ಚಳಿಗಾಲದ ವಿಶೇಷ ಪ್ಯಾಕೇಜ್ : ಗೋವಾ ಗೋಕರ್ಣ ಪ್ರವಾಸಕ್ಕೆ ತೆರಳಿ
ಬೆಂಗಳೂರು, ಸೆ18: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರಿಗೆ ರಾಜ್ಯ ಹಾಗೂ ಅಂತಾರಾಜ್ಯದ ವಿವಿಧ ಪ್ರವಾಸಿ ತಾಣಗಳಿಗೆ ವ್ಯವಸ್ಥಿತ ಪ್ರವಾಸಗಳನ್ನು ಏರ್ಪಡಿಸಿದ್ದು, ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.
ಈ ನಿಟ್ಟಿನಲ್ಲಿ ನಿಗಮವು ಮುಂಬರುವ ಋತುಮಾನ ದಿನಗಳಲ್ಲಿ ಅಂದರೆ ಅಕ್ಟೋಬರ್-ಜನವರಿ ತಿಂಗಳಲ್ಲಿ ಉತ್ತರ ಕರ್ನಾಟಕ ಪಾರಂಪರಿಕ ಸ್ಥಳಗಳಿಗೆ 05 ದಿನಗಳ ವ್ಯವಸ್ಥಿತ ಪ್ರವಾಸವನ್ನು ಆಯೋಜಿಸುತ್ತಿದೆ, ಈ ಪ್ರವಾಸವು ಪ್ರತಿ ಗುರುವಾರ ಆರಂಭವಾಗಿ ಸೋಮವಾರ ಬೆಳಿಗ್ಗೆ ಕೊನೆಗೊಳ್ಳುತ್ತದೆ. ಸದರಿ ಪ್ರವಾಸಕ್ಕೆ ಒಬ್ಬರಿಗೆ ರೂ.5170/- (ಸಾರಿಗೆ ಮತ್ತು ವಸತಿ ಸೌಲಭ್ಯ ಸೇರಿ) ಆಗಲಿದೆ.
ಸಮುದ್ರತೀರ ಪ್ರವಾಸವಾಗಿ ಗೋವಾ-ಗೋಕರ್ಣಕ್ಕೆ ಪ್ರವಾಸವನ್ನು ಅಯೋಜಿಸಲಿದ್ದು, ಇದು 05 ದಿನಗಳ ಪ್ರವಾಸವಾಗಿರುತ್ತದೆ. ಈ ಪ್ರವಾಸವು ಪ್ರತಿ ಗುರುವಾರ ಆರಂಭವಾಗಿ ಸೋಮವಾರ ಬೆಳಿಗ್ಗೆ ಕೊನೆಗೊಳ್ಳುತ್ತದೆ. ಸದರಿ ಪ್ರವಾಸಕ್ಕೆ ಒಬ್ಬರಿಗೆ ರೂ. 6599/- (ಸಾರಿಗೆ ಮತ್ತು ವಸತಿ ಸೌಲಭ್ಯ ಸೇರಿ) ಆಗಲಿದೆ.

ಈ ಪ್ರವಾಸಗಳನ್ನು ಎ.ಸಿ ಡಿಲಕ್ಸ್ ವಾಹನ ಸೌಲಭ್ಯದೊಂದಿಗೆ ಆಚರಿಸುತ್ತಿದ್ದು, ಮುಂಗಡ ಬುಕ್ಕಿಂಗ್ ವ್ಯವಸ್ಥೆಯನ್ನು ನಿಗಮದ ಬುಕ್ಕಿಂಗ್ ಕೌಂಟರ್ ಗಳು ಕೆ.ಎಸ್.ಆರ್.ಟಿ.ಸಿ ಅವತಾರ್ ಪೋರ್ಟಕ್ ಹಾಗೂ ರೆಡ್ಬಸ್ ಪೋರ್ಟಲ್ ಮುಖಾಂತರ ಮಾಡಲಾಗುತ್ತಿದೆ.
ಪ್ರವಾಸದ ಬುಕ್ಕಿಂಗ್ಗಾಗಿ ಯಶವಂತಪುರದಲ್ಲಿರುವ ಪ್ರಧಾನ ಬುಕ್ಕಿಂಗ್ ಕೇಂದ್ರವನ್ನು ಹಾಗೂ ಕೆಂಪೇಗೌಡ ಬಸ್ನಿಲ್ದಾಣದಲ್ಲಿನ ನಿಗಮದ ಕೌಂಟರನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ, ನಿಗಮದ ಅಧಿಕೃತ ಏಜೆಂಟ್ ಮುಖಾಂತರ ಬುಕ್ಕಿಂಗ್ ಮಾಡಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ. ಆನ್ಲೈನ್ ಬುಕ್ಕಿಂಗ್ www.kstdc.comಗೆ ಭೇಟಿ ನೀಡಬಹುದು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications