KSRTC: ಪದವಿ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ
ಬೆಂಗಳೂರು, ಏಪ್ರಿಲ್.05: 2023-24ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗುತ್ತಿದೆ. ಇದೇ ವೇಳೆ ಕೆಎಸ್ಆರ್ಟಿಸೊ, ಬಿಎಂಟಿಸಿಯ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ಕಳೆದ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತೆ ಅವಧಿಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಈ ಬಗ್ಗೆ ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಹಲವು ಸೂಚನೆಗಳನ್ನು ನೀಡಿದೆ. "ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ದಿನಾಂಕ: 31.03.2024ಕ್ಕೆ ಮುಕ್ತಾಯಗೊಂಡಿದ್ದು, ಸದರಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ವಿಭಾಗಗಳಿಂದ ದೂರವಾಣಿ ಮುಖೇನ ಕೋರುತ್ತಿರುವುದನ್ನು ಪರಿಶೀಲಿಸಲಾಗಿದೆ" ಎಂದು ತಿಳಿಸಿದೆ.

"ಈಗಾಗಲೇ ಉಲ್ಲೇಖ-1 ರ ಸಾಮಾನ್ಯ ಸ್ಥಾಯಿ ಆದೇಶದ ಅನ್ವಯ ವಿದ್ಯಾರ್ಥಿ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯಗೊಂಡ ನಂತರ ಒಂದು ಅಥವಾ ಎರಡು ತಿಂಗಳ ಅವಧಿಗೆ ಬಸ್ ಪಾಸ್ ಅವಧಿ ವಿಸ್ತರಿಸಿ ನೀಡಲು ಅವಕಾಶವಿದೆ. ತಮ್ಮ ಹಂತದಲ್ಲಿಯೇ ಬಸ್ ಪಾಸ್ ವಿತರಿಸಲು ಕ್ರಮ ಕೈಗೊಳ್ಳದೇ, ವಿದ್ಯಾರ್ಥಿಗಳಿಗೆ ಅನಾನುಕೂಲ ಮಾಡುತ್ತಿರುವುದು ಸಮಂಜಸವಿರುವುದಿಲ್ಲ. ಆದಾಗ್ಯೂ ಈ ನಿಟ್ಟಿನಲ್ಲಿ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ" ಎಂದು ಹೇಳಿದೆ.
1. ದಿನಾಂಕ 31.03.2024 ರಂದು ಮುಕ್ತಾಯವಾಗುವ ವಿದ್ಯಾರ್ಥಿ ಬಸ್ ಪಾಸುಗಳನ್ನು, ಪರೀಕ್ಷೆ ವೇಳಾಪಟ್ಟಿಗೆ ಅನುಗುಣವಾಗಿ ಮಾನ್ಯತಾ ಅವಧಿಯನ್ನು ಒಂದು ತಿಂಗಳು ಅಥವಾ ಗರಿಷ್ಠ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು.
2. ಪಾಸ್ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು / ಎರಡು ತಿಂಗಳ ಶುಲ್ಕ ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು.
3. 2023-24ನೇ ಸಾಲಿನ ಬಸ್ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ, ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸುವುದು.
4. ಮೇಲ್ಕಂಡ ಅಂಶಗಳನ್ವಯ ಮಾನ್ಯತಾ ಅವಧಿ ವಿಸ್ತರಿಸಿರುವ ಬಸ್ ಪಾಸ್ಗಳ ಸಂಖ್ಯೆಯ ವಿವರಗಳನ್ನು ಈ ಕಚೇರಿಗೆ ಒದಗಿಸಬೇಕು ಎಂದಿದೆ. ಈ ವಿವರಗಳನ್ನು ಚಾಲಕ ಮತ್ತು ನಿರ್ವಾಹಕರುಗಳಿಗೆ ಅಗತ್ಯ ಮಾಹಿತಿ ನೀಡಿ ಸೂಕ್ತ ಕ್ರಮವಹಿಸಲು ತಿಳಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications