KSRTC Relief: 4 ನೌಕರ ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ: ಸಾರಿಗೆ ಸಚಿವರು ಕೊಟ್ಟ ಸಲಹೆ ಏನು?
ಬೆಂಗಳೂರು, ಜೂನ್ 12: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಮೃತಪಟ್ಟ ನೌಕರರ ಅವಲಂಬಿತರಿಗೆ, ಕುಟುಂಬಸ್ಥರಿಗೆ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಬುಧವಾರ ನಾಲ್ಕು ಮೃತರಿಗೆ ತಲಾ 01 ಕೊಟಿ ರೂ. ವಿತರಣೆ ಮಾಡಲಾಯಿತು.
KSRTC ನಿಗಮದ ನೌಕರರ 4 ಅವಲಂಭಿತರಿಗೆ ಅಪಘಾತ ಪರಿಹಾರ (On duty/Off duty) ವಿಮೆ ತಲಾ ರೂ.1 ಕೋಟಿಯಂತೆ ಒಟ್ಟು ಇಲ್ಲಿಯವರೆಗೆ ಇದೂ ಸೇರಿ 17 ಸಿಬ್ಬಂದಿಗಳ ಕುಟುಂಬಕ್ಕೆ ವಿಮಾ ನೀಡಲಾಗಿದೆ. ಸೇವೆಯಲ್ಲಿದ್ದು ಮೃತ ಪಟ್ಟ 39 ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.

ನಿಗಮದ ವಾಹನಗಳಲ್ಲಿ ಪ್ರಯಾಣಿಸುವಾಗ ಅಪಘಾತಕ್ಕೊಳಗಾಗಿ ಮೃತರಾದ 04 ಪ್ರಯಾಣಿಕರ ಅವಲಂಭಿತರಿಗೆ ತಲಾ ರೂ.10 ಲಕ್ಷ ಪರಿಹಾರ ವಿಮಾ ಮೊತ್ತ ಒದಗಿಸಲಾಗಿದೆ.
ನಿಗಮ ವ್ಯಾಪ್ತಿಯಲ್ಲಿ ಸಾರಿಗೆ ಸುರಕ್ಷಾ ರೂ. 1 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತರಲಾಗಿದೆ. ಸಿಬ್ಬಂದಿ ಅವಲಂಭಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸಲು ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸಲಾಗುತ್ತಿದೆ ಎಂದು KSRTC ಮಾಹಿತಿ ನೀಡಿದೆ.
ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ
ನೌಕರರಿಗೆ ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಸಾವನ್ನಪುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಈ ಕಾರಣದಿಂದ ಮೃತಪಡುವ ಕುಟುಂಬಸ್ಥರಿಗೆ ಆರ್ಥಿಕವಾಗಿ ನೆರವಾಗಲು ಮೊತ್ತದ ಪರಿಹಾರವನ್ನು ರೂ. 3 ಲಕ್ಷನಿಂದ ರೂ.10 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಹೆಚ್ಚಿಸಲಾದ ಮೊತ್ತವನ್ನು ಇದುವರೆಗೆ ಒಟ್ಟು 16 ಪ್ರಕರಣಗಳಲ್ಲಿ ರೂ.10 ಲಕ್ಷಗಳ ಪರಿಹಾರ ಧನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರ ಕುಟುಂಬಸ್ಥರಿಗೆ ನೆರವು
ನಿಗಮದ ವಾಹನಗಳಲ್ಲಿ ಪ್ರಯಾಣಿಸುತ್ತಿರುವಾಗ ಅಪಘಾತಕ್ಕೊಳಗಾದ ನಾಲ್ವರು ಪ್ರಯಾಣಿಕರ ಅವಲಂಭಿತರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಲಾಗಿದೆ. ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಯೋಜನೆ ಜಾರಿಗೆ ತರಲಾಗಿದೆ ಎಂದು ನಿಗಮ ತಿಳಿಸಿದೆ.
ಪರಿಹಾರ ಪೋಲು ಮಾಡದಂತೆ ಸಚಿವರ ಸಲಹೆ
ಪರಿಹಾರ ವಿತರಿಸಿ ಮಾತನಾಡಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು. ಯೋಜನೆಯಿಂದ ಬರುವ ಹಣವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಕಟ್ಟಿಕೊಳ್ಳಲು ಉಪಯೋಗಿಸಿಕೊಳ್ಳಬೇಕು. ಇತರ ಕಾರಣಗಳಿಗೆ ಹಣ ಪೋಲು ಮಾಡದಂತೆ ಅವರು ಎಚ್ಚರಿಕೆ ವಹಿಸಿದರು.
ನಿಗಮ ವ್ಯಾಪ್ತಿಯಲ್ಲಿ ಯೋಜನೆ ಯಶಸ್ವಿಯಾಗಲು ಕಾರಣರಾದ ನಿಗಮದ ಚಾಲಕರು,ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಕಾರ್ಯಕ್ಕೆ ಅವರು ಅಭಿನಂದನೆ ತಿಳಿಸಿದರು. ಇನ್ನೂ ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಅವರು ಸೂಚಿಸಿದರು.
ಈಗಾಗಲೇ ಯೋಜನೆಗಳನ್ನು ಯಶಸ್ವಿಯಾಗಿ ಆರಂಭಿಸಿರುವ ಸಾರಿಗೆ ಇಲಾಖೆ, ಯೋಜನೆಯಡಿ ಪರಿಹಾರ ವಿತರಣೆಯನ್ನು ಕಾಲ ಕಾಲಕ್ಕೆ ಮಾಡುತ್ತಿದೆ. ವಿಳಂಬ ಇಲ್ಲದೇ, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿದೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications