೂ ನೌಕರರು KSRTC ಯ ಸೇವೆಯಲ್ಲಿರುವಾಗ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.1 ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತ ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿದೆ.

ಇದೇ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರು ಅಪಘಾತ ಹೊರತುಪಡಿಸಿ ಇತರೆ ಕೆಳಕಂಡ ಪ್ರಕರಣಗಳಲ್ಲಿ ರೂಪಾಯಿ 6 ಲಕ್ಷ ಪರಿಹಾರ ಮೊತ್ತ ನೀಡುತ್ತಿದ್ದಾರೆ.
ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅಂದರೆ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಹಾಗೂ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3.00 ಲಕ್ಷಗಳಿಂದ ರೂ. 10.00 ಲಕ್ಷಗಳಿಗೆ ಹೆಚ್ಚಿಸಿ 01.10.2023 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು.
ಅದರಂತೆ ಇದುವರೆವಿಗೂ 157 ಮೃತ ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮೃತ ನೌಕರರ ಅವಲಂಬಿತರಿಗೆ ಹೆಚ್ಚಿನ ಮೊತ್ತದ ಪರಿಹಾರ ನೀಡುವ ಮೂಲಕ, ಆರ್ಥಿಕ ಭದ್ರತೆ ಒದಗಿಸಿಕೊಡುವ ಸದುದ್ದೇಶದಿಂದ ದಿನಾಂಕ:01.09.2025 ರಿಂದ ಜಾರಿಗೆ ಬರುವಂತೆ ನಿಗಮದ ವತಿಯಿಂದ ನೀಡಲಾಗುತ್ತಿರುವ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ರೂ. 14 ಲಕ್ಷ ಗಳಿಗೆ ಹೆಚ್ಚಿಸಿ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಅಂದರೆ ಈ 14 ಲಕ್ಷ ರೂ. ಜೊತೆಗೆ ಇದರೊಂದಿಗೆ ರೂ.6 ಲಕ್ಷಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ವತಿಯಿಂದ ಸೇರಿ ಒಟ್ಟು ಮೊತ್ತ 20 ಲಕ್ಷ ರೂಪಾಯಿ ಆಗಲಿದೆ ಎಂದು ಪ್ರಕಟಣೆಯಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications