KSRTC Award: ಪ್ರತಿಷ್ಠಿತ 6 ಪ್ರಶಸ್ತಿಗೆ 'ಕರ್ನಾಟಕ ಸಾರಿಗೆ ನಿಗಮ' ಭಾಜನ: ಎಂಟೇ ತಿಂಗಳಲ್ಲಿ 51 ಪ್ರಶಸ್ತಿ
ಬೆಂಗಳೂರು, ಫೆಬ್ರವರಿ 17: ದೇಶದಲ್ಲಿಯೇ ಸಾರ್ವಜನಿಕ ಸಾರಿಗೆಗೆ ಹೆಸರುವಾಸಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಜನಮನ್ನಣೆ ಗಳಿಸಿದೆ. ಹಲವು ಪ್ರಶಸ್ತಿ ಪಡೆದ KSRTC ನಿಗಮವು ತನ್ನ ಸೇವೆಯಿಂದಲೇ ಇದೀಗ ಆರು ಪ್ರಮುಖ ಪ್ರಶಸ್ತಿಗೆ ಪಾತ್ರವಾಗಿದೆ.
ಶನಿವಾರ ಮುಂಬೈನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಕರ್ನಾಟಕದ KSRTC ನಿಗಮಕ್ಕೆ 01 'ವರ್ಲ್ಡ್ ಮ್ಯಾನುಫ್ಯಾಕ್ಚರಿಂಗ್ ಕಾಂಗ್ರೆಸ್' ಹಾಗೂ 05 'ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್' ಎಂಬ ಐದು ಪ್ರಶಸ್ತಿಗಳನ್ನು ನೀಡಿ ನಿಮಗದ ಮುಖ್ಯಸ್ಥರನ್ನು ಗೌರವಿಸಲಾಯಿತು.

KSRTC ಗೆ ಹಿಂದಿನಿಂದಲೇ ಅನೇಕ ಪ್ರಶಸ್ತಿಗಳು, ಗೌರವಗಳು ಧಕ್ಕಿವೆ. ಇದೀಗ ಈ 6 ಪ್ರಶಸ್ತಿಗಳ ಗರಿಮೆ ಸಿಕ್ಕಿದೆ. ಇದರಿಂದ ಕಳೆದ ಎಂಟು ತಿಂಗಳುಗಳಲ್ಲಿ 51 ಪ್ರಶಸ್ತಿಗಳಿಗೆ ನಿಗಮವು ಪಾತ್ರವಾಗಿದೆ. ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ ಎಂದು ಪ್ರಕಟಣೆ ಮಾಹಿತಿ ನೀಡಿದೆ.
ಯಾವ ವರ್ಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ?
* ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ. 'ಇ.ವಿ.ಪವರ್ ಪ್ಲಸ್'
* ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ- ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ
* ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ- ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆ
* ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ- ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಸಂಸ್ಥೆ
* ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ. ಜಾಗತಿಕ ಮಾನವ
* ಸಂಪನ್ಮೂಲ ಉಪಕ್ರಮದಲ್ಲಿ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಾದ ಡಾ. ಲತಾ ಟಿ.ಎಸ್ ರವರಿಗೆ ವಿಶ್ವ ಮಾರ್ಕೇಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಸ್ವೀಕರಿಸಿದರು.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ನಿನಾ ಇ ಉಡರ್ಡ ಅಸೋಸಿಯೇಟ್ಸ್ ಅಧ್ಯಕ್ಷರು ಹಾಗೂ ಮುಖ್ಯಸ್ಥರಾದ ಮಿಸ್. ನಿನಾ ಇ ಉಡರ್ಡ, ದುಬೈನ ಓಝೋನ್ ಗ್ರೂಪ್ ಮಾಲೀಕರು ಮತ್ತು ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್ ಅವರು ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ನಿಗಮದ ಮಂಡಳಿ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರ ಎಚ್ ಎಸ್. ಸತೀಶ್, ವಿಭಾಗೀಯ ತಾಂತ್ರಿಕ ತಜ್ಞರಾದ ಸೌಮ್ಯ.ಸಿ ಮತ್ತು ಸಹಾಯಕ ಆಡಳಿತಾಧಿಕಾರಿ ಶಿಬಾ.ಎಸ್ ಅವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ ಸೇವೆಗೆ ಅನೇಕ ಸಂಸ್ಥೆಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಗೌರವ ಸಲ್ಲಿಸುತ್ತಲೇ ಬಂದಿದೆ. ಇದೀಗ ಕಳೆದ ಎಂಟೆ ತಿಂಗಳಲ್ಲಿ ಅತ್ಯಧಿಕ ಪುರಸ್ಕಾರಗಳು ಲಭಿಸಿವೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications