KSRTC: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್ಆರ್ಟಿಸಿ
ಬೆಂಗಳೂರು ಜೂನ್ 26: ಇತ್ತೀಚೆಗೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸರಿಯಾಗಿ ಇಲ್ಲದೇ ಇರುವ ದೂರುಗಳು ಹೆಚ್ಚಾಗಿವೆ. ಹೀಗಾಗಿ ಕೆಎಸ್ಆರ್ಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಗಳಿಲ್ಲದೆ ಪರದಾಡುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಹೆಚ್ಚಿನ ವಿದ್ಯಾರ್ಥಿಗಳ ಬೇಡಿಕೆ ಇರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್ಗಳ ಸೇವೆ ಒದಗಿಸಲು ಮುಂದಾಗಿದೆ.

ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕಿಕ್ಕಿರಿದ ಬಸ್ಗಳ ಹಿಂದೆ ಓಡುವ ಹಾಗೂ ಫುಟ್ಬೋರ್ಡಿಂಗ್ ನಲ್ಲಿ ನಿಂತುಕೊಂಡು ಪ್ರಯಾಣ ಮಾಡುವ ವೀಡಿಯೊಗಳು ವೈರಲ್ ಆದ ನಂತರ ಸಾರಿಗೆ ಸೌಲಭ್ಯ ವಿರುದ್ಧ ತೀವ್ರ ಟೀಕೆಗಳು ಕೇಳಿಬರುತ್ತಿವೆ.
ಹೌದು.. ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ಗಳನ್ನು ನೀಡಲಾಗುತ್ತಿದೆ. ಸಾಮಾನ್ಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಪ್ರಾರಂಭ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳನ್ನು ಹತ್ತುವ ಸ್ಥಳಗಳಲ್ಲಿ ಬಸ್ಗಳನ್ನು ನಿಲ್ಲಿಸಲಾಗುತ್ತಿಲ್ಲ. ಹೀಗಾಗಿ ಸಾರಿಗೆ ನಿಗಮವನ್ನು ಜನರು ಮತ್ತು ವಿರೋಧ ರಾಜಕೀಯ ಪಕ್ಷಗಳು ಟೀಕಿಸಿವೆ. ಅಲ್ಲದೆ ಇಂತಹ ಸಮಸ್ಯೆಗಳ ವಿರುದ್ಧ ರಾಮನಗರ ಮತ್ತು ಮಂಡ್ಯದಲ್ಲಿ ಕೆಲ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಕೂಡ ನಡೆಸಿದ್ದರು.
ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಬಸ್ ನಿಗಮವು ಸದ್ಯ ಕ್ರಮ ಕೈಗೊಂಡಿದೆ. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಈ ಬಗ್ಗೆ ಮಾತನಾಡಿ, "ಕಳೆದ ವರ್ಷ ವಿಶೇಷವಾಗಿ ತುಮಕೂರು, ರಾಮನಗರ ಮತ್ತು ಚಿಕ್ಕಬಳ್ಳಾಪುರದಂತಹ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಬಸ್ಗಳನ್ನು ಪಡೆಯಲು ಸಮಸ್ಯೆಗಳನ್ನು ಎದುರಿಸಿರುವುದು ಹೆಚ್ಚಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಕೆಎಸ್ಆರ್ಟಿಸಿ ವಿದ್ಯಾರ್ಥಿಗಳಿಂದ ಬಂದ ದೂರುಗಳನ್ನು ಪರಿಶೀಲಿಸಲಾಗಿದೆ. ನಾವು ತಕ್ಷಣವೇ ಅವರನ್ನು ಒಂದೊಂದಾಗಿ ಪರಿಹರಿಸಲು ಪ್ರಾರಂಭಿಸಿದ್ದೇವೆ. ಅಂತಹ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ, ವಿಶೇಷವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಪೀಕ್ ಅವರ್ನಲ್ಲಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ'' ಎಂದು ಅವರು ಹೇಳಿದರು.
"ಸದ್ಯ ನಾವು ಹೆಚ್ಚಿನ ದೂರುಗಳನ್ನು ಸ್ವೀಕರಿಸಿದಲ್ಲೆಲ್ಲಾ ಬಸ್ ವ್ಯವಸ್ಥೆಯನ್ನು ಮಾಡಿದ್ದೇವೆ. ಮುಂಬರುವ ತಿಂಗಳುಗಳಲ್ಲಿ ನಾವು 500ಕ್ಕೂ ಹೆಚ್ಚು ಬಸ್ಗಳನ್ನು ಸೇರಿಸುತ್ತೇವೆ. 2,000 ಹೆಚ್ಚಿನ ಸಿಬ್ಬಂದಿಯನ್ನು ಸೇರಿಸುತ್ತೇವೆ. ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಏಕೆಂದರೆ ಬಸ್ ಸಮಸ್ಯೆ ಬಗೆಗಿನ ದೂರುಗಳನ್ನು ನಾವು ಬಗೆಹರಿಸುತ್ತಿದ್ದೇವೆ" ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಬಸ್ ನಿಗಮವು ಪರಿಹರಿಸಿದೆ ಎಂದು ಹೇಳುತ್ತಿಲ್ಲ. ಹೊಸ ಕಾಲೇಜುಗಳು ಮತ್ತು ಶಾಲೆಗಳು, ಕೋಚಿಂಗ್ ಹಬ್ಗಳು, ತರಬೇತಿ ಸಂಸ್ಥೆಗಳು, ಹಾಸ್ಟೆಲ್ಗಳು, ವಸತಿ ಲೇಔಟ್ಗಳು ಮತ್ತು ಇತರ ಮೂಲಸೌಕರ್ಯಗಳುವ ಕಡೆಯಲ್ಲಿ ಸಾರಿಗೆ ಸಮಸ್ಯೆ ಎದುರಾಗುತ್ತಿದೆ. ಬಸ್ಗೆ ಬೇಡಿಕೆ ಹೆಚ್ಚಾಗಿದೆ. ಅಂತಹ ಮಾರ್ಗಗಳಿಗೆ ಹೊಸ ಬಸ್ಸುಗಳ ಪ್ರಸ್ತಾಪವನ್ನು ನಾವು ಇಟ್ಟಿದ್ದೇವೆ. ಬೇಡಿಕೆಯ ಆಧಾರದ ಮೇಲೆ ನಾವು ಅವುಗಳನ್ನು ಸಹ ಪರಿಹರಿಸುತ್ತೇವೆ ಎಂದು ಅನ್ಬುಕುಮಾರ್ ಹೇಳಿದರು.












Click it and Unblock the Notifications