ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತರರಾಜ್ಯ ಬಸ್ ಸೇವೆ; ಕೆಎಸ್ಆರ್‌ಟಿಸಿ ಮಹತ್ವದ ಪ್ರಕಟಣೆ

|
Google Oneindia Kannada News

ಬೆಂಗಳೂರು, ಜೂನ್ 15 : ಅಂತರರಾಜ್ಯ ಬಸ್ ಸೇವೆ ಆರಂಭಿಸುವ ಕುರಿತು ಕೆಎಸ್ಆರ್‌ಟಿಸಿ ಮಹತ್ವದ ಪ್ರಕಟಣೆ ಹೊರಡಿಸಿದೆ. ಜೂನ್ 17ರಿಂದ ಆಂಧ್ರಪ್ರದೇಶಕ್ಕೆ ಬಸ್ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಘೋಷಣೆ ಮಾಡಿದೆ.

Recommended Video

ಮೈಮುಲ್ ಅಕ್ರಮದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ‌ ಸಾರಾ ಮಹೇಶ್ | Oneindia Kannada

ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಕುರಿತು ಪ್ರಕಟಣೆ ಹೊರಡಿಸಿದೆ. ಹಂತ-ಹಂತವಾಗಿ ಆಂಧ್ರಪ್ರದೇಶ ರಾಜ್ಯಕ್ಕೆ ಬಸ್‌ ಸೇವೆಯನ್ನು ಆರಂಭಿಸಲಾಗುತ್ತದೆ. ಮೊದಲ ಹಂತದ ಸೇವೆ ಜೂನ್ 17ರ ಬುಧವಾರ ಆರಂಭವಾಗಲಿದೆ ಎಂದು ಹೇಳಿದೆ.

ಬುಧವಾರದಿಂದ ಕರ್ನಾಟಕಕ್ಕೆ ಬರಲಿದೆ ಎಪಿಎಸ್ಆರ್‌ಟಿಸಿ ಬಸ್ ಬುಧವಾರದಿಂದ ಕರ್ನಾಟಕಕ್ಕೆ ಬರಲಿದೆ ಎಪಿಎಸ್ಆರ್‌ಟಿಸಿ ಬಸ್

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಆರಂಭಿಸಲಾಗಿದೆ. ಕೆಎಸ್ಆರ್‌ಟಿಸಿ ವೆಬ್ ಸೈಟ್, ನಿಗಮದ ಕೌಂಟರ್‌ಗಳಿಗೆ ಭೇಟಿ ನೀಡಿ ಟಿಕೆಟ್ ಕಾಯ್ದಿರಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಕರ್ಫ್ಯೂ ಸಮಯದಲ್ಲಿ ಬಸ್, ಆಟೋ,ಕ್ಯಾಬ್ ಓಡಾಟಕ್ಕೆ ಅನುಮತಿ ಕರ್ನಾಟಕದಲ್ಲಿ ಕರ್ಫ್ಯೂ ಸಮಯದಲ್ಲಿ ಬಸ್, ಆಟೋ,ಕ್ಯಾಬ್ ಓಡಾಟಕ್ಕೆ ಅನುಮತಿ

ಮಾರ್ಚ್‌ನಲ್ಲಿ ಲಾಕ್ ಡೌನ್ ಘೋಷಣೆಯಾದಾಗ ಅಂತರರಾಜ್ಯ ಬಸ್ ಸೇವೆಯನ್ನು ಕೆಎಸ್ಆರ್‌ಟಿಸಿ ನಿಲ್ಲಿಸಿತ್ತು. ಮೂರು ತಿಂಗಳ ಬಳಿಕ ಪುನಃ ಹಂತ-ಹಂತವಾಗಿ ಅಂತರರಾಜ್ಯ ಬಸ್‌ ಸೇವೆಗಳನ್ನು ನಿಗಮ ಆರಂಭ ಮಾಡುತ್ತಿದೆ.

ಅಂತರರಾಜ್ಯ ಬಸ್ ಸಂಚಾರಕ್ಕೆ ಕರ್ನಾಟಕ ಸರ್ಕಾರ ಸಿದ್ಧತೆ- ಲಕ್ಷ್ಮಣ ಸವದಿಅಂತರರಾಜ್ಯ ಬಸ್ ಸಂಚಾರಕ್ಕೆ ಕರ್ನಾಟಕ ಸರ್ಕಾರ ಸಿದ್ಧತೆ- ಲಕ್ಷ್ಮಣ ಸವದಿ

ಅಂತರರಾಜ್ಯ ಬಸ್ ಸೇವೆ

ಅಂತರರಾಜ್ಯ ಬಸ್ ಸೇವೆ

ಬೆಂಗಳೂರು ನಗರದಿಂದ ಅನಂತಪುರ, ಹಿಂದೂಪುರ, ಕದ್ರಿ, ಪುಟ್ಟಪರ್ತಿ, ಕಲ್ಯಾಣದುರ್ಗ, ರಾಯದುರ್ಗ, ಕಡಪ, ಪ್ರೂದತ್ತೂರು, ಮಂತ್ರಾಲಯ, ತಿರುಪತಿ, ಚಿತ್ತೂರು, ಮದನಪಲ್ಲಿ, ನೆಲ್ಲೂರು ಮತ್ತು ವಿಜಯವಾಡಕ್ಕೆ ಬಸ್‌ ಸಂಚಾರ ನಡೆಸಲಿವೆ.

ಜಿಲ್ಲೆಗಳಿಂದಲೂ ಬಸ್

ಜಿಲ್ಲೆಗಳಿಂದಲೂ ಬಸ್

ಬಳ್ಳಾರಿ ಜಿಲ್ಲೆಯಿಂದ ವಿಜಯವಾಡ, ಅನಂತಪುರ, ಕರ್ನೂಲ್ ಮತ್ತು ಮಂತ್ರಾಲಯಕ್ಕೆ ಬಸ್ ಸಂಚಾರ ನಡೆಸಲಿದೆ. ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್ ಸಂಚಾರ ನಡೆಸಲಿದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ. ಶಾಹಪುರದಿಂದ ಮಂತ್ರಾಲಯ ಮತ್ತು ಕರ್ನೂಲ್‌ಗೆ ಬಸ್ ಸಂಚಾರ ನಡೆಸಲಿದೆ.

ಆಂಧ್ರದಿಂದಲೂ ಬಸ್ ಸೇವೆ

ಆಂಧ್ರದಿಂದಲೂ ಬಸ್ ಸೇವೆ

ಅತ್ತ ಆಂಧ್ರಪ್ರದೇಶದ ಸಾರಿಗೆ ನಿಗಮ ಸಹ ಜೂನ್ 17ರಿಂದ ಅಂತರರಾಜ್ಯ ಬಸ್ ಸೇವೆ ಆರಂಭಿಸಲಾಗುತ್ತದೆ ಎಂದು ಘೋಷಣೆ ಮಾಡಿದೆ. ಕರ್ನೂಲ್, ಚಿತ್ತೂರು, ಅನಂತಪುರ ಸೇರಿದಂತೆ ಜಿಲ್ಲಾ ಕೇಂದ್ರಗಳಿಂದ ಕರ್ನಾಟಕಕ್ಕೆ ಬಸ್ ಸಂಚಾರ ಆರಂಭವಾಗಲಿದೆ.

ಪ್ರಯಾಣಿಕರಿಗೆ ಸೂಚನೆ

ಪ್ರಯಾಣಿಕರಿಗೆ ಸೂಚನೆ

ಅಂತರರಾಜ್ಯ ಬಸ್‌ಗಳಲ್ಲಿ ಸಂಚಾರ ನಡೆಸುವಾಗಲೂ ಸಾಮಾಜಿಕ ಅಂತರ ಕಾಪಾಡಬೇಕು. ಬಸ್ ಹತ್ತುವಾಗ ಮತ್ತು ಇಳಿಯುವಾಗ ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಬಸ್‌ನಲ್ಲಿ ಸಂಚಾರ ನಡೆಸುವಾಗಲೂ ಮಾಸ್ಕ ಬಳಕೆ ಕಡ್ಡಾಯವಾಗಿದೆ.

English summary
Karnataka State Road Transport Corporation (KSRTC) announced that it will resume operations to Andhra Pradesh state from June 17, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X