ಪ್ರಶಾಂತ್ ಆಚಾರ್ ಬಳಿ 10 ಬಸ್ಗೆ ಬೇಡಿಕೆ ಇಟ್ಟ ಕೆಎಸ್ಆರ್ಟಿಸಿ!
ಬೆಂಗಳೂರು, ಅಕ್ಟೋಬರ್ 06: ಲಾಕ್ ಡೌನ್ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ ಯುವಕರಲ್ಲಿ ಕಲಾವಿದ ಪ್ರಶಾಂತ್ ಆಚಾರ್ ಸಹ ಒಬ್ಬರು. ಕೆಎಸ್ಆರ್ಟಿಸಿ ಕಲಾವಿದನ ಸಾಧನೆಯನ್ನು ಗುರುತಿಸಿದೆ, ಮೆಚ್ಚುಗೆ ಸೂಚಿಸಿದೆ.
ಕೆಎಸ್ಆರ್ಟಿಸಿ ಬಸ್ಗಳ ಮಾದರಿ ತಯಾರಿಸುವ ಪ್ರಶಾಂತ್ ಆಚಾರ್ ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಪರಿಚಿತರು. ಕೆಎಸ್ಆರ್ ಟಿಸಿ ಕೇಂದ್ರ ಕಛೇರಿಯಲ್ಲಿ ಅವರು ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರನ್ನು ಭೇಟಿ ಮಾಡಿದರು.
ಪ್ರಶಾಂತ್ ಆಚಾರ್ ಅವರು ತಾವು ತಯಾರಿಸಿದ ಬಸ್ಗಳ ಮಾದರಿಗಳನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ನೀಡಿದರು. ನಿಗಮವು 10 ಈ ಮಾದರಿಯ ಬಸ್ಸುಗಳನ್ನು ತಯಾರಿಸಿ ಕೊಡಲು ಆದೇಶ ನೀಡಿದೆ. ಇದರಿಂದಾಗಿ ಕಲಾವಿದನಿಗೆ ಪ್ರೋತ್ಸಾಹ ಸಿಕ್ಕಿದಂತಾಗಿದೆ.
ಪ್ರಶಾಂತ್ ಆಚಾರ್ ತಯಾರು ಮಾಡಿದ ಬಸ್ಗಳ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಲವಾರು ಜನರು ಬಸ್ ಮಾದರಿಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಪ್ ಲೋಡ್ ಮಾಡುತ್ತಿದ್ದಾರೆ.

10 ಬಸ್ಗಳಿಗಾಗ ಬೇಡಿಕೆ
ಪ್ರಶಾಂತ್ ಆಚಾರ್ ತಯಾರು ಮಾಡಿದ ಕೆಎಸ್ಆರ್ಟಿಸಿಯ ಐಷಾರಾಮಿ ಐರಾವತ ಬಸ್ ಮಾದರಿ ಬಹಳ ಪ್ರಸಿದ್ಧಿ ಪಡೆದಿದೆ. ಇದೇ ಮಾದರಿಯ 10 ಬಸ್ಗಳನ್ನು ಮಾಡಿಕೊಡಲು ಕೆಎಸ್ಆರ್ಟಿಸಿ ಬೇಡಿಕೆ ಸಲ್ಲಿಸಿದೆ. ಗಣ್ಯರಿಗೆ ಉಡುಗೊರೆ ಕೊಡಲು ಇದನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ.

ಪ್ರತಿ ಬಸ್ಗೆ 8 ಸಾವಿರ ರೂ.
ಪ್ರಶಾಂತ್ ಆಚಾರ್ ತಯಾರು ಮಾಡಿಕೊಡುವ ಪ್ರತಿ ಬಸ್ ಮಾದರಿಗೆ 8 ಸಾವಿರ ರೂ. ನೀಡುವುದಾಗಿ ಕೆಎಸ್ಆರ್ಟಿಸಿ ಹೇಳಿದೆ. ನಿಗಮದ ಬೇಡಿಕೆಗೆ ಸಂತೋಷದಿಂದ ಒಪ್ಪಿರುವ ಪ್ರಶಾಂತ್ ಆಚಾರ್ ಅವರು ಮಾದರಿಗಳನ್ನು ಮಾಡಿಕೊಡಲು ಒಪ್ಪಿಗೆ ಸೂಚಿಸಿದ್ದಾರೆ.

ಉಡುಪಿ ಮೂಲದ ಕಲಾವಿದ
ಪ್ರಶಾಂತ್ ಆಚಾರ್ ಉಡುಪಿಯ ಹೆಮ್ಮಾಡಿ ಸಮೀಪದ ಡೈರಿ ಸರ್ಕಲ್ನಲ್ಲಿ ಅಣ್ಣನೊಂದಿಗೆ ಓಂಕಾರ್ ಶೀಟ್ ಮೆಟಲ್ ವರ್ಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪೋಮ್ ಶೀಟ್ ಬಳಸಿ ತಯಾರು ಮಾಡಿದ ಬಸ್ಗಳ ಮಾದರಿ ಎಲ್ಲರ ಗಮನ ಸೆಳೆಯುತ್ತಿದೆ.
Recommended Video

ಸುಮಾರು 8 ಸಾವಿರ ರೂ. ಖರ್ಚು
ಪೋಮ್ ಶೀಟ್ನಲ್ಲಿ ಬಸ್ ಹೊರ ಕವಚ ನಿರ್ಮಾಣ ಮಾಡಿ, ಸ್ಟೇರಿಂಗ್, ಗೇರ್, ಹೆಡ್ ಲೈಟ್, ಲಾಕ್, ಕಿಟಕಿಗಳನ್ನು ಹೊಂದಿರುವ ಒಂದು ಬಸ್ ತಯಾರು ಮಾಡಲು ಸುಮಾರು 8 ಸಾವಿರ ರೂ. ವೆಚ್ಚವಾಗಲಿದೆ. ಅಣ್ಣನ ಅಂಗಡಿಯಲ್ಲಿಯೇ ಬಸ್ಗಳಿಗೆ ಬಣ್ಣವನ್ನು ಮಾಡಿದ್ದಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications