Bus Pass Extension: ಪದವಿ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಿಸಿದ KSRTC
ಬೆಂಗಳೂರು, ಜೂನ್ 30: ರಾಜ್ಯದಲ್ಲಿ ವಿವಿಧ ಪದವಿ ಕೋರ್ಸ್ಗಳ ಪರೀಕ್ಷೆಗಳು ಆಗಸ್ಟ್ ನಲ್ಲಿ ನಡೆಯುವುದರಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ.
2022-23 ಸಾಲಿನ ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ಪದವಿವಿದ್ಯಾರ್ಥಿಗಳ ಬಸ್ಪಾಸ್ ಜೂನ್ 2023ರ ಅಂತ್ಯದವರೆಗೆ ಮಾತ್ರ ವಿಸ್ತರಿಸಲಾಗಿತ್ತು. ಆದರೆ ಈ ವಿದ್ಯಾರ್ಥಿಗಳ ಪರೀಕ್ಷೆಗಳು ಜುಲೈ/ಆಗಸ್ಟ್ ತಿಂಗಳಲ್ಲಿ ನಡೆಯಲಿವೆ.

ಈ ಕುರಿತು ಆಯಾ ವಿಶ್ವವಿದ್ಯಾನಿಲಯಗಳು ಅಧಿಸೂಚನೆಯನ್ನು ಹೊರಡಿಸಿವೆ. ಈ ಕಾರಣಕ್ಕೆ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡುವಂತೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಸಾರಿಗೆ ಇಲಾಖೆ ಎಲ್ಲ ನಾಲ್ಕು ನಿಗಮಗಳಿಗೆ ಮನವಿ ಸಲ್ಲಿಸಿದ್ದರು.
ಇದೀಗ ಆ ಮನವಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅನುಕೂಲತೆಗಾಗಿ ವಿಸ್ತರಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಬಸ್ ಸಿಬ್ಬಂದಿಗೆ ಸಾರಿಗೆ ಸಂಸ್ಥೆ ಸೂಚಿಸಿರುವ ಈ ಕೆಳಗಿನ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.
ಸಾರಿಗೆ ಸಂಸ್ಥೆ ಸೂಚನೆಗಳು
* ಯಾವ ಕೋರ್ಸ್ಳಿಗೆ ಮತ್ತು ಯಾವ ತರಗತಿಗಳು ಎಲ್ಲಿಯವರೆಗೆ ನಡೆಯುತ್ತವೆ ಎಂಬುದರ ಬಗ್ಗೆ ಸಂಬಂಧಿಸಿದ ಕಾಲೇಜುಗಳಿಂದ ದೃಢೀಕರಣ ಪತ್ರ ಪಡೆಯಬೇಕು.

* ಸದರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು.
* ಪಾಸ್ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು/ಎರಡು ತಿಂಗಳ ಶುಲ್ಕವನ್ನು ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಖಡ್ಡಾಯವಾಗಿ ನಮೂದಿಸುವುದು.
* 2022-23 ಸಾಲಿನ ಬಸ್ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications