ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮತ್ತೆ ಜೂನ್ 30 ರವರೆಗೆ ವಿಸ್ತರಣೆ:KSRTC
ಬೆಂಗಳೂರು, ಜೂನ್ 14: ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ, ಕಾಲೇಜುಗಳು ಆರಂಭವಾಗಿ ಸುಮಾರು ಎರಡು ವಾರ ಕಳೆಯುತ್ತಾ ಬಂದಿದೆ. ವಿದ್ಯಾರ್ಥಿಗಳು ನಿತ್ಯ ತಮ್ಮ ಶೈಕ್ಷಣಿಕ ಸಂಸ್ಥೆಗಳತ್ತ ಓಡಾಟ ಆರಂಭಿಸಿದ್ದಾರೆ. ಅವರಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಮತ್ತೆ ಬಸ್ ಪಾಸ್ ವಿಸ್ತರಣೆ ಮಾಡಿ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ ತರಗತಿಗಳು ಆರಂಭವಾಗಿವೆ. ಮತ್ತೊಂದೆಡೆ ಶಾಲಾ ದಾಖಲಾತಿಯು ನಡೆಯುತ್ತಿದೆ. ಶೈಕ್ಷಣಿಕ ತರಗತಿಗೆ ಹಾಜರಾಗಲು ಅನುಕೂಲವಾಗುವಂತೆ KSRTC ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30 ರವರೆಗೂ ವಿಸ್ತರಿಸಿ ಸಾರಿಗೆ ನಿಗಮ ಬುಧವಾರ ಸುತ್ತೋಲೆ ಹೊರಡಿಸಿದೆ. ಇದು ಶಾಲಾ ಮತ್ತು ಕಾಲೇಜುಗಳಿಗೆ ಅನ್ವಯವಾಗುತ್ತದೆ.

ಸರ್ಕಾರದ ಈ ವಿಸ್ತರಣೆಯು ಎಲ್ಲ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಾಸ್ ಪಡೆಯಲು ಮತ್ತಷ್ಟು ಕಾಲಾವಕಾಶ ಪಡೆಯಲು ಅನುಕೂಲವಾಗಲಿದೆ. ಜೂನ್ 30ರವರೆಗೆ ಶಾಲೆ-ಕಾಲೇಜುಗಳಿಗೆ ಓಡಾಡಲಿರುವ ವಿದ್ಯಾರ್ಥಿಗಳು ಶಾಲಾ ಶುಲ್ಕ ರಸೀದಿ ಇಲ್ಲವೇ ಹಿಂದಿನ ವರ್ಷದ ಪಾಸ್ ತೋರಿಸಿ ಓಡಾಡಬಹುದು.
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಸುಗಳಲ್ಲಿ ಪ್ರಯಾಣ ಇನ್ನೂ 15 ದಿನ ಅವಕಾಶ ನೀಡಿ ನಿಗಮವು ಸುತ್ತೋಲೆ ಹೊರಿಡಿಸಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಯು ಪ್ರಸ್ತಕ 2023-24 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಎಲಾಖೆಯ ಸೇವಾಸಿಂಧು ಪೋರ್ಟಲ್ ತಂತ್ರಜ್ಞಾನದ ಮೂಲಕ ಸಂಪೂರ್ಣ ಯಂತ್ರೀಕೃತವಾಗಿ ವಿತರಿಸಲು ಕ್ರಮ ಕೈಗೊಂಡಿದೆ. ಇನ್ನೇನು ಜೂನ್ 15ರಿಂದ ಪಾಸ್ಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಶುರುವಾಗಲಿದೆ. ವಿತರಣೆಗೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ನಿಗಮದ ಮೂಲಗಳು ತಿಳಿಸಿವೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications