KSRTC ವರ್ಗಾವಣೆ: ಗುಡ್ ನ್ಯೂಸ್, ನೌಕರರ ಅಂತರ ನಿಗಮ ವರ್ಗಾವಣೆ ಘೋಷಣೆ, ಗಮನಿಸಿ
ಬೆಂಗಳೂರು, ಜುಲೈ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಸಾರಿಗೆ ಇಲಾಖೆಯು ಸಿಹಿ ಸುದ್ದಿ ನೀಡಿದೆ. ನಿಗದಿತ ಕಾರ್ಮಿಕರಿಗೆ ಕಳೆದ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಿಸಿರುವುದಾಗಿ ತಿಳಿಸಿದೆ.
ಹೌದು, ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ ಜುಲೈ 05ರ ಬೆಳಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದೆ. ಇದು ದಿನಾಂಕ 2024 ಡಿಸೆಂಬರ್ 31 ರ ಸಂಜೆ 5:30 ಗಂಟೆವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ.
ಸದರಿ ಪರಸ್ಪರ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್ಸೈಟ್ನಲ್ಲಿ ದಿನಾಂಕ 2024 ಜುಲೈ 06 ರಂದು ಪ್ರಕಟಿಸಲಾಗಿದೆ.
ನೌಕರರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಸದರಿ ಆದೇಶಕ್ಕೆ ದಿನಾಂಕ ಜುಲೈ 06ರಿಂದ ದಿನಾಂಕ ಜುಲೈ 10ರ ಸಂಜೆ 5.30 ಗಂಟೆವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶ ನೀಡಲಾಗಿದೆ. ನೌಕರರು ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು. ನೌಕರರು ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಛೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಈ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC)ಯ ಸಾವಿರಾರು ನೌಕರರ ಬಹುದಿನಗಳ ಅಂತರ ನಿಗಮ ವರ್ಗಾವಣೆಯ ಕನಸು ನನಸಾಗುವ ದಿನಗಳು ಸನಿಹವಾಗಿವೆ. ಅರ್ಹರು ಈ ಕೂಡಲೇ ನಿಗದಿತ ಸಮಯದೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications