ದಸರಾ, ದೀಪಾವಳಿ ಹಬ್ಬ: ಕೆಎಸ್ಆರ್ಟಿಸಿಯಿಂದ 1000 ಹೆಚ್ಚುವರಿ ಬಸ್ಗಳ ಸಂಚಾರ
ಬೆಂಗಳೂರು, ಸೆಪ್ಟೆಂಬರ್ 22: ದಸರಾ ಮತ್ತು ದೀಪಾವಳಿ ಪ್ರಯುಕ್ತ ತಮ್ಮ ಊರುಗಳಿಗೆ ತೆರಳುವಂತಹ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ಒಂದು ಸಾವಿರ ಹೆಚ್ಚುವರಿ ಬಸ್ಗಳ ಸಂಚಾರ ಆರಂಭಿಸಲಿದೆ.
ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಹೀಗಾಗಿ ದಸರಾ ಸಂದರ್ಭದಲ್ಲಿ 1000 ಮತ್ತು ದೀಪಾವಳಿ ಸಂದರ್ಭದಲ್ಲಿ 1000 ಹೆಚ್ಚುವರಿ ಬಸ್ಗಳ ಸಂಚಾರ ನಡೆಸಲಾಗುತ್ತಿದೆ. ದಸರಾ ಅವಧಿಯಲ್ಲಿ ಅಕ್ಟೋಬರ್ 13ರಿಂದ 21 ರವರೆಗೆ ಮತ್ತು ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 7ರ ವರೆಗೆ ವಿಶೇಷ ಬಸ್ಗಳನ್ನು ಕಾರ್ಯಾಚರಣೆ ಇರುತ್ತದೆ.
ಹೆಚ್ಚುವರಿ ಬಸ್ಗಳು ಬೆಂಗಳೂರಿನಿಂದ ರಾಜ್ಯದೊಳಗಿನ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ ಬೀದರ್ ಮುಂತಾದ ಸ್ಥಳಗಳಿಗೆ ತೆರಳುತ್ತವೆ. ಇದಲ್ಲದೆ ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೂ ಬಸ್ಗಳ ಸಂಚಾರ ಇರಲಿದೆ.

ದರ ಹೆಚ್ಚಳ ಇಲ್ಲ:
ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ಗಳ ಸಂಚಾರ ಇರುತ್ತದೆಯಾದರೂ ಪ್ರಯಾಣದ ದರದಲ್ಲಿ ಯಾವುದೇ ಹೆಚ್ಚಳ ಇರುವುದರಿಲ್ಲ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ. ನಿಗಮದ ವೆಬ್ಸೈಟ್ www.ksrtc.karnataka.gov.in ಹಾಗೂ ಕರ್ನಾಟಕ ಹಾಗೂ ಇತರೆ ರಾಜ್ಯಗಳಲ್ಲಿ ಇರುವ ಬುಕಿಂಗ್ ಕೌಂಟರ್ಗಳಲ್ಲಿ ಮುಂಗಡ ಆಸನಗಳನ್ನು ಕಾಯ್ದಿರಿಸಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications