ಪ್ರಯಾಣಿಕರ ಸುರಕ್ಷತೆಗಾಗಿ ಸರ್ಕಾರಿ ಬಸ್ನಲ್ಲಿ ಹೊಸ ತಂತ್ರಜ್ಞಾನ
ಬೆಂಗಳೂರು, ಜೂನ್ 10; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುತ್ತದೆ. ಇದೇ ಮೊದಲ ಬಾರಿಗೆ ಬಸ್ಸುಗಳಲ್ಲಿ ಎ.ಐ ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆ ಆರಂಭಿಸಲಾಗಿದೆ.
Recommended Video
ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಫೇಸ್ ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ. Artificial intelligence (AI) ತಂತ್ರಜ್ಞಾನ ಅಳವಡಿಸುವ ಮಹತ್ವದ ಯೋಜನೆ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ 1044 ಬಸ್ಗಳಿಗೆ ಇದನ್ನು ಅಳವಡಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
KSRTC ಹೆಸರು ಕೈ ತಪ್ಪುವ ಆತಂಕ ಬೇಡ; ಕಾನೂನು ಹೋರಾಟ ಮುಗಿದಿಲ್ಲ
ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕೇರಳ ರಾಜ್ಯದ ಪಾಲಾದ KSRTC ಟ್ರೇಡ್ ಮಾರ್ಕ್!
ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಎಂಬ ಎರಡು ರೀತಿಯ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ. ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್. ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್.
ಗ್ರಾಮಗಳಲ್ಲಿ ವ್ಯಾಕ್ಸಿನ್ ನೀಡಲು ಸರ್ಕಾರಿ ಬಸ್ ಬಾಡಿಗೆಗೆ ಲಭ್ಯ
ಬಸ್ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಂತಹ ತಂತ್ರಜ್ಞಾನ ಇದಾಗಿದೆ.
ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಇದು ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ಗೆ ಮಾಹಿತಿ ರವಾನೆ ಮಾಡುತ್ತದೆ. ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ತಂತ್ರಜ್ಞಾನದಿಂದ ಆಗುತ್ತದೆ.
ನಮ್ಮ ಜನರ ಜೀವ ಮುಖ್ಯ. ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ತಂತ್ರಜ್ಞಾನವನ್ನು 1044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸಲು ಚಿಂತನೆ ನಡೆದಿದೆ.