ನಾಸಿಕ್ಗೆ ಬಸ್ ಸೇವೆ ಆರಂಭಿಸಿದ ಕೆಎಸ್ಆರ್ಟಿಸಿ
ಬೆಂಗಳೂರು, ಜುಲೈ 28 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಮಹಾರಾಷ್ಟ್ರದ ನಾಸಿಕ್ಗೆ ಮತ್ತು ಪೀಣ್ಯ ಬಸ್ ನಿಲ್ದಾಣದಿಂದ ಮೈಸೂರಿಗೆ ನೂತನ ಬಸ್ ಸೇವೆಗಳನ್ನು ಆರಂಭಿಸಲಿದೆ. ಜುಲೈ 31ರಿಂದ ಈ ಬಸ್ ಸೇವೆಗಳು ಆರಂಭವಾಗಲಿವೆ.
ಬೆಂಗಳೂರು-ಪುಣೆ ಮಾರ್ಗದ ಮೂಲಕ ಕೆಎಸ್ಆರ್ಟಿಸಿಯ ಮಲ್ಟಿ ಎಕ್ಸೆಲ್ ವೊಲ್ವೋ ಬಸ್ ನಾಸಿಕ್ ತಲುಪಲಿದೆ. ನಾಸಿಕ್ನಿಂದ ಹೊರಡುವ ಬಸ್ ಇದೇ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗಲಿದೆ. ಜುಲೈ 31ರಿಂದ ಬಸ್ ಸಂಚಾರ ನಡೆಸಲಿದ್ದು, 1,220 ರೂ. ಪ್ರಯಾಣ ದರ ನಿಗದಿ ಪಡಿಸಲಾಗಿದೆ. [ksrtc ವೆಬ್ ಸೈಟ್]

ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೊರಡುವ ಬಸ್ ಮರುದಿನ ಬೆಳಗ್ಗೆ 10.45ಕ್ಕೆ ನಾಸಿಕ್ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ನಾಸಿಕ್ನಿಂದ ಹೊರಡುವ ಬಸ್ ಮರುದಿನ ಬೆಳಗ್ಗೆ 9.45ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದೆ. ಹೆಚ್ಚಿನ ಮಾಹಿತಿಗಾಗಿ 080-44554422 ನಂಬರ್ಗೆ ಕರೆ ಮಾಡಬಹುದಾಗಿದೆ. [ಮಂಗಳೂರು-ಮುಂಬೈ ಐರಾವತ ಬಸ್ ಸೇವೆ ಸ್ಥಗಿತ]
ಮೈಸೂರಿಗೆ ವೇದದೂತ ಬಸ್ : ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣದಿಂದ ಕೆಎಸ್ಆರ್ಟಿಸಿ ಮೈಸೂರಿಗೆ ನೂತನ ವೇಗದೂತ ಬಸ್ ಸೇವೆ ಆರಂಭಿಸಲಿದೆ. ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆಯ ತನಕ ಎರಡು ಗಂಟೆಗೊಮ್ಮೆ ಬಸ್ಸುಗಳು ಸಂಚಾರ ನಡೆಸಲಿವೆ.
ಪೀಣ್ಯದಿಂದ ಹೊರಡುವ ಬಸ್ ಗೊರಗುಂಟೆಪಾಳ್ಯ, ರಿಂಗ್ ರಸ್ತೆ, ಕೊಟ್ಟಿಗೆ ಪಾಳ್ಯ, ಅಂಬೇಡ್ಕರ್ ಕಾಲೇಜು ಮತ್ತು ಕೆಂಗೇರಿ ಸ್ಯಾಟಲೈಟ್ ಬಸ್ ನಿಲ್ದಾಣದ ಮೂಲಕ ಸಂಚಾರ ನಡೆಸಲಿದೆ. ಈ ಬಸ್ ಸೇವೆಯೂ ಜುಲೈ 31ರಿಂದ ಆರಂಭವಾಗಲಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications