ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫ್ಲೈ ಬಸ್ ಸೇವೆ ಅರಂಭಿಸಲು ಜನರ ಸಲಹೆ ಕೇಳಿದ ಕೆಎಸ್ಆರ್‌ಟಿಸಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 22 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿವಿಧ ನಗರಗಳಿಗೆ ಫ್ಲೈ ಬಸ್ ಸೇವೆಯನ್ನು ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಜನರ ಅಭಿಪ್ರಾಯವನ್ನು ಕೇಳಿದ್ದು, ಈ-ಮೇಲ್ ಮೂಲಕ ಅಭಿಪ್ರಾಯ ತಿಳಿಸಬಹುದಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಕ್ಕೆ ಫ್ಲೈ ಬಸ್ ಸೇವೆಯನ್ನು ಆರಂಭಿಸಿಸಲು ಕೆಎಸ್ಆರ್‌ಟಿಸಿ ಚಿಂತನೆ ನಡೆಸಿದೆ. ಇದಕ್ಕಾಗಿ ಜನರಿಂದ ಅಭಿಪ್ರಾಯವನ್ನು ಸಂಗ್ರಹ ಮಾಡುತ್ತಿದೆ.

ಮೈಸೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೆಚ್ಚಿದ ಫ್ಲೈ ಬಸ್ ವ್ಯವಸ್ಥೆಮೈಸೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೆಚ್ಚಿದ ಫ್ಲೈ ಬಸ್ ವ್ಯವಸ್ಥೆ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯದ ಬೇರೆ-ಬೇರೆ ನಗರಗಳಿಂದ ನೇರವಾಗಿ ಸಂಪರ್ಕ ಕಲ್ಪಿಸಲು ಕೆಎಆರ್‌ಟಿಸಿ ಫ್ಲೈ ಬಸ್ ಸೇವೆಯನ್ನು ಆರಂಭಿಸಿದೆ. ಮೊದಲು ಮೈಸೂರಿಗೆ ಬಸ್ ಸೇವೆ ಆರಂಭಿಸಲಾಗಿತ್ತು.

ಬೆಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ಫ್ಲೈ ಬಸ್ ಆರಂಭಬೆಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ಫ್ಲೈ ಬಸ್ ಆರಂಭ

KSRTC invites people suggestion to start fly bus service

ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನಲೆಯಲ್ಲಿ ಕುಂದಾಪುರ, ಮಣಿಪಾಲ ಮತ್ತು ಮಡಿಕೇರಿಗೂ ಫ್ಲೈ ಬಸ್ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಈಗ ರಾಜ್ಯದ ಇತರ ನಗರಕ್ಕೂ ಸೇವೆಯನ್ನು ವಿಸ್ತರಣೆ ಮಾಡಲಾಗುತ್ತಿದೆ.

ಸೇಲಂ, ಮಡಿಕೇರಿಗೆ ಕೆಎಸ್ಆರ್‌ಟಿಸಿ ಫ್ಲೈ ಬಸ್ ಸೇವೆ ಆರಂಭಸೇಲಂ, ಮಡಿಕೇರಿಗೆ ಕೆಎಸ್ಆರ್‌ಟಿಸಿ ಫ್ಲೈ ಬಸ್ ಸೇವೆ ಆರಂಭ

ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರ ಸಲಹೆ/ಸೂಚನೆಗಳಿಗೆ ಮಾನ್ಯತೆ ನೀಡುವುದರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಸದಗಿ ಫ್ಲೈ ಬಸ್ ಸೇವೆಗಳ ನಿರ್ಗಮನ/ಆಗಮನದ ಸಮಯವನ್ನು ನಿಗದಿಪಡಿಸಲು ಸಲಹೆ ಕೇಳಲಾಗಿದೆ.

ಜನರು [email protected] ಅಥವ Facebook/KSRTC.Karnataka ಮೂಲಕ ಅಭಿಪ್ರಾಯ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

English summary
The Karnataka State Road Transport Corporation (KSRTC) invites people suggestion to start fly bus services to Shivamogga, Davanagere, Chikkamagaluru, Anantapur and Kadapa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X