KSRTC: ಮುಷ್ಕರ ಮಾಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಮಲಿಂಗಾ ರೆಡ್ಡಿ
ಬೆಂಗಳೂರು, ಮಾರ್ಚ್ 07: ವೇತನ ತಾರತಮ್ಯ ನಿವಾರಣೆ ಸೇರಿದಂತೆ ವರ್ಷಗಳಿಂದಲೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈ ಹಿಂದೆ ಮುಷ್ಕರ ಮಾಡಿದ್ದ ನಾಲ್ಕು ಸಾರಿಗೆ ನೌಕರರ ಸಂಘಟನೆಗಳ ಜತೆ ಸಾರಿಗೆ ರಾಮಲಿಂಗಾ ರೆಡ್ಡಿ ಅವರು ಗುರುವಾರ ಮಹತ್ವದ ಸಭೆ ನಡೆಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಎಸ್ ಆರ್ ಶ್ರೀನಿವಾಸ್ (ವಾಸು) ರವರ ಉಪಸ್ಥಿತಿಯಲ್ಲಿ ಹಾಗೂ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಾರಿಗೆ ನಿಗಮದ 11 ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಯಿತು. ಸಚಿವರು ಕುಂದು ಕೊರತೆಗಳನ್ನು ಆಲಿಸಿ ಸಿಹಿ ಸುದ್ದಿ ನೀಡಿದರು.

220 ಕೋಟಿ ಬಾಕಿ ಹಣ ಶೀಘ್ರ ಜಮೆ?
ಸಭೆಯಲ್ಲಿ ಸಮಸ್ಯೆ ಆಲಿಸಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಅಂತಿಮವಾಗಿ 01.01.2020 ರಿಂದ 28.02.2023ರ ವರೆಗಿನ ನಿವೃತ್ತಿ ಹೊಂದಿರುವ ಹಾಗೂ ಸಂಸ್ಥೆಯಿಂದ ಹೊರಗೆ ಹೋಗಿರುವ ಎಲ್ಲಾ ಅಂದಾಜು 10000 ನೌಕರರಿಗೂ ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ಸುಮಾರು ರೂ. 220 ಕೋಟಿ ಬಾಕಿ ಹಣ ನೀಡುವುದಾಗಿ ಅವರು ಭರವಸೆ ನೀಡಿದರು.
KSRTC ವ್ಯವಸ್ಥಾಪಕ ನಿರ್ದೇಶಕರಿಂದ ಕೂಡಲೇ ಆದೇಶ ಹೊರಡಿಸಲು ಸೂಚಿಸುತ್ತೇನೆ ಎಂದರು. ಈ ಕ್ರಮಕ್ಕಾಗಿ ಎಲ್ಲಾ ಸಂಘಟನೆಗಳು ವರ್ಷ ವ್ಯಕ್ತಪಡಿಸಿ, ಮಾನ್ಯ ಸಾರಿಗೆ ಸಚಿವರು, ಮಾನ್ಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.
ಆರ್ಥಿಕ ಪರಿಸ್ಥಿತಿ ನೋಡಿ ಸೂಕ್ತ ಕ್ರಮ
01.01.2024 ರಿಂದ ಮಾಡಬೇಕಾಗಿರುವ ವೇತನ ಹೆಚ್ಚಳದ ಬಗ್ಗೆ ಮಾತನಾಡಿದ ಸಚಿವರು, ಮುಂದಿನ ದಿನಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿ ಆದಾಯ ವೃದ್ಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗದುಕೊಂಡು ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಇಂದು ಮೊದಲ ಸಭೆಯಾಗಿರುವುದರಿಂದ ಮಹತ್ವದ ಆದೇಶ ಹೊರಬಿದ್ದಿದೆ. ಮುಂದಿನ ಸಭೆಗಳಲ್ಲಿ ಹಲವು ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಚರ್ಚೆ ಮಾಡಿ ಮುಂದುವರಿಯೋಣ. ಇದು ನಿಮ್ಮ ಸಂಸ್ಥೆ ಈ ಸಂಸ್ಥೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ.
ಸಾರಿಗೆ ಸೇವೆಗಾಗಿ ನೌಕರರ ಸಹಕಾರ ಕೋರಿದ ಸಚಿವ
ಸಾರಿಗೆ ಸಂಸ್ಥೆ ರಕ್ಷಣೆ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗಲು ತಮ್ಮೆಲ್ಲರ ಸಹಕಾರ ಬೇಕು ಎಂದು ಸಚಿವರು ಕೋರಿದರು.
ಸಭೆಯಲ್ಲಿ ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಬೇಡಿಕೆಗಳನ್ನು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು. ಮುಖ್ಯವಾಗಿ 01.01.2020 ರಿಂದ 28.02.2023 ರವರೆಗಿನ ವೇತನ ಬಾಕಿ ಹಣ, 01.01.2024 ರಿಂದ ಮೂಲ ವೇತನ ಹೆಚ್ಚಳ ಹಾಗೂ 01.01.2020 ರಿಂದ 28.02.2023ರ ವರೆಗಿನ ವೇತನ ಹೆಚ್ಚಳದ ಬಾಕಿಯನ್ನು ನಿವೃತ್ತ ಹಾಗೂ ಇತರೆ ಕಾರಣಗಳಿಂದ ಸಂಸ್ಥೆಗಳಿಂದ ಹೊರ ಹೋಗಿರುವ ನೌಕರರ ಹಾಗೂ ಇತರೆ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಚರ್ಚಿಸಿದರು.
ಸಭೆಯಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, BMTC ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, NWKRTC ವ್ಯವಸ್ಥಾಪಕ ನಿರ್ದೇಶಕ (ಹಿರಿಯ ಶ್ರೇಣಿ) ಎಂ.ರಾಚಪ್ಪ , KSRTC ನಿರ್ದೇಶಕಿ ಡಾ. ಕೆ ನಂದಿನಿದೇವಿ, ಸಾರಿಗೆ ನಿಗಮಗಳ ವಿವಿಧ ಅಧಿಕಾರಿಗಲು, ಮುಖ್ಯಸ್ಥರು ಉಪಸ್ಥಿತರಿದ್ದರು.
ನಿವೃತ್ತಿ ಹೊಂದಿದ ಎಲ್ಲ ನೌಕರರಿಗೆ ಬಾಕಿ ವೇತನ ಬಿಡುಗಡೆ ಮಾಡಲಾಗುವುದು ಎಂದಿರುವ ಸಚಿವರ ಹೇಳಿಕೆಗೆ ಹಾಲಿ ನೌಕರರಲ್ಲಿ ಕೆಲವು ಅಸಮಾಧಾನ ಹೊರ ಹಾಕಿದ್ದಾರೆ. ಹಾಲಿ ನೌಕರರಿಗೆ ಇದರಿಂದ ಅನ್ಯಾಯ ಎಂದು ಆರೋಪಿಸಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications