KSRTC Electric Bus: ಜ.16 ರಿಂದ ಬೆಂಗಳೂರು-ಮೈಸೂರು ಮಧ್ಯೆ ಮೊದಲ ಅಂತರ್ ಜಿಲ್ಲಾ ಬಸ್ ಸಂಚಾರ
ಬೆಂಗಳೂರು, ಜನವರಿ 13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಮೊದಲ ಅಂತರ್ ಜಿಲ್ಲಾ ಎಲೆಕ್ಟ್ರಿಕ್ ಬಸ್ ಬೆಂಗಳೂರಿನಿಂದ ಮೈಸೂರಿಗೆ ಇದೇ ಜನವರಿ 16ರಂದು ಸೋಮವಾರ ಸಂಚಾರ ಆರಂಭಿಸಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮಹತ್ವಪೂರ್ಣ ಎಲೆಕ್ಟ್ರಿಕ್ ಬಸ್ ಪರಿಚಯಿಸುವ ಯೋಜನೆಯಡಿ ಒಟ್ಟು 50ಬಸ್ಗಳನ್ನು ಸಂಚಾರ ಬಿಡಲು ಚಿಂತನೆ ನಡೆಸಿದೆ. ಅದರ ಭಾಗವಾಗಿ ಬೆಂಗಳೂರು-ಮೈಸೂರು ಎರಡು ನಗರಗಳ ನಡುವೆ ಅಂತರ್ಜಿಲ್ಲಾ ಕೆಎಸ್ಆರ್ಟಿಸಿ ಇವಿ ಪವರ್ ಪ್ಲಸ್ (EV Power Plus) ಸಂಚರಿಸಲಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 40ಕ್ಕೂ ಹೆಚ್ಚು ಆಸನಗಳನ್ನು ಹೊಂದಿರುವ ನೀಲಿ ವರ್ಣದ ಎಸಿ ಸಹಿತ ಇವಿ ಪವರ್ ಪ್ಲಸ್ (EV Power Plus Bus) ಬಸ್ ರಾಜ್ಯ ರಾಜಧಾನಿ ಹಾಗೂ ಉದ್ಯಾನ ನಗರಿ ಬೆಂಗಳೂರಿನಿಂದ ಸಾಂಸ್ಕೃತಿಕ ಮತ್ತು ಅರಮನೆ ನಗರಿ ಮೈಸೂರು ನಗರಕ್ಕೆ ಕಾರ್ಯಾಚರಣೆ ಆರಂಭಿಸಲು ದಿನಗಣನೆ ಶುರುವಾಗಿದೆ. ಇದು ಈ ಭಾಗದ ಪ್ರಮಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ. ಮುಖ್ಯವಾಗಿ ರಾಜ್ಯಾದ್ಯಂತ ಭವಿಷ್ಯದಲ್ಲಿ ಪರಿಸರ ಸ್ನೇಹಿ ಬಸ್ಗಳ ಕಾರ್ಯಾಚರಣೆ ಚಿಂತನೆಗೆ, ಯೋಜನೆ ರೂಪಿಸಲು ಇದು ನಾಂದಿ ಹಾಡಲಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗವು ಅಂತರ್ ಜಿಲ್ಲಾ ಸಂಚಾರಕ್ಕೆ 50 ಎಲೆಕ್ಟ್ರಿಕ್ ಬಸ್ (Electric Bus)ಗಳನ್ನು ರಸ್ತೆಗಿಳಿಸುವುದಾಗಿ ಹೇಳಿಕೊಂಡಿದೆ. ಆದಷ್ಟು ಶೀಘ್ರವೇ ಇಷ್ಟು ಬಸ್ಗಳು ಸೇವೆಗೆ ತರಲಾಗುವುದು ಎಂದು ಈ ಹಿಂದೆ ತಿಳಿಸಿತ್ತು.
ವಿವಿಧೆಡೆ ಶೀಘ್ರವೇ 50 ಇವಿ ಪವರ್ ಪ್ಲಸ್ ಸಂಚಾರ
ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಅಂತರ್ ನಗರ ಹವಾನಿಯಂತ್ರಿತ ವಿದ್ಯುತ್ ಬಸ್ನ ಪ್ರಾಯೋಗಿಕ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಕೇಂದ್ರ ಸರ್ಕಾರವು 'ಮೇಕ್ ಇನ್ ಇಂಡಿಯಾ' ವಿದ್ಯುತ್ ಬಸ್ ಫೇಮ್-2 ಯೋಜನೆಯಡಿ 50 ಅಂತರ್ ನಗರ ಎಸಿ ವಿದ್ಯುತ್ ಚಾಲಿತ ಬಸ್ಗಳನ್ನು ಆದಷ್ಟು ಶೀಘ್ರವೇ ಸೇವೆ ನೀಡಲಿವೆ. ಇದಾದ ಬಳಿಕ ಸಾರ್ವಜನಿಕರು ಒಂದು ನಗರದಿಂದ ಮತ್ತೊಂದು ನಗರಕ್ಕೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಗಳಲ್ಲಿ ಸಂಚರಿಸಲು ಅನುಕೂಲವಾಗಲಿದೆ ಎಂದ ಸಚಿವರು ತಿಳಿಸಿದ್ದರು.

ಸಾರ್ವಜನಿಕರಿಂದ 'ಇವಿ ಪವರ್ ಪ್ಲಸ್' ನಲ್ಲಿ ಅತ್ಯುತ್ತಮ ಅನುಭವ ಪಡೆಯಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಜೊತೆಗೆ ಭವಿಷ್ಯದಲ್ಲಿ 'ಇವಿ ಪವರ್ ಪ್ಲಸ್' ಬಸ್ಗಳು ಬೆಂಗಳೂರಿನಿಂದ ಮೈಸೂರಿನ ಜೊತೆಗೆ ಬೆಂಗಳೂರುನಿಂದ- ಮಡಿಕೇರಿ, ಬೆಂಗಳೂರಿನಿಂದ-ವಿರಾಜಪೇಟೆ, ಬೆಂಗಳೂರಿನಿಂದ- ದಾವಣಗೆರೆ, ಬೆಂಗಳೂರಿನಿಂದ- ಶಿವಮೊಗ್ಗ ಹಾಗೂ ಬೆಂಗಳೂರಿನಿಂದ -ಚಿಕ್ಕಮಗಳೂರು ನಗರಗಳಿಗೆ ಸಂಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ
ಈ ಎಲೆಕ್ಟ್ರಿಕ್ ಬಸ್ಗಳಿಗೆ ಚಾರ್ಚಿಂಗ್ ಕೇಂದ್ರವನ್ನು ಈಗಾಗಲೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಿರ್ಮಿಸಲಾಗಿದೆ. ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ಇವಿ ಚಾರ್ಚಿಂಗ್ ಕೇಂದ್ರ ಸ್ಥಾಪಿಸಲಾಗುತ್ತಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದು ನಿಗಮ ಮಾಹಿತಿ ನೀಡಿದೆ.
-
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications