KSRTC Bus: ಟಿಕೆಟ್ ಇಲ್ಲದೇ ಸಂಚಾರ, ಪುರುಷ ಪ್ರಯಾಣಿಕರಿಂದ ಲಕ್ಷ ಲಕ್ಷ ದಂಡ ವಸೂಲಿ
ಬೆಂಗಳೂರು, ಜುಲೈ 23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ರಾಜ್ಯದ ಮೂಲೆ ಮೂಲೆಗಳಲ್ಲಿ ಸಾರಿಗೆ ಸೇವೆ ನೀಡುತ್ತಿದೆ. ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯದವರೆಗೆ ಉತ್ತಮ ಸೇವೆ ನೀಡುವಲ್ಲಿ ಹೆಸರಾಗಿದೆ. ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಇರುವ ಪ್ರಯುಕ್ತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇದೆ. ಆದರೆ ಪುರುಷರಿಗೆ ಆ ಸೌಲಭ್ಯ ಇಲ್ಲ. ಕೆಲವರು ಟಿಕೆಟ್ ಇಲ್ಲದೇ ಪ್ರಯಾಣಿಸಿ ಇದೀಗ ದಂಡ ತೆತ್ತಿದ್ದಾರೆ.
ಈ ಸಾರಿಗೆ ಬಸ್ನಲ್ಲಿ ಟಿಕೆಟ್ ರಹಿತ ಪ್ರಯಾಣ, ಕಳ್ಳತನದಂತೆ ಪ್ರಕರಣಗಳು ವರದಿ ಆಗಿವೆ. ಈ ಸಂಬಂಧ ಸಾರಿಗೆ ಇಲಾಖೆ ಅಧಿಕಾರಿಗಳು ನಿಗದಿತ ಮಾರ್ಗದ ಸಾವಿರಾರು ಬಸ್ಗಳನ್ನು ಜೂನ್ ತಿಂಗಳಲ್ಲಿ ಪರಿಶೀಲಿಸಿದ್ದಾರೆ. ಕಳೆದ ಒಂದೇ ತಿಂಗಳಲ್ಲಿ ಬರೋಬ್ಬರಿ 43126 ಬಸ್ಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದ ಸೂಕ್ತ ಕ್ರಮ ಜರುಗಿಸಿದ್ದಾರೆ.

ಕೆಎಸ್ಆರ್ಟಿಸಿ ರಾಜ್ಯ ಮತ್ತು ನೆರೆಯ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಸೇವೆಗಳ ಪರಿಶೀಲನೆ ವೇಳೆ 3522 ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಬರೋಬ್ಬರಿ 3610 ಟಿಕೆಟ್ ಇಲ್ಲದೇ ಪ್ರಯಾಣಿಕರು ಸಂಚಾರ ಮಾಡುತ್ತಿರುವುದು ಇದೇ ವೇಳೆ ಪತ್ತೆ ಆಗಿದೆ.
ಈ ಟಿಕೆಟ್ ಇಲ್ಲದೇ ಪ್ರಯಾಣಿಸುವುದು ಕಾನೂನು ಬಾಹೀರ ಎಂದು ತಿಳಿ ಹೇಳಿರುವ ಅಧಿಕಾರಿಗಳು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಟಿಕೆಟ್ ಪಡೆಯದೇ ಪ್ರಯಾಣ ಮಾಡಿದ್ದಕ್ಕಾಗಿ ಆ ಪ್ರಯಾಣಿಕರಿಂದ ಒಟ್ಟು 5,97,517/- ರೂಪಾಯಿ ದಂಡ ಸಂಗ್ರಹಿಸಲಾಗಿದೆ.
ಇನ್ನೂ ಒಟ್ಟು 3522 ಕಳ್ಳತನ ಪ್ರಕರಣಳಿಂದ ರೂ.82,946/ ಮೊತ್ತವನ್ನು ಪತ್ತೆಹಚ್ಚಲಾಗಿದೆ. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಬಸ್ಗಳಲ್ಲಿ ಪ್ರಯಾಣಿಕರು ಪ್ರಯಾಣಿಸುವಾಗ ಕಡ್ಡಾಯವಾಗಿ ಟಿಕೆಟ್ ಇಲ್ಲವೇ ಪಾಸ್ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications