KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ
ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಸಾರಿಗೆ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಈ ಪ್ರಯುಕ್ತ 70 ಪಲ್ಲಕ್ಕಿ ಬಸ್ಸುಗಳಿಗೆ ಮತ್ತು 45 ಕರ್ನಾಟಕ ಸಾರಿಗೆ ಬಸ್ಗಳ ಕಾರ್ಯಾಚರಣೆಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಚಾಲನೆ ನೀಡಿದರು. ಯಾವೆಲ್ಲ ಮಾರ್ಗಗಳಲ್ಲಿ ಬಸ್ಗಳು ಸಂಚರಿಸಲಿವೆ?, ಸಾರಿಗೆ ವ್ಯಾಪ್ತಿಯಲ್ಲಿ ಮಹಿಳಾ ಸಿಬ್ಬಂದಿಗೆ ಇರುವ ಸೌಲಭ್ಯ ಕುರಿತು ಸಚಿವರು ಮಹತ್ವದ ಮಾಹಿತಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮುಂದಿನ ಏಪ್ರಿಲ್, ಮೇ ಮತ್ತು ಜೂನ್-2026 ರಲ್ಲಿ ಕರ್ನಾಟಕ ಸಾರಿಗೆ ನಿಗಮಕ್ಕೆ ಒಟ್ಟು 805 ಹೊಸ ಕರ್ನಾಟಕ ಸಾರಿಗೆ ಹಾಗೂ ನಗರ/ಗ್ರಾಮಾಂತರ ಸಾರಿಗೆ ವಾಹನಗಳು ಸೇರ್ಪಡೆ ಆಗಲಿವೆ. ಇಂದಿನಿಂದ ಸದರಿ ನೂತನ 70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು ಹಾಗೂ 45 ಕರ್ನಾಟಕ ಸಾರಿಗೆ ಬಸ್ಗಳ ಸಂಚಾರ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ರಾಜ್ಯ, ಅಂತಾರಾಜ್ಯಕ್ಕೆ ಪಲ್ಲಕ್ಕಿ ಬಸ್ ಸಂಚಾರ, ಮಾರ್ಗಗಳು
ನೂತನ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಸುಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡುತ್ತವೆ. ಈ ಮಾರ್ಗದ ಸಾವಿರಾರು ಪ್ರಯಾಣಿಕರಿಗೆ ಅನುಕೂಲ ಒದಗಿಸಲಿವೆ ಎಂದರು.
ನಿಗಮಗಳಲ್ಲಿ 8,956 ಮಹಿಳಾ ಸಿಬ್ಬಂದಿ ಕಾರ್ಯ
ಸದರಿ ರಾಜ್ಯ ಸಾರಿಗೆ ನಾಲ್ಕು ಸಂಸ್ಥೆಗಳಲ್ಲಿ ಸುಮಾರು 1.04 ಲಕ್ಷ ಸಿಬ್ಬಂದಿಗಳಿದ್ದಾರೆ. ಇವರಲ್ಲಿ 8,956 ಮಹಿಳಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ 3167 ನಿರ್ವಾಹಕರು, 2254-ತಾಂತ್ರಿಕ ಸಿಬ್ಬಂದಿಗಳು, 3535-ಆಡಳಿತ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಹಿಳೆಯರಿಗಾಗಿ ಜಾರಿಗೆ ತಂದ 'ಶಕ್ತಿ ಯೋಜನೆ' ಯಲ್ಲಿ ಮಹಿಳೆಯರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದೆ. ಮಾರ್ಚ್ 12ರವರೆಗೆ 688.83 ಕೋಟಿ ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಸಂಚರಿಸಿದ್ದಾರೆಂದು ಸಚಿವರು ಮಾಹಿತಿ ಕೊಟ್ಟರು.
ಇದೇ ಸಂದರ್ಭದಲ್ಲಿ ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-15, ಹಾಗೂ ಕರಾಸಾ ಪೇದೆ-12, ಒಟ್ಟು 46 ಮಹಿಳಾ ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿದ್ದು ಹೆಮ್ಮೆಯ ವಿಷಯ ಎಂದು ವಿಶ್ವ ಮಹಿಳಾ ದಿನಾಚರಣೆ, ಮಹಿಳೆಯರ ಸಾಧನೆ ಕುರಿತು ಮಾತನಾಡಿದರು.

ಸಾರಿಗೆ ಇಲಾಖೆ: ಮಹಿಳಾ ಸ್ನೇಹಿ ಉಪಕ್ರಮಗಳು
* ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ. ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ಒದಗಿಸಲಾಗಿದೆ.
* ಕಳೆದ ಎರಡುವರೆ ವರ್ಷಗಳಲ್ಲಿ ಕರಾರಸಾ ನಿಗಮದಲ್ಲಿ 77 ವಿವಿಧ ಹುದ್ದೆಗಳಿಗೆ ಮಹಿಳೆಯರನ್ನು ಅನುಕಂಪದ ಆಧಾರದ ಮೇಲೆ (ಕಿರಿಯ ಸಹಾಯಕಿ - 44, ಕರಾಸಾ ಪೇದೆ-30 ಮತ್ತು ತಾಂತ್ರಿಕ ಸಹಾಯಕರು -02, ನಿರ್ವಾಹಕರು-1) ನೇಮಕಾತಿ ಮಾಡಿಕೊಳ್ಳಲಾಗಿದೆ.
* ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತಿ ಮಾಹೆಯಲ್ಲಿ ಒಂದು ದಿನದ ಋತುಚಕ್ರ ರಜೆ ಮಂಜೂರು ಮಾಡಲಾಗುತ್ತಿದೆ. ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆ ಸೌಲಭ್ಯ ನೀಡಲಾಗಿದೆ.
* ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ 'ಶಿಶುಪಾಲನಾ ರಜೆ'ಗೆ ಅವಕಾಸ ಇದೆ. ಕರ್ತವ್ಯ ನಿರತ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ವ್ಯವಸ್ಥೆ ಮಾಡಲಾಗಿದೆ.
* ಮಹಿಳಾ ನೌಕರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಒಟ್ಟಾರೆ 160 ಮಹಿಳಾ ಸಿಬ್ಬಂದಿ ಪಡೆಯುತ್ತಿದ್ದಾರೆ.
* ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿ ರಚಿಸಲಾಗಿದೆ.
* ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ ವೇತನ ಸಹಿತ 'ಶಿಶು ಪಾಲನಾ ರಜೆ' ನೀಡಲಾಗುತ್ತಿದೆ.
* ವಿದ್ಯಾಚೇತನ ಯೋಜನೆ ಯಡಿ, 1747 ಹೆಣ್ಣು ಮಕ್ಕಳಿಗೆ (ಸಿಬ್ಬಂದಿಗಳ ಮಕ್ಕಳು) (2022-23 ರಿಂದ 2025-26) ರೂ.88,54,500/ ವಿದ್ಯಾರ್ಥಿ ವೇತನ ನೀಡಲಾಗಿದೆ. (ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-2, ವೈದ್ಯಕೀಯ-55, ಮಾಸ್ಟರ್ ಡಿಗ್ರಿ-139, ಡಿಗ್ರಿ-920, ಡಿಪ್ಲೋಮೋ-43)
* 'ಕೆ.ಎಸ್ಆರ್.ಟಿ.ಸಿ ಆರೋಗ್ಯ' ಯೋಜನೆ ಅಡಿಯಲ್ಲಿ 92,945 ಮಹಿಳಾ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತರು ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಪಡೆದಿದ್ದಾರೆ. ಅದರ ವೆಚ್ಚವು ಅಂದಾಜು 29.87 ಕೋಟಿ ರೂ.ಆಗಿದೆ.
ಎಲ್ಲ ರಂಗದಲ್ಲೂ ಮಹಿಳೆಯರು ಸಾಧನೆ
ಕುಟುಂಬ, ಶಿಕ್ಷಣ, ವಿಜ್ಞಾನ, ಸಾಮಾಜಿಕ, ರಾಜಕೀಯ, ಆರ್ಥಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶಗಳು ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಹಿಳೆಯರ ಹಕ್ಕುಗಳು, ಸಮಾನತೆ ಹಾಗೂ ಗೌರವ ಉತ್ತೇಜಿಸಬೇಕಿದೆ ಎಂದು ಸಚಿವರು ಹೇಳಿದರು.
ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಅವರು ಮಾತನಾಡಿ, ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ಧಿ ಹೊಂದುತ್ತಿರುವುದು ಸ್ವಾಗತಾರ್ಹ. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications