KSRTC Price Hike: ನಾಳೆಯಿಂದಲೇ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಲಗೇಜ್ ದರ ಹೆಚ್ಚಳ, ಪರಿಷ್ಕೃತ ದರಪಟ್ಟಿ ಇಲ್ಲಿದೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಲಗೇಜ್ ದರ ಹೆಚ್ಚಿಸುವ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಿದೆ. ಪ್ರಯಾಣಿಕರಿಲ್ಲದೆ ಸಾಗಿಸುವ ಲಗೇಜ್ಗಳಿಗೆ ನೂತನ ಪರಿಷ್ಕೃತ ದರವು ನಾಳೆಯಿಂದಲೇ (ಫೆಬ್ರವರಿ 16) ಜಾರಿಯಾಗಲಿದೆ. ಈ ಕುರಿತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೇತನ, ನಿರ್ವಹಣಾ ವೆಚ್ಚ ಹಾಗೂ ಇತರೆ ಕಾರ್ಯಾಚರಣಾ ಖರ್ಚುಗಳಲ್ಲಿ ಹೆಚ್ಚಳ ಕಂಡುಬಂದಿರುವ ಹಿನ್ನೆಲೆಯಲ್ಲಿ ಲಗೇಜ್ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಎಂಡಿ ಸ್ಪಷ್ಟಪಡಿಸಿದ್ದಾರೆ. 2021ರಲ್ಲಿ ಕೊನೆಯ ಬಾರಿ ಲಗೇಜ್ ದರ ಏರಿಕೆಯಾಗಿತ್ತು. ನಂತರ ಟಿಕೆಟ್ ದರ ಪರಿಷ್ಕರಣೆ ನಡೆದರೂ ಲಗೇಜ್ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಲಾಗಿರಲಿಲ್ಲ ಎಂದು ತಿಳಿಸಲಾಗಿದೆ.

ಪರಿಷ್ಕೃತ ಲಗೇಜ್ ದರಪಟ್ಟಿ (ಪ್ರಯಾಣಿಕರಿಲ್ಲದೆ ಸಾಗಿಸುವ ಸರಕುಗಳಿಗೆ)
* 1ರಿಂದ 5 ಸ್ಟೇಜ್ಗಳು - ₹6
* 6ರಿಂದ 12 ಸ್ಟೇಜ್ಗಳು - ₹12
* 156ರಿಂದ 160 ಸ್ಟೇಜ್ಗಳು - ₹145
ಸಂಸ್ಥೆ ಬಿಡುಗಡೆ ಮಾಡಿದ ದರ ಪಟ್ಟಿಯ ಪ್ರಕಾರ, ಸ್ಟೇಜ್ ಆಧಾರಿತವಾಗಿ ಶುಲ್ಕ ವಿಧಿಸಲಾಗುತ್ತದೆ. ಕಡಿಮೆ ದೂರಗಳಿಗೆ ಸಣ್ಣ ಪ್ರಮಾಣದ ಏರಿಕೆ ಇದ್ದರೂ, ದೀರ್ಘ ದೂರಗಳಿಗೆ ಈ ದರ ಹೆಚ್ಚಳ ಹೆಚ್ಚು ಕಾಣಿಸಿಕೊಳ್ಳಲಿದೆ. ಸಣ್ಣ ವ್ಯಾಪಾರಿಗಳು, ಗ್ರಾಮಾಂತರ ಪ್ರದೇಶಗಳಿಂದ ನಗರಗಳಿಗೆ ಸರಕು ಕಳುಹಿಸುವವರು, ಪ್ರಯಾಣಿಸದೇ, ಲಗೇಜ್ ಮಾತ್ರ ಕಳುಹಿಸುವ ವ್ಯಕ್ತಿಗಳು, ಬಸ್ಗಳ ಮೂಲಕ ಪಾರ್ಸೆಲ್ ಸೇವೆ ಬಳಸುವ ವ್ಯಾಪಾರ ವಲಯಕ್ಕೆ ಇದರಿಂದ ಭಾರೀ ಹೊಡೆತ ಬೀಳಲಿದೆ.
ಕೆಎಸ್ಆರ್ಟಿಸಿ ಮೂಲಗಳ ಪ್ರಕಾರ, ಲಗೇಜ್ ಸಾಗಾಣಿಕೆ ಸೇವೆ ಸಂಸ್ಥೆಗೆ ಹೆಚ್ಚುವರಿ ಆದಾಯದ ಮೂಲವಾಗಿದ್ದು, ಇತ್ತೀಚಿನ ವೆಚ್ಚ ಏರಿಕೆಯಿಂದ ಆರ್ಥಿಕ ಸಮತೋಲನ ಕಾಪಾಡಲು ಈ ಕ್ರಮ ಅನಿವಾರ್ಯ ಎನ್ನಲಾಗಿದೆ. ನಾಳೆಯಿಂದಲೇ ಎಲ್ಲ ಡಿಪೋಗಳು ಮತ್ತು ಕೌಂಟರ್ಗಳಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಪ್ರಯಾಣಿಕರು ಹಾಗೂ ಸರಕು ಕಳುಹಿಸುವವರು ನೂತನ ದರಗಳನ್ನು ಪರಿಶೀಲಿಸಿ ಲಗೇಜ್ ಬುಕ್ಕಿಂಗ್ ಮಾಡಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.
ರಾಜ್ಯದಲ್ಲಿ ಈಗಾಗಲೇ ಸಾರಿಗೆ ದರ, ಇಂಧನ ಬೆಲೆ ಏರಿಕೆ ಚರ್ಚೆಯಲ್ಲಿರುವ ಸಂದರ್ಭದಲ್ಲಿ ಲಗೇಜ್ ದರ ಹೆಚ್ಚಳ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಇತರೆ ಸಾರಿಗೆ ನಿಗಮಗಳು ಕೂಡ ದರ ಪರಿಷ್ಕರಣೆ ಮಾಡಲಿವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications