KSRTC: ಹಾಸನಾಂಬ ಜಾತ್ರೆಗೆ ವಿಶೇಷ ಪ್ರವಾಸ ಪ್ಯಾಕೇಜ್ ಘೋಷಣೆ, ಮಾರ್ಗ-ಟಿಕೆಟ್ ದರ
KSRTC Tour Package: ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದಾಗಿರುವ ವರ್ಷಕ್ಕೆ ಒಂದು ಬಾರಿ ಮಾತ್ರವೇ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ-2025 ಜರುಗಲಿದೆ. ಈ ಪ್ರಯುಕ್ತ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವತಿಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಯೋಜನೆಗಳನ್ನು ಘೋಷಿಸಲಾಗಿದೆ.
ಈ ಪ್ಯಾಕೇಜ್ಗಳು ಅಕ್ಟೋಬರ್ 10 ರಿಂದ 22 ರವರೆಗೆ ಹಮ್ಮಿಕೊಳ್ಳಲಾಗಿದೆ.ಹಾಸನ ಹಾಗೂ ಸುತ್ತಮುತ್ತಲಿನ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಒಳಗೊಂಡಿವೆ. ಒಟ್ಟು ಈ ಪ್ಯಾಕೇನ್ನಲ್ಲಿ 10 ಪ್ಯಾಕೇಜ್ ಮಾರ್ಗಗಳು ಇವೆ. ನಿಗಮದ ವತಿಯಿಂದ ಪ್ರಯಾನಿಕರಿಗೆ ಉತ್ತಮ ಮತ್ತು ಆರಾಮದಾಯಕ ಪ್ರಯಾಣದ ಅನುಭವಕ್ಕಾಗಿ 8 ಕರ್ನಾಟಕ ಸಾರಿಗೆ ಬಸ್ಗಳು, 2 ಅಶ್ವಮೇಧ ಮತ್ತು 2 ವೋಲ್ವೋ ಬಸ್ಗಳು ಕಾರ್ಯಾಚರಣೆ ಮಾಡಲು ಸಜ್ಜಾಗಿವೆ.

ಪ್ರವಾಸದಲ್ಲಿ ಪ್ರೇಕ್ಷಣೀಯ ಸ್ಥಳಗಳ ವಿವರ
ಪ್ರತಿ ಪ್ಯಾಕೇಜ್ ಹಾಸನ ನಗರ ಬಸ್ ನಿಲ್ದಾಣದಿಂದ ಪ್ರಾರಂಭವಾಗಲಿದ್ದು, ಶ್ರೀ ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮ್ಮನ ಹೊಸಕೋಟೆ ದೇವಾಲಯ, ಬೆಲೂರು, ಹಳೇಬೀಡು, ಶ್ರವಣಬೆಳಗೊಳ, ಅರಸೀಕೆರೆ, ಅರಕಲಗೂಡು ಸೇರಿದಂತೆ ಅನೇಕ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಯನ್ನು ಒಳಗೊಂಡಿದೆ. ಕೆಲವು ಪ್ಯಾಕೇಜ್ಗಳಲ್ಲಿ ಹಾಸನಾಂಭ ದೇವಿಯ ದರ್ಶನಕ್ಕೆ 1000 ರೂಪಾಯಿ ಟಿಕೆಟ್ ನಿಗಿದ ಮಾಡಲಾಗಿದೆ.
ಬಸ್ ಸಂಚಾರ ಸಮಯ, ಟಿಕೆಟ್ ದರ
ಬಸ್ಗಳು ಬೆಳಗ್ಗೆ 6.00 ರಿಂದ 8.00 ಗಂಟೆಯವರೆಗೆ ವಿವಿಧ ಸ್ಥಳಗಳಿಂದ ಹೊರಡಲಿವೆ. ಪ್ರಯಾಣದ ದರಗಳು ಪ್ಯಾಕೇಜ್ಗಳ ಪ್ರಕಾರ ನಿಗದಿಯಾಗಿವೆ. ವಯಸ್ಕರಿಗೆ 375 ರೂಪಾಯಿಯಿಂದ 2,500 ರೂಪಾಯಿ ವರೆಗೆ ಪ್ಯಾಕೇಜ್ ದರ ಇದೆ. ಮಕ್ಕಳಿಗೆ ರೂ.275 ರಿಂದ ರೂ.2,200 ವರೆಗೆ ನಿಗದಿ ಮಾಡಲಾಗಿದೆ ಎಂದು ನಿಗಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸಿಗರು ಇಲ್ಲಿಗೆ ಸಂಪರ್ಕಿಸಿ
ಭಕ್ತರು ಹಾಗೂ ಪ್ರವಾಸಿಗರು ಈ ಸೇವೆಗಳ ಪ್ರಯೋಜನ ಪಡೆಯಲು ಕೆಳಗಿನ ದೂರವಾಣಿ ಸಂಖ್ಯೆ 7760990518 ಗೆ 7760990519, 7760990520, 7760990523 ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ http://www.ksrtc.in ಭೇಟಿ ನೀಡುವಂತೆ ಹಾಸನ ವಿಭಾಗದ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications