ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KSRTC; ಹಬ್ಬ, ರಜೆ ದಿನ ಕೆಲಸ ಮಾಡಿದರೆ ಹೆಚ್ಚುವರಿ ವೇತನ

|
Google Oneindia Kannada News

ಬೆಂಗಳೂರು, ಜನವರಿ 10; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. ಸಾರ್ವತ್ರಿಕ/ ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವ ಬಗ್ಗೆ ಆದೇಶ ಹೊರಡಿಸಿದೆ.

ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹಿರಿಯ/ ವಿಭಾಗ ನಿಯಂತ್ರಣಾಧಿಕಾರಿಗಳು/ ಕಾರ್ಯ ವ್ಯವಸ್ಥಾಪಕರು ಕರಾರಸಾ ನಿಗಮ ಇವರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಮುಂಬರುವ ದಿನಗಳಲ್ಲಿ ಜನದಟ್ಟಣೆ ಹೆಚ್ಚಿದ್ದು, ಪೀಕ್ ಸೀಸನ್ ಆಗಿರುವುದರಿಂದ ವಾಹನಗಳ ಕಾರ್ಯಾಚರಣೆಗೆ ಸಿಬ್ಬಂದಿಗಳ ಲಭ್ಯತೆಯ ಸಲುವಾಗಿ ಜನವರಿ 23 ರಿಂದ ಜೂನ್ 23ರವರೆಗೆ ನೌಕರರು ಆಯ್ಕೆ ಮಾಡಿಕೊಂಡಿರುವ ಸಾರ್ವತ್ರಿಕ/ ಹಬ್ಬದ ರಜಾ ದಿನಗಳಿಗೆ ಸೀಮಿತಗೊಳಿಸಿ ಸದರಿ ಸಾರ್ವತ್ರಿಕ/ ಹಬ್ಬದ ರಜೆ ದಿನದಂದು ಕರ್ತವ್ಯ ನಿರ್ವಹಿಸಿದಲ್ಲಿ ಹೆಚ್ಚುವರಿ ವೇತನ (Double, Wages) ಪಾವತಿ ಮಾಡಲು ಸೂಕ್ತಾಧಿಕಾರಿಗಳು ಮಂಜೂರಾತಿ ನೀಡಿರುತ್ತಾರೆ ಎಂದು ತಿಳಿಸಲಾಗಿದೆ.

Breaking; ಧಾರ್ಮಿಕ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌, ವೇಳಾಪಟ್ಟಿ Breaking; ಧಾರ್ಮಿಕ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌, ವೇಳಾಪಟ್ಟಿ

KSRTC To Pay Additional Salary For Workers Who Working On General Holidays

ಈ ಆದೇಶದ ಪ್ರತಿಯನ್ನು ಗೌರವ ಪೂರ್ವಕವಾಗಿ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು/ ನಿರ್ದೇಶಕರು (ಸಿ&ಜಾ) ರವರ ಹಿರಿಯ/ಆಪ್ತ ಕಾರ್ಯದರ್ಶಿಗಳಿಗೆ ಮಾಹಿತಿಗಾಗಿ ಕಳುಹಿಸಿದೆ. ಇಲಾಖಾ ಮುಖ್ಯಸ್ಥರು/ ವಿಭಾಗದ ಉಸ್ತುವಾರಿ ಅಧಿಕಾರಿಗಳು, ಕರಾರಸಾ ನಿಗಮ ರವರ ಮಾಹಿತಿಗಾಗಿ ಹಾಗೂ ಮಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಿದೆ.

ಕರಾವಳಿ ಟೂರ್ ಪ್ಯಾಕೇಜ್; ದೇವಾಲಯಗಳಿಗೆ ಭೇಟಿ ಕೊಡಲು ದರ ಪಟ್ಟಿ ಕರಾವಳಿ ಟೂರ್ ಪ್ಯಾಕೇಜ್; ದೇವಾಲಯಗಳಿಗೆ ಭೇಟಿ ಕೊಡಲು ದರ ಪಟ್ಟಿ

ಹೆಚ್ಚುವರಿ ಬಸ್ ಸಂಚಾರ; ಸಾಲು-ಸಾಲು ರಜೆ, ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿನ ಜನರು ಕೆಎಸ್ಆರ್‌ಟಿಸಿ ಬಸ್‌ ಬಳಕೆ ಮಾಡುತ್ತಾರೆ. ಆಗ ಕೆಎಸ್ಆರ್‌ಟಿಸಿ ಸಹ ಜನರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಬಸ್‌ಗಳನ್ನು ಓಡಿಸುತ್ತದೆ. ಆಗ ಚಾಲಕರು, ನಿರ್ವಾಹಕರು ಸೇರಿದಂತೆ ಹಲವು ಸಿಬ್ಬಂದಿಗಳು ಕಾರ್ಯ ನಿರ್ವಹಣೆ ಮಾಡಬೇಕಾಗುತ್ತದೆ.

holiday

NWKRTC ಕರಾವಳಿ ಟೂರ್ ಪ್ಯಾಕೇಜ್; ದರ, ಮಾರ್ಗ NWKRTC ಕರಾವಳಿ ಟೂರ್ ಪ್ಯಾಕೇಜ್; ದರ, ಮಾರ್ಗ

ಈ ಆದೇಶದಿಂದ ನೌಕರರಿಗೆ ಕೆಎಸ್ಆರ್‌ಟಿಸಿ ಸಿಹಿಸುದ್ದಿಯನ್ನು ನೀಡಿದೆ. ಸಾರ್ವತ್ರಿಕ/ ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನವೂ ಸಿಗಲಿದೆ.

ಕೆಎಸ್‌ಆರ್‌ಟಿಸಿ ಪ್ರಸ್ತುತ ಚಾಲಕ & ನಿರ್ವಾಹಕರಾಗಿ ಕಾರ್ಯ ನಿರ್ವಹಣೆ ಮಾಡುವವರನ್ನು ನೇಮಕಾ ಮಾಡಿಕೊಳ್ಳುತ್ತಿದೆ. ದೂರದ ಮಾರ್ಗದಲ್ಲಿ ಸಂಚಾರ ನಡೆಸುವ ಬಸ್‌ಗಳಲ್ಲಿ ಒಬ್ಬರೇ ಚಾಲಕ & ನಿರ್ವಾಹಕರ ಕೆಲಸ ನಿರ್ವಹಣೆ ಮಾಡುತ್ತಾರೆ. ಹಬ್ಬ, ರಜಾ ಸಂದರ್ಭದಲ್ಲಿ ಹೆಚ್ಚುವರಿ ಬಸ್ ಓಡಿಸುವುದರಿಂದ ಅವರಿಗೆ ತೊಂದರೆ ಯಾಗುತ್ತಿತ್ತು.

ಕೆಎಸ್‌ಆರ್‌ಟಿಸಿ ನೌಕರರ ಸಂಘದ ಈ ಹಿಂದೆ ಸಭೆಗಳನ್ನು ನಡೆಸಿದಾಗ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿತ್ತು. ಇದರಲ್ಲಿ ಹಬ್ಬ/ ರಜೆ ದಿನಗಳಲ್ಲಿ ಕೆಲಸ ಮಾಡಿದರೆ ಹೆಚ್ಚುವರಿ ವೇತನ ಪಾವತಿ ಮಾಡಬೇಕು ಎಂಬುದು ಸಹ ಬೇಡಿಕೆ ಇಡಲಾಗಿತ್ತು.

English summary
Karnataka State Road Transport Corporation (KSRTC) approved to pay additional salary for the workers who working on general holidays.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X