ಕೆಎಸ್ಆರ್ಟಿಸಿಗೆ ನಷ್ಟ; 126 ಬಸ್ ಸಂಚಾರ ಸ್ಥಗಿತ
ಬೆಂಗಳೂರು, ಫೆಬ್ರವರಿ 05 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈಗಾಗಲೇ ನಷ್ಟದಲ್ಲಿದೆ. ಇಂಧನ ಮತ್ತು ಬಸ್ಸುಗಳ ನಿರ್ವಹಣೆಗೆ ಸಂಸ್ಥೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾರಿಗೆ ಸಚಿವರು ಸಹ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಹಲವಾರು ಸೂಚನೆಗಳನ್ನು ನೀಡಿದ್ದಾರೆ.
ನಷ್ಟವನ್ನು ತಡೆಯಲು ಮೊದಲ ಹಂತದಲ್ಲಿ ಮೈಸೂರು, ಹಾಸನ ಮತ್ತು ಬೆಂಗಳೂರು ನಡುವೆ ಸಂಚಾರ ರ ನಡೆಸುವ 126 ಕೆಎಸ್ಆರ್ಟಿಸಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಮಾರ್ಗಗಳ ಅಧ್ಯಯನ ನಡೆಯಲಿದೆ.
ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ಎಲ್ಲಾ ವಿಭಾಗದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ 126 ಬಸ್ಗಳ ಸಂಚಾರವನ್ನು ರದ್ದುಗೊಳಿಸಿವ ನಿರ್ಧಾರವನ್ನು ಕೈಗೊಂಡಿದ್ದಾರೆ.
2017 ರಿಂದ 2019ರ ತನಕ ಬಂದ್, ಮುಷ್ಕರಗಳಿಂದಾಗಿಯೇ ಕೆಎಸ್ಆರ್ಟಿಸಿಗೆ 20.12 ಕೋಟಿ ರೂ. ನಷ್ಟ ಉಂಟಾಗಿತ್ತು. ಪ್ರಯಾಣಿಕರ ಕೊರತೆ ಇರುವ ಮಾರ್ಗಗಳು, ಬಸ್ಗಳ ನಿರ್ವಹಣೆ ಕಾರಣಗಳಿಂದಾಗಿಯೇ ಸಂಸ್ಥೆ ಕೋಟ್ಯಾಂತರ ರೂ. ನಷ್ಟವನ್ನು ಅನುಭವಿಸಿದೆ.

ಸಾರಿಗೆ ಸಚಿವರ ಸೂಚನೆ ಏನು?
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಅವರ ಸೂಚನೆಯಂತೆ 4 ರಿಂದ 5 ಅಥವ ಬೆರಳೆಣಿಕೆಯ ಪ್ರಯಾಣಿಕರು ಸಂಚಾರ ನಡೆಸುವ ಬಸ್ಗಳ ಸೇವೆಯನ್ನು ಸ್ಥಗಿತಗೊಳಿಸುವ ತೀರ್ಮಾನವನ್ನು ಕೆಎಸ್ಆರ್ಟಿಸಿ ಕೈಗೊಂಡಿದೆ.

ಯಾವ-ಯಾವ ಮಾರ್ಗ
ನಷ್ಟವನ್ನು ತಪ್ಪಿಸಲು ಹಲವಾರು ಕ್ರಮಗಳನ್ನು ಕೈಗೊಂಡಿರುವ ಕೆಎಸ್ಆರ್ಟಿಸಿ ಮೊದಲ ಹಂತದಲ್ಲಿ ಮೈಸೂರು-ಬೆಂಗಳೂರು, ಹಾಸನ-ಬೆಂಗಳೂರು ನಡುವೆ ಸಂಚಾರ ನಡೆಸುವ 126 ಬಸ್ಗಳನ್ನು ರದ್ದುಪಡಿಸಿದೆ. ಈ ಬಸ್ಗಳು ಪ್ರಯಾಣಿಕರ ಕೊರತೆಯನ್ನು ಎದುರಿಸುತ್ತಿದ್ದವು.

4 ರಿಂದ 5 ಪ್ರಯಾಣಿಕರು
ಕೆಲವು ಬಸ್ಗಳಲ್ಲಿ 4 ರಿಂದ 5 ಪ್ರಯಾಣಿಕರಿದ್ದರೆ ಸಾಕು ಎಂದು ಚಾಲಕರು, ನಿರ್ವಾಹಕರು ಸಂಚಾರ ನಡೆಸುತ್ತಾರೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕೆಲವು ಚಾಲಕ, ನಿರ್ವಾಹಕರು ಬಸ್ ನಿಲ್ಲಿಸುವ ಜಾಗಕ್ಕಾಗಿ ಜಗಳವಾಡುತ್ತಾರೆ. ಇದನ್ನು ಗಮನಿಸಿರುವ ಕೆಎಸ್ಆರ್ಟಿಸಿ 126 ಬಸ್ಗಳನ್ನು ಸ್ಥಗಿತಗೊಳಿಸಿದೆ.

ಎಲ್ಲಾ ಮಾರ್ಗಗಳ ಅಧ್ಯಯನ
ಬೆಂಗಳೂರು-ಹಾಸನ ಮತ್ತು ಬೆಂಗಳೂರು-ಮೈಸೂರು ಮಾರ್ಗದಲ್ಲಿ ಬಸ್ ಸಂಚಾರ ನಡೆಸುವ 126 ಬಸ್ ನಿಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಮಾರ್ಗಗಳ ಅಧ್ಯಯನವನ್ನು ನಡೆಸಲಾಗುತ್ತದೆ. ಹಂತ-ಹಂತವಾಗಿ ಎಲ್ಲಾ ಮಾರ್ಗದಲ್ಲಿಯೂ ಪ್ರಯಾಣಿಕರ ಕೊರತೆ ಇರುವ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications