KSRTC: ಪಾರ್ಸೆಲ್ ಸೇವೆಗಾಗಿ ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಇಷ್ಟು KSRTC ಲಾರಿಗಳು
ಬೆಂಗಳೂರು, ಸೆಪ್ಟೆಂಬರ್, 14: ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವ ಆದಾಗಿನಿಂದ ನೌಕಕರು ಹಾಗೂ ಪ್ರಯಾಣಿಕರ ಹಿತದೃಷ್ಟಿಯಲ್ಲಿ ಇಲಾಖೆಯಲ್ಲಿ ಒಂದಲ್ಲ ಒಂದು ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದ್ದಾರೆ. ಇದೀಗ ಪಾರ್ಸೆಲ್ಗಾಗಿಯೇ KSRTC ಲಾರಿಗಳನ್ನು ರಸ್ತೆಗಳಿಸಲು ಮುಂದಾಗಿದ್ದಾರೆ. ಹಾಗಾದರೆ ಈ ಲಾರಿಗಳ ಪಾರ್ಸೆಲ್ ಸೇವೆ ಹೇಗಿರಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಮಹಾಮಾರಿ ಕೊರೊನಾ ಸಮಯದಲ್ಲಿ ಕೆಎಸ್ಆರ್ಟಿಸಿಗೆ ಬರುತ್ತಿದ್ದ ಆದಾಯ ಅಷ್ಟಕಷ್ಟೇ. ಯಾಕೆಂದೆರೆ ಆ ಸಮಯದಲ್ಲಿ ಬಸ್ಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಿತ್ತು. ಆದರೆ ಆ ನಷ್ಟವನ್ನು ಸರಿದೂಗಿಸಲು ಕೊರೊನಾ ಮಹಾಮಾರಿ ತೊಲಗಿದ ನಂತರ ಪಾರ್ಸೆಲ್ ಸೇವೆಯನ್ನು ವಿಸ್ತರಣೆ ಮಾಡಲು ಸಾರಿಗೆ ಇಲಾಖೆ ಮುಂದಾಗಿತ್ತುದೆ. ಪಾರ್ಸೆಲ್ ಸೇವೆ ಏನೋ ಇತ್ತು. ಇದು ಬಸ್ಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇತ್ತು.

ಬಸ್ಗಳಲ್ಲಿ ಪಾರ್ಸೆಲ್ಗೆ ಅಷ್ಟೊಂದು ಜಾಗ ಇರುತ್ತಿರಲಿಲ್ಲ. ಆದ್ದರಿಂದ ಪಾರ್ಸೆಲ್ ಸೇವೆಯನ್ನು ಇನ್ನೂ ದೊಡ್ಡ ಮಟ್ಟದಲ್ಲಿ ಮಾಡಲು ಲಾರಿಗಳನ್ನು ಬಿಡಲು ಇಲಾಖೆ ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ಸಾರಿಗೆ ಇಲಾಖೆಯ ಆದಾಯವೂ ಹೆಚ್ಚಿದಂತಾಗುತ್ತದೆ. ಹೆಚ್ಚೆಚ್ಚು ಪಾರ್ಸೆಲ್ ತಲುಪಿಸಿದಂತೆಯೂ ಆಗುತ್ತದೆ ಎನ್ನುವ ಪ್ಲಾನ್ ಇಲಾಖೆಯದ್ದಾಗಿದೆ. ಹಾಗಾದರೆ ಈ ಸೇವೆ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ಕೆಎಸ್ಆರ್ಟಿಸಿಯು ವಿವಿಧ ಮಾರ್ಗಗಳ ಮೂಲಕ ಆದಾಯ ಹೆಚ್ಚಳಕ್ಕೆ ಮುಂದಾಗಿದ್ದು, ವ್ಯವಸ್ಥಿತ ಮತ್ತು ಸಮರ್ಪಕವಾದ ಪಾರ್ಸೆಲ್ ಸೇವೆ ಒದಗಿಸಲು ಶೀಘ್ರದಲ್ಲೇ ಅಂದರೆ ಇನ್ನೊಂದು ತಿಂಗಳಲ್ಲಿಯೇ ಟ್ರಕ್ಗಳನ್ನು ಬಿಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಾಮಾರಿ ಕೊರೊನಾ ಸಮಯದಲ್ಲಿ KSRTCಯು ಭಾರೀ ನಷ್ಟ ಅನುಭವಿಸಿತ್ತು. ಇದೀಗ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಹಿನ್ನೆಲೆ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಣ್ಣ ಪ್ರಮಾಣದಲ್ಲಿದ್ದ ಪಾರ್ಸೆಲ್ ಸೇವೆಯನ್ನು ಬಲಪಡಿಸಲು 20 ಲಾರಿಗಳನ್ನು ಖರೀದಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಈ ಹಿಂದೆ ಬಸ್ಗಳಲ್ಲಿಯೇ ಸಣ್ಣ ಪ್ರಮಾಣದಲ್ಲಿ ಪಾರ್ಸೆಲ್ ಸೇವೆಯನ್ನು ಕೆಎಸ್ಆರ್ಟಿಸಿ ಆರಂಭಿಸಿದೆ. ಪ್ರಾರಂಭದಲ್ಲಿ 109 ಕೇಂದ್ರಗಳಲ್ಲಿ ಈ ಸೇವೆಯನ್ನು ಆರಂಭ ಮಾಡಲಾಗಿತ್ತು ಅದು ಬಸ್ಗಳಲ್ಲಿ.
ನಂತರ ರಾಜ್ಯದ ಎಲ್ಲ ನಿಲ್ದಾಣಗಳಿಗೂ ಈ ಸೇವೆಯನ್ನು ವಿಸ್ತರಣೆ ಮಾಡಲಾಯಿತು. ಬಸ್ನ ಲಗೇಜ್ ಬಾಕ್ಸ್ಗಳಲ್ಲಿಯೇ ಸಣ್ಣ ಪ್ರಮಾಣದಲ್ಲಿ ಪಾರ್ಸೆಲ್ಗಳನ್ನು ಸಾಗಿಸಲಾಗುತ್ತಿತ್ತು. ಈ ಮೂಲಕ ವಾರ್ಷಿಕ ಸುಮಾರು 4 ಕೋಟಿ ರೂಪಾಯಿ ಆದಾಯ ಬರುತ್ತಿತ್ತು. ಬಳಿಕ ಈ ಸೇವೆಯನ್ನು ಬಿಸಿನೆಸ್ ಸ್ಟ್ಯಾಟಿಕ್ ಪಾರ್ಟನರ್ ಎಂದು ಮಾಡಿಕೊಂಡು ಸೇವೆ ನೀಡಲು ಆರಂಭಿಸಲಾಯಿತು. ಈ ಸಹಭಾಗಿತ್ವದ ಸೇವೆಯಡಿ ಬಂದ ಹಣದಲ್ಲಿ ಶೇಕಡಾ 80ರಷ್ಟು KSRTCಗೆ ಮತ್ತು ಶೇಕಡಾ 20ರಷ್ಟು ಪಾರ್ಟ್ನರ್ಗೆ ಪಾಲು ನಿಗದಿ ಪಡಿಸಲಾಯಿತು.
ಈ ವೇಳೆ ವಾರ್ಷಿಕ ಆದಾಯ 30 ಕೋಟಿ ರೂಪಾಯಿಗೆ ಹೆಚ್ಚಳವಾಗಿತ್ತು. ಆದ್ದರಿಂದ ಅಧಿಕೃತವಾಗಿ ಪಾರ್ಸೆಲ್ ಸೇವೆ ಒದಗಿಸಿದರೆ ಆದಾಯ ಹೆಚ್ಚಿಸಿಕೊಳ್ಳುವ ಪ್ರಸ್ತಾಪವನ್ನು ಸಾರಿಗೆ ಸಚಿವರ ಮುಂದಿಟ್ಟರು. ಇದನ್ನು ಅವಲೋಕಿಸಿದ ಸಚಿವರು 100 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯೊಂದಿಗೆ ಲಾರಿಗಳನ್ನು ಖರೀದಿ ಮಾಡಲು ಸಮ್ಮತಿ ನೀಡಿದ್ದಾರೆ.
6 ಟನ್ ಸಾಮರ್ಥ್ಯದ ಸಂಪೂರ್ಣ ನಿರ್ಮಿತ 20 ಟ್ರಕ್ಗಳನ್ನು ಖರೀದಿಸಲಾಗುತ್ತಿದೆ. ಒಂದು ಟ್ರಕ್ ಖರೀದಿಗೆ 22 ಲಕ್ಷ ರೂಪಾಯಿ ಅಂದಾಜಿಸಲಾಗಿದ್ದು, ಆಗಸ್ಟ್ನಲ್ಲಿ ನಡೆದ ಸಭೆಯಲ್ಲಿ ಅನುಮೋದನೆಯೂ ಸಿಕ್ಕಿದೆ. ಬಸ್ಗಳಲ್ಲಿ ಹೆಚ್ಚಿನ ಸ್ಥಳಾವಕಾಶ ಇಲ್ಲದೆ, ಪಾರ್ಸೆಲ್ ಸೇವೆ ಒದಗಿಸಲು ಸಮಸ್ಯೆಯಾಗಿತ್ತು. ಹೀಗಾಗಿ ಅಧಿಕ ಪ್ರಮಾಣದ ಪಾರ್ಸೆಲ್ ಇರುವ ಮಾರ್ಗ ಗುರುತಿಸಿ ಟ್ರಕ್ಗಳ ಸಂಚಾರ ವ್ಯವಸ್ಥೆ ಮಾಡಲಾಗುತ್ತದೆ. ಟ್ರಕ್ಗಳು ಹೋಗದ ಕಡೆಗೆ ಬಸ್ಗಳಲ್ಲಿ ಈ ಸೇವೆ ಇರಲಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
-
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications