Bus Pass Extension: ಪದವಿ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಿಸಿದ KSRTC
ಬೆಂಗಳೂರು, ಜೂನ್ 30: ರಾಜ್ಯದಲ್ಲಿ ವಿವಿಧ ಪದವಿ ಕೋರ್ಸ್ಗಳ ಪರೀಕ್ಷೆಗಳು ಆಗಸ್ಟ್ ನಲ್ಲಿ ನಡೆಯುವುದರಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ.
2022-23 ಸಾಲಿನ ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ಪದವಿವಿದ್ಯಾರ್ಥಿಗಳ ಬಸ್ಪಾಸ್ ಜೂನ್ 2023ರ ಅಂತ್ಯದವರೆಗೆ ಮಾತ್ರ ವಿಸ್ತರಿಸಲಾಗಿತ್ತು. ಆದರೆ ಈ ವಿದ್ಯಾರ್ಥಿಗಳ ಪರೀಕ್ಷೆಗಳು ಜುಲೈ/ಆಗಸ್ಟ್ ತಿಂಗಳಲ್ಲಿ ನಡೆಯಲಿವೆ.

ಈ ಕುರಿತು ಆಯಾ ವಿಶ್ವವಿದ್ಯಾನಿಲಯಗಳು ಅಧಿಸೂಚನೆಯನ್ನು ಹೊರಡಿಸಿವೆ. ಈ ಕಾರಣಕ್ಕೆ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡುವಂತೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಸಾರಿಗೆ ಇಲಾಖೆ ಎಲ್ಲ ನಾಲ್ಕು ನಿಗಮಗಳಿಗೆ ಮನವಿ ಸಲ್ಲಿಸಿದ್ದರು.
ಇದೀಗ ಆ ಮನವಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅನುಕೂಲತೆಗಾಗಿ ವಿಸ್ತರಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಬಸ್ ಸಿಬ್ಬಂದಿಗೆ ಸಾರಿಗೆ ಸಂಸ್ಥೆ ಸೂಚಿಸಿರುವ ಈ ಕೆಳಗಿನ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.
ಸಾರಿಗೆ ಸಂಸ್ಥೆ ಸೂಚನೆಗಳು
* ಯಾವ ಕೋರ್ಸ್ಳಿಗೆ ಮತ್ತು ಯಾವ ತರಗತಿಗಳು ಎಲ್ಲಿಯವರೆಗೆ ನಡೆಯುತ್ತವೆ ಎಂಬುದರ ಬಗ್ಗೆ ಸಂಬಂಧಿಸಿದ ಕಾಲೇಜುಗಳಿಂದ ದೃಢೀಕರಣ ಪತ್ರ ಪಡೆಯಬೇಕು.

* ಸದರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು.
* ಪಾಸ್ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು/ಎರಡು ತಿಂಗಳ ಶುಲ್ಕವನ್ನು ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಖಡ್ಡಾಯವಾಗಿ ನಮೂದಿಸುವುದು.
* 2022-23 ಸಾಲಿನ ಬಸ್ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
CBSE 10th Results 2026: ಹತ್ತನೇ ತರಗತಿ ನಂತರ ನಿಮ್ಮ ಆಯ್ಕೆ ಏನಾಗಿರಬೇಕು? ಮುಂದಿನ ಹಾದಿ ಹೀಗಿರಲಿ -
CBSE ಹೊಸ ನಿಯಮ: ಮುಖ್ಯ ವಿಷಯದಲ್ಲಿ ಫೇಲ್ ಆದರೂ ಪಾಸ್ ಅವಕಾಶ, CBSE ರಿಸಲ್ಟ್ ನೋಡುವುದು ಹೇಗೆ -
CBSE Results 2026: ಸಿಬಿಎಸ್ಇ 10 ಮತ್ತು 12ನೇ ತರಗತಿಯ ಉತ್ತರ ಪತ್ರಿಕೆಯ ಪ್ರತಿ ಪಡೆಯುವುದು ಹೇಗೆ? -
Central Board of Secondary Education: 10ನೇ ತರಗತಿ ಎರಡು ಪರೀಕ್ಷೆ ವ್ಯವಸ್ಥೆ: ಅವಕಾಶವೇ ಅಥವಾ ಹೆಚ್ಚುವರಿ ಒತ್ತಡವೇ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications