ಜೂನ್ 22ರಿಂದ ಕೆಎಸ್ಆರ್‌ಟಿಸಿ ಅಂತರ್‌ ರಾಜ್ಯ ಬಸ್ ಸಂಚಾರ

ಬೆಂಗಳೂರು, ಜೂನ್ 21; ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಸೋಮವಾರದಿಂದ ಆರಂಭವಾಗಿದೆ. ಅಂತರ ರಾಜ್ಯ ಬಸ್ ಸಂಚಾರವನ್ನು ಜೂನ್ 22ರಿಂದ ಆರಂಭಿಸಲಾಗುತ್ತದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಕುರಿತು ಮಾಹಿತಿ ನೀಡಿದೆ. ಕೋವಿಡ್ ಲಾಕ್‌ಡೌನ್ ಹಿನ್ನಲೆಯಲ್ಲಿ ಅಂತರ ರಾಜ್ಯ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಪ್ರಸ್ತುತ ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ದಿನಾಂಕ 22/6/2021ರಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ ಓಡಿಸಲಾಗುತ್ತದೆ.

 KSRTC Interstate Bus Service From June 22

ಪ್ರಯಾಣಿಕರ ದಟ್ಟಣೆ, ಅವಶ್ಯಕತೆಗೆ ಅನುಗುಣವಾಗಿ ಶೇ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ ಸಂಚಾರವನ್ನು ಆರಂಭಿಸಲಾಗುತ್ತದೆ. ಆಂಧ್ರ ಪ್ರದೇಶಕ್ಕೆ ಬೆಳಗ್ಗೆ 6ರಿಂದ ಸಾಯಂಕಾಲ 6 ಗಂಟೆಯೊಳಗೆ ತಲುಪುವಂತೆ ಬಸ್ ಸಂಚಾರ ನಡೆಸಲಿದೆ.

ಅಂತರ ರಾಜ್ಯ ಬಸ್‌ಗಳಲ್ಲಿ ಪ್ರಯಾಣಿಸುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಗಮದ ಬಸ್‌ಗಳಲ್ಲಿ ಸಂಚಾರ ನಡೆಸುವಾಗ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರಯಾಣಿಕರು ksrtc.karnataka.gov.in/ www.ksrtc.in ವೆಬ್ ಸೈಟ್‌ಗಳಿಗೆ ಭೇಟಿ ನೀಡುವ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+