ನಾಸಿಕ್ಗೆ ಬಸ್ ಸೇವೆ ಆರಂಭಿಸಿದ ಕೆಎಸ್ಆರ್ಟಿಸಿ
ಬೆಂಗಳೂರು, ಜುಲೈ 28 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಮಹಾರಾಷ್ಟ್ರದ ನಾಸಿಕ್ಗೆ ಮತ್ತು ಪೀಣ್ಯ ಬಸ್ ನಿಲ್ದಾಣದಿಂದ ಮೈಸೂರಿಗೆ ನೂತನ ಬಸ್ ಸೇವೆಗಳನ್ನು ಆರಂಭಿಸಲಿದೆ. ಜುಲೈ 31ರಿಂದ ಈ ಬಸ್ ಸೇವೆಗಳು ಆರಂಭವಾಗಲಿವೆ.
ಬೆಂಗಳೂರು-ಪುಣೆ ಮಾರ್ಗದ ಮೂಲಕ ಕೆಎಸ್ಆರ್ಟಿಸಿಯ ಮಲ್ಟಿ ಎಕ್ಸೆಲ್ ವೊಲ್ವೋ ಬಸ್ ನಾಸಿಕ್ ತಲುಪಲಿದೆ. ನಾಸಿಕ್ನಿಂದ ಹೊರಡುವ ಬಸ್ ಇದೇ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗಲಿದೆ. ಜುಲೈ 31ರಿಂದ ಬಸ್ ಸಂಚಾರ ನಡೆಸಲಿದ್ದು, 1,220 ರೂ. ಪ್ರಯಾಣ ದರ ನಿಗದಿ ಪಡಿಸಲಾಗಿದೆ. [ksrtc ವೆಬ್ ಸೈಟ್]

ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೊರಡುವ ಬಸ್ ಮರುದಿನ ಬೆಳಗ್ಗೆ 10.45ಕ್ಕೆ ನಾಸಿಕ್ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ನಾಸಿಕ್ನಿಂದ ಹೊರಡುವ ಬಸ್ ಮರುದಿನ ಬೆಳಗ್ಗೆ 9.45ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದೆ. ಹೆಚ್ಚಿನ ಮಾಹಿತಿಗಾಗಿ 080-44554422 ನಂಬರ್ಗೆ ಕರೆ ಮಾಡಬಹುದಾಗಿದೆ. [ಮಂಗಳೂರು-ಮುಂಬೈ ಐರಾವತ ಬಸ್ ಸೇವೆ ಸ್ಥಗಿತ]
ಮೈಸೂರಿಗೆ ವೇದದೂತ ಬಸ್ : ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣದಿಂದ ಕೆಎಸ್ಆರ್ಟಿಸಿ ಮೈಸೂರಿಗೆ ನೂತನ ವೇಗದೂತ ಬಸ್ ಸೇವೆ ಆರಂಭಿಸಲಿದೆ. ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆಯ ತನಕ ಎರಡು ಗಂಟೆಗೊಮ್ಮೆ ಬಸ್ಸುಗಳು ಸಂಚಾರ ನಡೆಸಲಿವೆ.
ಪೀಣ್ಯದಿಂದ ಹೊರಡುವ ಬಸ್ ಗೊರಗುಂಟೆಪಾಳ್ಯ, ರಿಂಗ್ ರಸ್ತೆ, ಕೊಟ್ಟಿಗೆ ಪಾಳ್ಯ, ಅಂಬೇಡ್ಕರ್ ಕಾಲೇಜು ಮತ್ತು ಕೆಂಗೇರಿ ಸ್ಯಾಟಲೈಟ್ ಬಸ್ ನಿಲ್ದಾಣದ ಮೂಲಕ ಸಂಚಾರ ನಡೆಸಲಿದೆ. ಈ ಬಸ್ ಸೇವೆಯೂ ಜುಲೈ 31ರಿಂದ ಆರಂಭವಾಗಲಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications