KSRTC: ಮೃತ ಪ್ರಯಾಣಿಕರ ಪರಿಹಾರ 10 ಲಕ್ಷ ರೂ.ಗೆ ಹೆಚ್ಚಳ: ಚೆಕ್ ವಿತರಿಸಿದ ಸಚಿವ
ಬೆಂಗಳೂರು, ಫೆಬ್ರವರಿ 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಸೇವೆಯಿಂದ ಸಾಕಷ್ಟು ಹೆಸರು ಮಾಡಿದ್ದು, ಅನೇಕ ಗೌರವ-ಪ್ರಶಸ್ತಿಗಳಿಗೂ ಪಾತ್ರವಾಗಿದೆ. ಈ ನಿಗಮವು ಜನವರಿ 2024 ರಿಂದ ಅನ್ವಯವಾಗುವಂತೆ ಅಪಘಾತ ಪರಿಹಾರ ಮೊತ್ತವನ್ನು ಇದೇ ಮೊದಲ ಬಾರಿಗೆ ರೂ.10 ಲಕ್ಷಕ್ಕೆ ಹೆಚ್ಚಿಸಿದೆ.
ಸೋಮವಾರ ಕರ್ನಾಟಕ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು, ಹಾಗೂ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್(ವಾಸು) ರವರು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರೊಬ್ಬರ ಕುಟುಂಬಕ್ಕೆ ಇದೇ ಮೊದಲ ಬಾರಿಗೆ 10 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ವಿತರಿಸಿದರು.

ಮೊದಲಿದ್ದ ಪರಿಹಾರ ಮೊತ್ತವೆಷ್ಟು?
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ನಿಗಮದ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರು ಮೃತಪಟ್ಟರೆ ಅವರ ಅವಲಂಬಿರಿಗೆ ಈ ಹಿಂದೆ 3 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ನೀಡಲಾಗುತ್ತಿತ್ತು. ಇದೀಗ ಅವರಿಗೆ ನೀಡುವ ಈ ಪರಿಹಾರ ಹಣದ ಪ್ರಮಾಣವನ್ನು 3 ಲಕ್ಷ ರೂ.ನಿಂದ 10 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಅಲ್ಲದೇ ಈ ನಿಯಮ ಕಳೆದ ಜನವರಿ 1ರಿಂದಲೇ ಜಾರಿಗೆ ಬರುವಂತೆ ತಿಳಿಸಲಾಗಿದೆ.
ಇದೇ ತಿಂಗಳು ಫೆಬ್ರವರಿ 04 ರಂದು ಹಾಸನ ವಿಭಾಗದ, ಚನ್ನರಾಯಪಟ್ಟಣ ಘಟಕದ ವಾಹನ ಸಂಖ್ಯೆ ಕೆಎ-13-ಎಫ್-2261 ಈ ಸಂಖ್ಯೆಯ ನಿಗಮದ ಬಸ್ ಬೆಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುತ್ತಿತ್ತು. ಈ ವೇಳೆ ಸಕಲೇಶಪುರದ ಸಮೀಪ ಬಾಗೆ ಎಂಬ ಸ್ಥಳದ ತಿರುವಿನಲ್ಲಿ ಅಪಘಾತ ಉಂಟಾಗಿತ್ತು.
ಕುಟುಂಬಕ್ಕೆ ನೆರವು, ಸಾಂತ್ವನ
ಈ ವೇಳೆ ಬಸ್ಒಳಗೆ ಇದ್ದ ಪ್ರಯಾಣಿಕ ಜಿ.ಎನ್ ಅಮೃತ (34) ಅವರು ತೀವ್ರ ರಕ್ತಸ್ರಾವ ವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತರ ತಂದೆಯಾದ ಜಿ.ಡಿ ನಾಗರಾಜುರವರಿಗೆ ಇಂದು ರೂಪಾಯಿ 10 ಲಕ್ಷಗಳ ಅಪಘಾತ ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದರು.

ಅಪಘಾತಗಳು ಆಕಸ್ಮಿಕವೇ ಆದರೂ ಅದರಿಂದಾಗುವ ಪ್ರಾಣ ಹಾನಿ ಮತ್ತು ಕುಟುಂಬಕ್ಕೆ ಉಂಟಾಗುವ ನಷ್ಟವನ್ನು ಭರಿಸಲು ಅಸಾಧ್ಯ. ಆದರೂ ನಿಗಮವು ಪ್ರಯಾಣಿಕರೆಡೆಗಿನ ತನ್ನ ಜವಾಬ್ದಾರಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಜಾರಿಗೊಳಿಸಿದೆ.
ಇತ್ತೀಚೆಗಷ್ಟೇ ಅಪಘಾತಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ರಾತ್ರಿ ಪಾಳಿಯ ಬಸ್ಸುಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರಿಗೆ ಫ್ಲಾಸ್ಕ್ (ಕಾಪಿ/ಟೀ/ಬಿಸಿನೀರು ಕುಡಿಯಲು ಅನುವಾಗುವಂತೆ) ನೀಡಲಾಗಿದೆ ಎಂದು ತಿಳಿಸಿದರು.
ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷರು ಅಪಘಾತಗಳನ್ನು ತಡೆಗಟ್ಟಲು ಸಂಸ್ಥೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಇಲಾಖೆ ವ್ಯವಸ್ಥಾಪಕ ವಿ.ಅನ್ಬುಕುಮಾರ್, ನಿಗಮ ನಿರ್ದೇಶಕಿ ಡಾ. ನಂದಿನಿ ದೇವಿ. ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications