KSRTC: ತಂಬಾಕು ಉತ್ಪನ್ನಗಳಿಗೆ ಸಂಬಂಧಿಸದ ಜಾಹೀರಾತು ತೆಗೆಯುವ ಕಿಡಿಗೇಡಿಗಳ ವಿರುದ್ಧ ಎಫ್ಐಆರ್
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಸಾರಿಗೆ ಬಸ್ಗಳ ಹೊರ ಭಾಗದಲ್ಲಿ ಅಳವಡಿಸಿದ್ದ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧಿಸಿದ್ದ ಸರ್ಕಾರ ತೆರವಿಗೆ ಎರಡು ವಾರಗಳ ಗಡುವು ನೀಡಿತ್ತು. ಇದೀಗ ನಿಯಮಗಳನ್ವಯ ಜಾಹೀರಾತು ಅಳವಡಿಕೆಯು ಸಾರಿಗೇತರ ಆದಾಯ ಮೂಲವಾಗಿದೆ. ಬಸ್ಸುಗಳಲ್ಲಿನ ತಂಬಾಕು ಜಾಹೀರಾತು ಹೊರತುಪಡಿಸಿ ಇತರ ಸದುದ್ದೇಶಗಳ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಇತ್ತೀಚೆಗೆ ಬಸ್ಗಳ ಮೇಲೆ ಅಳವಡಿಸಿದ್ದ ಸಿಗರೇಟ್, ಪಾನ್ ಮಸಾಲ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಸಾರ್ವಜನಿಕರು, ಕನ್ನಡ ಪರ ಸಂಘಟನೆಗಳು ತೆರವು ಮಾಡಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಒಂದು ರೀತಿಯ ಅಭಿಯಾನ ಆರಂಭವಾಗಿತ್ತು. ಅದರ ಬೆನ್ನಲ್ಲೆ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಸ್ಗಳ ಮೇಲೆ ಜಾಹೀರಾತು ಅಳವಡಿಕೆ ನಿರ್ಬಂಧಿಸಿ ಆದೇಶಿಸಿದ್ದರು. ಆ ಜಾಹೀರಾತುಗಳ ತೆರವಿಗೆ ಫೆಬ್ರವರಿ 18ರವರೆಗೆ ಗಡುವು ನೀಡಲಾಗಿತ್ತು. ಇದು ಸಾರ್ವಜನಿಕರ ಆಕ್ರೋಶಕ್ಕೆ ಸಿಕ್ಕ ಜಯ ಎಂದು ಬಣ್ಣಿಸಲಾಗಿತ್ತು.

ಜಾಹೀರಾತು ಅಕ್ರಮ ತೆರವು ಅಪರಾಧ
ಆದರೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೀಡಿರುವ ಟಿಪ್ಪಣಿಯಲ್ಲಿ ಬಸ್ಸುಗಳಲ್ಲಿನ ತಂಬಾಕು ಸಂಬಂಧಿತ ಜಾಹೀರಾತುಗಳನ್ನು ಅಧಿಕಾರಿಗಳೇ ತೆರವುಗೊಳಿಸುತ್ತಿದ್ದಾರೆ. ಆದರೆ ತಂಬಾಕು ಉತ್ಪನ್ನ ಅಲ್ಲದ ವಿಷಯಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಕೆಲವರು ಅಕ್ರಮವಾಗಿ ತೆರವು ಮಾಡುತ್ತಿರುವುದು ಸಾರಿಗೆ ಸಂಸ್ಥೆಗೆ ಗೊತ್ತಾಗಿದೆ. ಸಾರ್ವಜನಿಕರು ಹೀಗೆ ಅಕ್ರಮವಾಗಿ ತೆರವುಗೊಸಿದನ್ನು ಅಪರಾಧ ಎಂದಿದೆ. ಅವರ ಬಗ್ಗೆ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಹೌದು, ಕೆಎಸ್ಆರ್ಟಿಸಿ ನೀಡಿದ ಮಾಹಿತಿಯಲ್ಲಿ 'ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ನಿಗಮದ ಸಾರಿಗೇತರ ಆದಾಯ ಹೆಚ್ಚಿಸಲು ಹಲವಾರು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಾರಿಗೆ ಮತ್ತು ಮುಜರಾಯಿ ಸಚಿವರ ಟಿಪ್ಪಣಿಯಂತೆ, ಬಸ್ಸುಗಳ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ದಿನಾಂಕ 15-02-2026 ರೊಳಗಾಗಿ ತೆರವುಗೊಳಿಸಲು ಈಗಾಗಲೇ ಸೂಚನೆ ನೀಡಿದ್ದಾರೆ.
ಜಾಹೀರಾತಿಗೆ ಅವಕಾಶ ಇದೆ: ಆಕ್ಷೇಪಣೆ ಸಲ್ಲಿಸಿ
ನಿಗಮದ ಬಸ್ಸುಗಳ ಮೇಲೆ Advertisement Standard Council of India Code (ASCI Code) ನಿಯಮಾವಳಿಗಳನ್ವಯ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶವಿರುತ್ತದೆ. ನಿಗಮದ ವಾಹನಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತುಗಳು ನಿಗಮಕ್ಕೆ ಸಾರಿಗೇತರ ಆದಾಯದ ಮೂಲವಾಗಿರುತ್ತದೆ. ಆದಾಗ್ಯೂ, ನಿಗಮದ ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಇತರ ಜಾಹೀರಾತಿನ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ/ದೂರುಗಳು ಇದ್ದಲ್ಲಿ, ಲಿಖಿತ ಮನವಿಯನ್ನು ಪಡೆದು, ಈ ಸಂಬಂಧ ಕರಾರಿನ ನಿಯಮಾವಳಿಯಂತೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದು.
ಆದರೆ, ಕೆಲವು ವ್ಯಕ್ತಿಗಳು ಸಾರ್ವಜನಿಕ ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ. ಅಂತಹ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ FIR ದಾಖಲಿಸಿ, ಎಲ್ಲಾ ರೀತಿಯ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದೆ'' ಎಂದು ತಿಳಿಸಿದೆ.
ಅಲ್ಲದೇ ಬಸ್ ನಿಲ್ದಾಣದ ಸಿಬ್ಬಂದಿಗಳು, ಚಾಲನಾ ಸಿಬ್ಬಂದಿಗಳು ಹಾಗೂ ಇತರೆ ಸಿಬ್ಬಂದಿಗಳಿಗೂ ಈ ಸಂಬಂಧ ಸೂಕ್ತ ತಿಳುವಳಿಕೆ /ನಿರ್ದೇಶನ ನೀಡಬೇಕು. ಜೊತೆಗೆ ಈ ಮೇಲ್ಕಂಡ ಅಂಶಗಳ ಸಂಬಂಧ ಅಗತ್ಯ ಕ್ರಮ ಕೈಗೊಂಡಿದ್ದರ ಕುರಿತು ಅಗತ್ಯ ವರದಿ ನೀಡುವಂತೆ ಸಾರಿಗೆ ಸಂಸ್ಥೆ ತಿಳಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications