KSRTC Driver: ಖಾಸಗಿ ಏಜೆನ್ಸಿ ಮೂಲಕ 500 ಚಾಲಕರನ್ನು ನೇಮಿಸಿಕೊಳ್ಳಲು ಮುಂದಾದ ಕೆಎಸ್ಆರ್ಟಿಸಿ
ಚಾಲಕರ ಕೊರತೆಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಖಾಸಗಿ ಏಜೆನ್ಸಿ ಮೂಲಕ 500 ಚಾಲಕರನ್ನು ನೇಮಕ ಮಾಡಿಕೊಳ್ಳಲು ಕೆಎಸ್ಆರ್ಟಿಸಿ ಮುಂದಾಗಿದೆ. ಶೀಘ್ರದಲ್ಲೇ ಖಾಸಗಿ ಏಜೆನ್ಸಿಗಳು ಡ್ರೈವರ್ ಗಳನ್ನು ನೀಡಲಿದ್ದು, ಸಿಬ್ಬಂದಿ ಕೊರತೆಯನ್ನು ಸ್ವಲ್ಪ ಪ್ರಮಾಣದಲ್ಲಿ ಕಡಿಮೆ ಮಾಡಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ), ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ), ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ) ನಾಲ್ಕು ನಿಗಮಗಳಲ್ಲಿ ಡ್ರೈವರ್ ಗಳ ಕೊರತೆ ಇದೆ.

ನಿಗಮದ ಉನ್ನತ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ ಈ ಬಗ್ಗೆ ಮಾಹಿತಿ ನೀಡಿದ್ದು ಬಿಎಂಟಿಸಿ ಸೇರಿ ಚಾಲಕರನ್ನು ಒಳಗೊಂಡಂತೆ 15,000 ಕ್ಕೂ ಹೆಚ್ಚು ಸಿಬ್ಬಂದಿ ಕೊರತೆಯಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿಯಲ್ಲಿ ತಿಳಿಸಿದೆ.
ಶಕ್ತಿ ಯೋಜನೆಯಿಂದ ಮತ್ತಷ್ಟು ಸಂಕಷ್ಟ
"ಚಾಲಕರು ಸೇರಿದಂತೆ ಸಿಬ್ಬಂದಿ ಕೊರತೆಯಿಂದಾಗಿ ಮೊದಲಿಂದ ಸಮಸ್ಯೆ ಇತ್ತು. ಆದರೆ ಜೂನ್ನಲ್ಲಿ ಶಕ್ತಿ ಯೋಜನೆ ಪ್ರಾರಂಭವಾದ ನಂತರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಉತ್ತಮ ಸೇವೆ ನೀಡುವುದು ಕಷ್ಟವಾಗುತ್ತಿದೆ. ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ. ಹಾಗಾಗಿ ಬಸ್ ನಿಗಮಕ್ಕೆ (ಕೆಎಸ್ಆರ್ಟಿಸಿ) ಕೂಡಲೇ ಚಾಲಕರು ಬೇಕಾಗಿದ್ದು, ಇ-ಟೆಂಡರ್ ಪ್ರಕ್ರಿಯೆ ಮೂಲಕ ಖಾಸಗಿ ಏಜೆನ್ಸಿಗೆ ಈ ಕಾರ್ಯವನ್ನು ಹಸ್ತಾಂತರಿಸಲಾಗುವುದು,' ಎಂದು ಏಜೆನ್ಸಿ ಮೂಲಕ ನೇಮಕಗೊಂಡ ಚಾಲಕರಿಗೆ ಯಾವುದೇ ಪ್ರೋತ್ಸಾಹ ನೀಡಲಾಗುವುದಿಲ್ಲ" ಎಂದು ಅಧಿಕಾರಿ ಹೇಳಿದರು.
ನೇಮಕಗೊಂಡ ಚಾಲಕರು ತಕ್ಷಣವೇ ಬಸ್ಗಳನ್ನು ಚಲಾಯಿಸಲು ಅನುಮತಿ ನೀಡುವುದಿಲ್ಲ. ಬಸ್ ಕಾರ್ಪೊರೇಷನ್ಗೆ ಸೇರಿಸಿಕೊಳ್ಳುವ ಮೊದಲು ಅವರನ್ನು ಹಲವಾರು ಸುತ್ತಿನ ಪರೀಕ್ಷೆಗಳು ಮತ್ತು ತರಬೇತಿಯ ಮೂಲಕ ಇರಿಸಲಾಗುತ್ತದೆ. ಈ ತರಬೇತಿ ಎರಡು ತಿಂಗಳ ಕಾಲ ನಡೆಯಲಿದೆ.
ನಂತರ ರಾಜ್ಯಾದ್ಯಂತ ಇರುವ ಕೊರತೆಯ ಆಧಾರದ ಮೇಲೆ ಅವರನ್ನು ಮಂಗಳೂರು ಮತ್ತು ರಾಮನಗರದಂತಹ ವಿವಿಧ ವಿಭಾಗಗಳಿಗೆ ನಿಯೋಜಿಸಲಾಗುವುದು ಎಂದು ಅಧಿಕಾರಿ ಹೇಳಿದರು, ಅವರು 11 ತಿಂಗಳ ಅವಧಿಗೆ ಸುಮಾರು 500 ಚಾಲಕರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಶಕ್ತಿ ಯೋಜನೆ ಜಾರಿ ನಂತರ ಇನ್ನಷ್ಟು ಹೊಸ ಬಸ್ ಖರೀದಿ ಮಾಡಲು ನಿಗಮ ಮುಂದಾಗಿದ್ದು, ಮತ್ತಷ್ಟು ಸಿಬ್ಬಂದಿಯ ಅಗತ್ಯತೆ ಇದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದು, ಖಾಸಗಿ ಏಜೆನ್ಸಿಗಳಿಂದ ಡ್ರೈವರ್ ಗಳ ನೇಮಕಾತಿ ಕೇವಲ ತಾತ್ಕಾಲಿಕ ಮಾತ್ರ ಎಂದು ಸ್ಪಷ್ಟನೆ ನೀಡಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications