ಚುನಾವಣೆ, ರಜೆ : ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್
ಬೆಂಗಳೂರು, ಏಪ್ರಿಲ್ 17 : ಲೋಕಸಭಾ ಚುನಾವಣೆ, ಸಾಲು-ಸಾಲು ರಜೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳನ್ನು ಓಡಿಸಲಿದೆ. 3,300 ಬಸ್ಗಳನ್ನು ಚುನಾವಣಾ ಕಾರ್ಯಕ್ಕೆ ಸಂಸ್ಥೆ ನಿಯೋಜನೆ ಮಾಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಲೋಕಸಭಾ ಚುನಾವಣೆ ಮತ್ತು ಸಾಲು-ಸಾಲು ರಜೆ ಹಿನ್ನಲೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳಿಗೆ ಭಾರಿಬೇಡಿಕೆ ಇದೆ. ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಜನರು ತೆರಳಲಿದ್ದು, ದರಗಳನ್ನು ಹೆಚ್ಚಳ ಮಾಡಲಾಗಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕೆಎಸ್ಆರ್ಟಿಸಿ 3,300 ಬಸ್ಗಳನ್ನು ಚುನಾವಣಾ ಸಿಬ್ಬಂದಿಯ ಕಾರ್ಯಕ್ಕೆ ನಿಯೋಜನೆ ಮಾಡಿದೆ. ಜನದಟ್ಟಣೆ ಇಲ್ಲದ ಮಾರ್ಗಗಳಲ್ಲಿ ಸಂಚಾರ ನಡೆಸುವ ಬಸ್ಗಳನ್ನು ಜನದಟ್ಟಣೆ ಹೆಚ್ಚಿರುವ ಮಾರ್ಗಗಳಲ್ಲಿ ಓಡಿಸಲಾಗುತ್ತದೆ.
ಏ.16 ರಿಂದ 18ರ ತನಕ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ
ಉತ್ತರ ಕರ್ನಾಟಕ ಭಾಗದಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಆದ್ದರಿಂದ, ಆ ಭಾಗಗಳಲ್ಲಿ ಸಂಚಾರ ನಡೆಸುವ ಬಸ್ಗಳನ್ನು ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಿಗೆ ಬಳಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣಿಸುವ ಜನರ ಅನುಕೂಲಕ್ಕಾಗಿ 200 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳನ್ನು ಓಡಿಸಲಾಗುತ್ತದೆ. ಈಶಾನ್ಯ ಮತ್ತು ವಾಯುವ್ಯ ಸಾರಿಗೆ ನಿಗಮಗಳ ಬಸ್ಗಳನ್ನು ಬೆಂಗಳೂರಿಗೆ ಕರೆಸಲಾಗಿದೆ.
ಸಾಲು-ಸಾಲು
ರಜೆ
:
ಏಪ್ರಿಲ್
18ರಂದು
14
ಲೋಕಸಭಾ
ಕ್ಷೇತ್ರಗಳಲ್ಲಿ
ಮತದಾನ
ನಡೆಯಲಿದೆ.
*
ಏ.19
ರಂದು
ಗುಡ್
ಫ್ರೈಡೆ
*
ಏ.20
ರಂದು
ಶನಿವಾರ
*
ಏ.21ಭಾನುವಾರ