KSRTC: ಪದವಿ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ
ಬೆಂಗಳೂರು, ಏಪ್ರಿಲ್.05: 2023-24ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗುತ್ತಿದೆ. ಇದೇ ವೇಳೆ ಕೆಎಸ್ಆರ್ಟಿಸೊ, ಬಿಎಂಟಿಸಿಯ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ಕಳೆದ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತೆ ಅವಧಿಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಈ ಬಗ್ಗೆ ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಹಲವು ಸೂಚನೆಗಳನ್ನು ನೀಡಿದೆ. "ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ದಿನಾಂಕ: 31.03.2024ಕ್ಕೆ ಮುಕ್ತಾಯಗೊಂಡಿದ್ದು, ಸದರಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ವಿಭಾಗಗಳಿಂದ ದೂರವಾಣಿ ಮುಖೇನ ಕೋರುತ್ತಿರುವುದನ್ನು ಪರಿಶೀಲಿಸಲಾಗಿದೆ" ಎಂದು ತಿಳಿಸಿದೆ.

"ಈಗಾಗಲೇ ಉಲ್ಲೇಖ-1 ರ ಸಾಮಾನ್ಯ ಸ್ಥಾಯಿ ಆದೇಶದ ಅನ್ವಯ ವಿದ್ಯಾರ್ಥಿ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯಗೊಂಡ ನಂತರ ಒಂದು ಅಥವಾ ಎರಡು ತಿಂಗಳ ಅವಧಿಗೆ ಬಸ್ ಪಾಸ್ ಅವಧಿ ವಿಸ್ತರಿಸಿ ನೀಡಲು ಅವಕಾಶವಿದೆ. ತಮ್ಮ ಹಂತದಲ್ಲಿಯೇ ಬಸ್ ಪಾಸ್ ವಿತರಿಸಲು ಕ್ರಮ ಕೈಗೊಳ್ಳದೇ, ವಿದ್ಯಾರ್ಥಿಗಳಿಗೆ ಅನಾನುಕೂಲ ಮಾಡುತ್ತಿರುವುದು ಸಮಂಜಸವಿರುವುದಿಲ್ಲ. ಆದಾಗ್ಯೂ ಈ ನಿಟ್ಟಿನಲ್ಲಿ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ" ಎಂದು ಹೇಳಿದೆ.
1. ದಿನಾಂಕ 31.03.2024 ರಂದು ಮುಕ್ತಾಯವಾಗುವ ವಿದ್ಯಾರ್ಥಿ ಬಸ್ ಪಾಸುಗಳನ್ನು, ಪರೀಕ್ಷೆ ವೇಳಾಪಟ್ಟಿಗೆ ಅನುಗುಣವಾಗಿ ಮಾನ್ಯತಾ ಅವಧಿಯನ್ನು ಒಂದು ತಿಂಗಳು ಅಥವಾ ಗರಿಷ್ಠ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು.
2. ಪಾಸ್ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು / ಎರಡು ತಿಂಗಳ ಶುಲ್ಕ ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು.
3. 2023-24ನೇ ಸಾಲಿನ ಬಸ್ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ, ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸುವುದು.
4. ಮೇಲ್ಕಂಡ ಅಂಶಗಳನ್ವಯ ಮಾನ್ಯತಾ ಅವಧಿ ವಿಸ್ತರಿಸಿರುವ ಬಸ್ ಪಾಸ್ಗಳ ಸಂಖ್ಯೆಯ ವಿವರಗಳನ್ನು ಈ ಕಚೇರಿಗೆ ಒದಗಿಸಬೇಕು ಎಂದಿದೆ. ಈ ವಿವರಗಳನ್ನು ಚಾಲಕ ಮತ್ತು ನಿರ್ವಾಹಕರುಗಳಿಗೆ ಅಗತ್ಯ ಮಾಹಿತಿ ನೀಡಿ ಸೂಕ್ತ ಕ್ರಮವಹಿಸಲು ತಿಳಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
-
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications