Breaking; ಗದಗಕ್ಕೆ 'ಐರಾವತ' ಬಸ್ ಸೇವೆ, ಬಿ. ಶ್ರೀರಾಮುಲು ಘೋಷಣೆ
ಬೆಂಗಳೂರು, ಜನವರಿ 05; ಮಾಜಿ ಕ್ರಿಕೆಟಿಗನ ಬೇಡಿಕೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಂದಿಸಿದ್ದಾರೆ. ಜನವರಿ 9ರಿಂದಲೇ ಬೆಂಗಳೂರಿನಿಂದ ವೊಲ್ವೋ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ.
ಗುರುವಾರ ಸಾರಿಗೆ ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿದ್ದಾರೆ. ಬೆಂಗಳೂರು ನಗರದಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭ ಮಾಡುವುದಾಗಿ ಹೇಳಿದ್ದಾರೆ.
ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಕರ್ನಾಟಕದ ಮುಖ್ಯಮಂತ್ರಿಗಳ ಖಾತೆ, ಬಸವರಾಜ ಬೊಮ್ಮಾಯಿ ವೈಯಕ್ತಿಕ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.

ನನ್ನ ವಿನಯ ಪೂರ್ವಕ ಮನವಿ ಬೆಂಗಳೂರಿನಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭವಾಗಬೇಕು. ಇದಕ್ಕಾಗಿ ನಾವು 25 ವರ್ಷಗಳಿಂದ ಕಾಯುತ್ತಿದ್ದೇವೆ. ಇದು 'ಐರಾವತ' ಬಸ್ ಗದಗಕ್ಕೆ ಬರುವ ಸಮಯ ಎಂದು ಹೇಳಿದ್ದರು.
ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಬಿ. ಶ್ರೀರಾಮುಲು ನಾವು ಜನರ ಸೇವೆಗಾಗಿಯೇ ಇದ್ದೇವೆ. ಜನವರಿ 9ರ ಸೋಮವಾರದಿಂದಲೇ ಕೆಎಸ್ಆರ್ಟಿಸಿ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
Always in the service of people.. Starting this Monday, KSRTC to
— B Sriramulu (@sriramulubjp) January 5, 2023
start Volvo services to Gadag, sacred land of Pujaniya "Puttajjoru", and a place close to my heart, and people who are always special to me.. @CMofKarnataka @BSBommai @SunilJoshi_Spin https://t.co/y1Si0MGs1V
ಪುಟ್ಟರಾಜ ಗವಾಯಿಗಳ ಪುಣ್ಯಭೂಮಿ, ನನ್ನ ಹೃದಯಕ್ಕೆ ಹತ್ತಿರವಾದ ಜನರಿಗಾಗಿ ಬಸ್ ಸೇವೆ ಆರಂಭಿಸಲಾಗುತ್ತದೆ ಎಂದು ಟ್ವೀಟ್ನಲ್ಲಿ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.
ಬಿ. ಶ್ರೀರಾಮುಲು ಹಿಂದೆ ಗದಗ ಜಿಲ್ಲಾ ಉಸ್ತುವಾರಿಯಾಗಿದ್ದರು. ಜಿಲ್ಲೆಯ ಮೇಲೆ ಅವರಿಗೆ ಅಪಾರವಾದ ಪ್ರೀತಿ ಇದೆ. ಕೆಲವು ದಿನಗಳ ಹಿಂದೆ ಗದಗದಲ್ಲಿ ವಾಯುವಿಹಾರ ಮಾಡುವಾಗ ಅಭಿಮಾನಿ ಕೋರಿಕೆಯಂತೆ ಆಟೋ ಓಡಿಸಿ ಗಮನ ಸೆಳೆದಿದ್ದರು.
ಈ ಕುರಿತು ಫೇಸ್ಬುಕ್ ಪೋಸ್ಟ್ ಹಾಕಿದ್ದ ಅವರು, "ಗದಗದಲ್ಲಿ ಬೆಳಗ್ಗೆ ವಾಯುವಿಹಾರಕ್ಕೆ ಹೊರಟ ವೇಳೆ ಆಕಸ್ಮಿಕವಾಗಿ ದಾರಿಮಧ್ಯೆ ಸಿಕ್ಕ ಅಭಿಮಾನಿಗಳು ಹಾಗೂ ಹಿತೈಷಿಗಳ ಉಭಯ ಕುಶಲೋಪಚಾರಿ ವಿಚಾರಿಸಲಾಯಿತು. ಇದೇ ವೇಳೆ ಅಭಿಮಾನಿಯೊಬ್ಬರ ಕೋರಿಕೆಯಂತೆ ಅವರ ಆಟೋವನ್ನು ಓಡಿಸಿ ಶುಭ ಕೋರಲಾಯಿತು" ಎಂದು ಹೇಳಿದ್ದರು.
"ಗದಗ ಜಿಲ್ಲೆಗೂ ನನಗೂ ಬಿಡಿಸಲಾಗದ ಅವಿನಾಭಾವ ಸಂಬಂಧವಿದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ವೇಳೆ ಇಲ್ಲಿನ ಜನತೆ ತೋರಿದ ಅಭಿಮಾನಕ್ಕೆ ನಾನು ಸದಾ ಕೃತಜ್ಞನಾಗಿದ್ದೇನೆ" ಎಂದು ತಿಳಿಸಿದ್ದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications